Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆ ರೈತ ಸಹಕಾರ ಫೈನಲ್ ಭರ್ಜರಿ ಮತಯಾಚನೆ

ಅಥಣಿ,: ಕಳೆದ 20 ವರ್ಷಗಳಿಂದ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಬಲಿಷ್ಠ ಗೊಳಿಸಲು ಹಾಗೂ ಅಭಿವೃದ್ಧಿ ಗಾಗಿ ಶಾಸಕ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದ್ದು ಈ ಬಾರಿ ಆಡಳಿತ ಮಂಡಳಿಯ ಚುನಾವಣೆಯಲ್ಲಿ ರೈತ ಸಹಕಾರ ಪ್ಯಾನೆಲ್ ಬೆಂಬಲಿಸುವಂತೆ ಅಥಣಿ ಪಟ್ಟಣದ ಶೇರುದಾರ ಮತದಾರರಲ್ಲಿ ಮತ ಯಾಚನೆ ನಡೆಸಿ ಇನ್ನೊಂದು ಬಾರಿ ಅವಕಾಶ ನೀಡುವಂತೆ ಮಲ್ಲೇಶ್ ಸವದಿ ಮನವಿ ಮಾಡಿದರು

ಅಥಣಿ ಪಟ್ಟಣದಲ್ಲಿ ಶುಕ್ರವಾರ ನಡೆದ ಮತಯಾಚನೆ ಪಾದಯಾತ್ರೆ, ನೇತೃತ್ವ ವಹಿಸಿದ್ದ ಮಲ್ಲೇಶ್ ಸವದಿ ಹಾಗೂ ಶಿವಕುಮಾರ್ ಸವದಿ ಅವರ ಸಮ್ಮುಖದಲ್ಲಿ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಮತದಾರರಲ್ಲಿ ರೈತ ಸಹಕಾರ ಪ್ಯಾನಲ್ಗೆ ಬೆಂಬಲಿಸುವಂತೆ ಮತದಾರರಲ್ಲಿ ಮತಯಾಚನೆ ಮಾಡಿದರು

ಈ ವೇಳೆ ಮಾತನಾಡಿದ ಮುಖಂಡ ಶಿವಕುಮಾರ್ ಸವದಿ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆ, ಕಳೆದ 20 ವರ್ಷಗಳಲ್ಲಿ ವಿವಿಧ ಹಂತಗಳಲ್ಲಿ ಅಭಿವೃದ್ಧಿಯನ್ನು ಕಂಡಿದೆ ಮುಂಬರುವ ದಿನಗಳಲ್ಲಿ ಸಕ್ಕರೆ ಕಾರ್ಖಾನೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ರೈತ ಸಹಕಾರಿ ಪ್ಯಾನಲ್ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ. ಅಲ್ಲದೆ ಕಾರ್ಖಾನೆ ವಿವಿಧ ವಿಭಾಗಗಳಲ್ಲಿ ರಾಷ್ಟ್ರ ಮತ್ತು ರಾಜ್ಯಮಟ್ಟದ ಪ್ರಶಸ್ತಿಗಳನ್ನು ಗಳಿಸಿ ರೈತರ ವಿಶ್ವಾಸಕ್ಕೆ ಪಾತ್ರವಾಗಿದೆ. ರಾಜ್ಯದಲ್ಲಿ ಅತ್ಯಂತ ಹೆಚ್ಚಿನ ಬೆಲೆಯನ್ನು ರೈತರ ಕಬ್ಬಿಗೆ ನೀಡಿದ ಹೆಗ್ಗಳಿಕೆ ನಮ್ಮ ಆಡಳಿತ ಮಂಡಳಿಗೆ ಇದೆ. ಸದ್ಯ ನಡೆಯುತ್ತಿರುವ ಆಡಳಿತ ಮಂಡಳಿಯ ಚುನಾವಣೆಯಲ್ಲಿ ರೈತ ಸಹಕಾರ ಪ್ಯಾನಲ್ಗೆ ಅದ್ಭುತ ಬೆಂಬಲವನ್ನು ನೀಡಿ ಸಹಕರಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು
ಈ ವೇಳೆ ಪುರಸಭೆ ಸ್ಥಾಯಿ ಸಮಿತಿ ಅದ್ಯಕ್ಷ ದತ್ತಾ ವಾಸ್ಟರ್, ಸದಸ್ಯರಾದ ಸಂತೋಷ ಸಾವಡಕರ, ರಾಜೂ ಗುಡೋಡಗಿ,ಸೈಯದ್ ಅಮೀನ ಗದಯಾಳ, ವಿಲೀನರಾಜ ಯಳಮಲ್ಲೆ, ಮಲ್ಲು ಹುದ್ದಾರ, ಮುಸ್ತಾಕ ಮುಲ್ಲಾ, ಬಸು ನಾಯಿಕ, ಬಸವರಾಜ ಪಾಟೀಲ, ಮುಖಂಡರಾದ ಮಹಾಂತೇಶ ಬಾಡಗಿ, ರವಿ ಬಡಕಂಬಿ, ಸುಂದರ ಸೌದಾಗರ, ಹರೀಶ ವರಲ್ಯಾಣಿ, ಅಬ್ದುಲ್ ಮುಲ್ಲಾ, ವಿಕಾಸ ರಾಠೋಡ, ರಮೇಶ ಪಟ್ಟಣ, ಆಸೀಪ್ ತಾಂಬೋಳಿ, ರಾಜೂ ಬುಲಬುಲೆ, ಶ್ರೀ ಶೈಲ ನಾಯಿಕ,ಶ್ರೀ ಶೈಲ ಹಳದಮಾಳ ಸೇರಿದಂತಡ ಹಲವು ಮುಖಂಡರು ಉಪಸ್ಥಿತರಿದ್ದರು

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ