Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿ ಫೋಟೋ ಬಳಕೆಗೆ ನನಗೆ ಅವಕಾಶ ಸಿಕ್ಕಿದೆ: ಕೆಎಸ್ ಈಶ್ವರಪ್ಪ

ಶಿವಮೊಗ್ಗ02: ಮೋದಿ ಫೋಟೊ ಬಳಕೆಗೆ ನನಗೆ ಅವಕಾಶ ಸಿಕ್ಕಿದ್ದು, ದೂರು ನೀಡಿದ್ದವರಿಗೆ ಮುಖಭಂಗವಾಗಿದೆ ಎಂದು ಕೆಎಸ್ ಈಶ್ವರಪ್ಪ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನರೇಂದ್ರ ಮೋದಿ ಫೋಟೋ ಬಳಸಬಾರದು ಎಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆದರೆ, ಇದೀಗ ಮೋದಿ ಫೋಟೋ ಬಳಸಬೇಡಿ ಎಂದು ದೂರು ನೀಡಿದವರಿಗೆ ಮುಖಭಂಗವಾಗಿದೆ. ಮೋದಿಯವರ ಫೋಟೋ ಬಳಕೆಗೆ ನನಗೆ ಅಧಿಕಾರ ಸಿಕ್ಕಿದೆ. ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡುತ್ತೇನೆ. ಈ ಚುನಾವಣೆಯಲ್ಲಿ ಜೀವನ ಪೂರ್ತಿ ಅವರ ಫೋಟೋ ಬಳಸುತ್ತೇನೆ. ನರೇಂದ್ರ ಮೋದಿಯವರ ವಿಚಾರಧಾರೆಯನ್ನು ನಾನು ಎಲ್ಲರಿಗೂ ತಿಳಿಸುತ್ತೇನೆ ಎಂದು ಹೇಳಿದರು.

ಬಹಳ ಸಂತೋಷದ ವಿಷಯವೆಂದರೆ ವಿಶ್ವ ನಾಯಕ ನನ್ನ ಜೊತೆ ಉಳಿದಿರುವುದು. ನರೇಂದ್ರ ಮೋದಿ‌ ನನ್ನ ಜೊತೆ ಉಳಿದರೆ ಅದೇ ನನಗೆ ಆನಂದ. ಈಶ್ವರಪ್ಪ ಮೋದಿ ಪೋಟೋ ಬಳಸುತ್ತಿದ್ದಾರೆಂದು ಬಿಜೆಪಿಯವರು ‌ಕೋರ್ಟ್​​​​ಗೆ ಹೋಗಿದ್ದರು. ಚುನಾವಣಾ ಆಯೋಗ, ಕೋರ್ಟ್ ಅವರಿಗೆ ಸೊಪ್ಪು ಹಾಕಲಿಲ್ಲ. ಮೋದಿ ಅವರನ್ನು ನನ್ನ ಹೃದಯದಲ್ಲಿ ‌ಇಟ್ಟುಕೊಂಡಿದ್ದೇನೆ. ಮೋದಿಯವರಿಗೆ ಅಪಮಾನ ಮಾಡಬಾರದು. ಗಣಪತಿ, ಈಶ್ವರನನ್ನು ಎಲ್ಲರೂ ಪೂಜೆ ಮಾಡುತ್ತಾರೆ. ನಿಮ್ಮ ಮನೆಯಲ್ಲಿ ಪೋಟೋ ‌ಇಟ್ಟುಕೊಳ್ಳಬೇಡಿ‌ ಅಂದರೆ ಹೇಗೆ? ಮೋದಿ ಅವರು ನನಗೆ ಮಾದರಿ ವ್ಯಕ್ತಿ, ಆದರ್ಶ ವ್ಯಕ್ತಿ. ನನ್ನ ಜೀವನಪೂರ್ತಿ ಮೋದಿ ಪೋಟೋ ಇಟ್ಟುಕೊಳ್ಳುತ್ತೇನೆ. ಯಾವುದೇ ಪಕ್ಷ ಅಥವಾ ವ್ಯಕ್ತಿ ನನ್ನನ್ನು ಮೋದಿಯವರಿಂದ ಬೇರ್ಪಡಿಸಲು ಸಾಧ್ಯವಿಲ್ಲ. ನರೇಂದ್ರ ಮೋದಿ ಪೋಟೋ ‌ಬಳಸಲು ಹಿಂದೂ ಸಮಾಜಕ್ಕೆ ಅವಕಾಶ ಇದೆ. ನಾನು ಚುನಾವಣೆಗೆ ‌ಪೂರ್ಣ ಪ್ರಮಾಣದಲ್ಲಿ ‌ಮೋದಿ ಪೋಟೋ ಬಳಸುತ್ತೇನೆಂದು ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ