Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿ ಫೋಟೋ ಬಳಕೆಗೆ ನನಗೆ ಅವಕಾಶ ಸಿಕ್ಕಿದೆ: ಕೆಎಸ್ ಈಶ್ವರಪ್ಪ

ಶಿವಮೊಗ್ಗ02: ಮೋದಿ ಫೋಟೊ ಬಳಕೆಗೆ ನನಗೆ ಅವಕಾಶ ಸಿಕ್ಕಿದ್ದು, ದೂರು ನೀಡಿದ್ದವರಿಗೆ ಮುಖಭಂಗವಾಗಿದೆ ಎಂದು ಕೆಎಸ್ ಈಶ್ವರಪ್ಪ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನರೇಂದ್ರ ಮೋದಿ ಫೋಟೋ ಬಳಸಬಾರದು ಎಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆದರೆ, ಇದೀಗ ಮೋದಿ ಫೋಟೋ ಬಳಸಬೇಡಿ ಎಂದು ದೂರು ನೀಡಿದವರಿಗೆ ಮುಖಭಂಗವಾಗಿದೆ. ಮೋದಿಯವರ ಫೋಟೋ ಬಳಕೆಗೆ ನನಗೆ ಅಧಿಕಾರ ಸಿಕ್ಕಿದೆ. ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡುತ್ತೇನೆ. ಈ ಚುನಾವಣೆಯಲ್ಲಿ ಜೀವನ ಪೂರ್ತಿ ಅವರ ಫೋಟೋ ಬಳಸುತ್ತೇನೆ. ನರೇಂದ್ರ ಮೋದಿಯವರ ವಿಚಾರಧಾರೆಯನ್ನು ನಾನು ಎಲ್ಲರಿಗೂ ತಿಳಿಸುತ್ತೇನೆ ಎಂದು ಹೇಳಿದರು.

ಬಹಳ ಸಂತೋಷದ ವಿಷಯವೆಂದರೆ ವಿಶ್ವ ನಾಯಕ ನನ್ನ ಜೊತೆ ಉಳಿದಿರುವುದು. ನರೇಂದ್ರ ಮೋದಿ‌ ನನ್ನ ಜೊತೆ ಉಳಿದರೆ ಅದೇ ನನಗೆ ಆನಂದ. ಈಶ್ವರಪ್ಪ ಮೋದಿ ಪೋಟೋ ಬಳಸುತ್ತಿದ್ದಾರೆಂದು ಬಿಜೆಪಿಯವರು ‌ಕೋರ್ಟ್​​​​ಗೆ ಹೋಗಿದ್ದರು. ಚುನಾವಣಾ ಆಯೋಗ, ಕೋರ್ಟ್ ಅವರಿಗೆ ಸೊಪ್ಪು ಹಾಕಲಿಲ್ಲ. ಮೋದಿ ಅವರನ್ನು ನನ್ನ ಹೃದಯದಲ್ಲಿ ‌ಇಟ್ಟುಕೊಂಡಿದ್ದೇನೆ. ಮೋದಿಯವರಿಗೆ ಅಪಮಾನ ಮಾಡಬಾರದು. ಗಣಪತಿ, ಈಶ್ವರನನ್ನು ಎಲ್ಲರೂ ಪೂಜೆ ಮಾಡುತ್ತಾರೆ. ನಿಮ್ಮ ಮನೆಯಲ್ಲಿ ಪೋಟೋ ‌ಇಟ್ಟುಕೊಳ್ಳಬೇಡಿ‌ ಅಂದರೆ ಹೇಗೆ? ಮೋದಿ ಅವರು ನನಗೆ ಮಾದರಿ ವ್ಯಕ್ತಿ, ಆದರ್ಶ ವ್ಯಕ್ತಿ. ನನ್ನ ಜೀವನಪೂರ್ತಿ ಮೋದಿ ಪೋಟೋ ಇಟ್ಟುಕೊಳ್ಳುತ್ತೇನೆ. ಯಾವುದೇ ಪಕ್ಷ ಅಥವಾ ವ್ಯಕ್ತಿ ನನ್ನನ್ನು ಮೋದಿಯವರಿಂದ ಬೇರ್ಪಡಿಸಲು ಸಾಧ್ಯವಿಲ್ಲ. ನರೇಂದ್ರ ಮೋದಿ ಪೋಟೋ ‌ಬಳಸಲು ಹಿಂದೂ ಸಮಾಜಕ್ಕೆ ಅವಕಾಶ ಇದೆ. ನಾನು ಚುನಾವಣೆಗೆ ‌ಪೂರ್ಣ ಪ್ರಮಾಣದಲ್ಲಿ ‌ಮೋದಿ ಪೋಟೋ ಬಳಸುತ್ತೇನೆಂದು ತಿಳಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*