Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್‌ಡಿಎಲ್ ಮಾರ್ಚ್ ನಲ್ಲಿ ರೂ. 1,500 ಕೋಟಿಗೂ ಅಧಿಕ ವಹಿವಾಟು!

ಬೆಂಗಳೂರು: ಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್‌ ತಯಾರಕರಾದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್) ಕಳೆದ 40 ವರ್ಷಗಳಲ್ಲಿ ಅತ್ಯಧಿಕ ಮಾರಾಟ ವಹಿವಾಟು ದಾಖಲಿಸಿದ್ದು, ಮಾರ್ಚ್ 2024 ರ ವೇಳೆಗೆ 1,500 ಕೋಟಿ ರೂ.ಗಳನ್ನು ಮೀರಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮಾರಾಟದಲ್ಲಿ 195 ಕೋಟಿ ರೂ.ಏರಿಕೆಯಾಗಿದೆ. ಇದು ಶೇಕಡಾ 14.25 ರಷ್ಟು ಬೆಳವಣಿಗೆಯಾಗಿದೆ.

ಶವರ್ ಜೆಲ್‌ಗಳು, ಮೈಸೂರು ಸ್ಯಾಂಡಲ್ ವೇವ್ ಡಿಯೋ ಸೋಪ್, ಗ್ಲಿಸರಿನ್ ಆಧಾರಿತ ಪಾರದರ್ಶಕ ಬಾತಿಂಗ್ ಬಾರ್ ಮತ್ತು ಸೂಪರ್ ಪ್ರೀಮಿಯಂ ಬಾತ್ ಸೋಪ್, ಸೇರಿದಂತೆ 21 ಹೊಸ ಉತ್ಪನ್ನಗಳ ಬಿಡುಗಡೆ ಕಂಪನಿಗೆ ಹೆಚ್ಚಿನ ವಹಿವಾಟು ನಡೆಸಲು ನೆರವಾಗಿದೆ. ತನ್ನ ಸಾಬೂನುಗಳಲ್ಲಿ ಶುದ್ಧ ಶ್ರೀಗಂಧದ ಎಣ್ಣೆಯನ್ನು ಬಳಸುವುದಕ್ಕೆ ಹೆಸರುವಾಸಿಯಾದ ಕಂಪನಿಯು ಯುವಕರ ಬೇಡಿಕೆ ಮತ್ತು ಆದ್ಯತೆಗಳನ್ನು ಪೂರೈಸಲು ಮತ್ತು ಉತ್ತರ ಭಾರತದಲ್ಲಿ ನೆಲೆಯೂರಲು ಪ್ರಯತ್ನಿಸಿದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ KSDL ಅಧಿಕಾರಿಗಳು, ಗ್ಲಿಸರಿನ್ ಆಧಾರಿತ ಉತ್ಪನ್ನಗಳಿಗೆ ಪ್ರತ್ಯೇಕ ಸೋಪ್ ಬೇಸ್ ಸಿದ್ಧಪಡಿಸಲಾಗುತ್ತಿದೆ. ಈ ಸೋಪ್ ಗಳ ತಯಾರಿಗೆ ಹೊಸ ತಂತ್ರಜ್ಞಾನಗಳ ಅಗತ್ಯವಿದ್ದು, ಕಂಪನಿ ಯಂತ್ರೋಪಕರಣಗಳನ್ನು ಖರೀದಿಸಿದೆ ಎಂದು ತಿಳಿಸಿದರು.

ಬೆಂಗಳೂರು ಹೊರತುಪಡಿಸಿ ಮೈಸೂರು ಮತ್ತು ಶಿವಮೊಗ್ಗದಲ್ಲಿ ಹೊಸ ಘಟಕಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ. ಕೆಎಸ್‌ಡಿಎಲ್‌ನ ಮಾರುಕಟ್ಟೆ ಪಾಲು ಶೇ. 2. 5 ರಷ್ಟಿರುವ ಉತ್ತರ ಭಾರತದ ರಾಜ್ಯಗಳ ಮೇಲೆ ಕೇಂದ್ರೀಕರಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ಆಯ್ಕೆ ಮಾಡಿದ್ದಾರೆ. "ಕೆಎಸ್‌ಡಿಎಲ್‌ನ ಹೆಚ್ಚಿನ ಮಾರಾಟವು ಪ್ರಸ್ತುತ ದಕ್ಷಿಣದ ರಾಜ್ಯಗಳಿಂದ ಬಂದಿದೆ, ಅಲ್ಲಿ ಅದು ಶೇ. 81 ರಷ್ಟಿದೆ ಎಂದು ಕೆಎಸ್‌ಡಿಎಲ್ ಎಂಡಿ ಡಾ.ಪ್ರಶಾಂತ್ ಪಿಕೆಎಂ ಹೇಳಿದರು.

ಮೈಸೂರು ಸ್ಯಾಂಡಲ್ ವೇವ್ ಅರಿಶಿನ ಸೋಪ್ ನ್ನು ಉತ್ತಮ ಗುಣಮಟ್ಟದ ಸಸ್ಯಜನ್ಯ ಎಣ್ಣೆ ಮತ್ತು ನೈಸರ್ಗಿಕ ಅರಿಶಿನದಿಂದ ರಚಿಸಲಾಗಿದೆ ಎಂದು ಅವರು ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ