Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಲಗೋಡ ತಮ್ಮಣ್ಣ ಪಾರಿಜಾತ ತರಬೇತಿ ಕೇಂದ್ರ ಸ್ಥಾಪಿತವಾಗಬೇಕು : ಡಾ.ಶ್ರೀರಾಮ ಇಟ್ಟಣ್ಣವರ

ಮೂಡಲಗಿ : ಪಾರಿಜಾತಕ್ಕೆ ಬುನಾದಿ ಹಾಕಿದ ಕುಲಗೋಡ ತಮ್ಮಣ್ಣನವರ ಹೆಸರಿನಲ್ಲಿ ಪಾರಿಜಾತ ತರಬೇತಿ ಕೇಂದ್ರ ಸ್ಥಾಪಿಸಿ, ಉತ್ತರ ಕರ್ನಾಟಕದ ಪಾರಿಜಾತ ಕಲೆಗೆ ಸರ್ಕಾರ ಪ್ರೋತ್ಸಾಹ ನೀಡಬೇಕು ಎಂದು ಡಾ.ಶ್ರೀರಾಮ ಇಟ್ಟಣ್ಣವರ ಅಭಿಪ್ರಾಯ ಪಟ್ಟರು.

ಶುಕ್ರವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ಪ್ರತಿಷ್ಠಾನದಿಂದ ಶ್ರೀ ಬಲಭೀಮದೇವರ ಕಾರ್ತಿಕೋತ್ಸದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 18ನೇ ವರ್ಷದ ಪಾರಿಜಾತ ಉತ್ಸವ-2025 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಕುಲಗೋಡ ತಮ್ಮಣ್ಣವರು ಅದ್ಭುತ ಕಲಾವಿದರಲ್ಲದೇ ಕವಿತ್ವವನ್ನೂ ಹೊಂದಿದ್ದರು. 18ನೇ ಶತಮಾನದಲ್ಲಿ ಶ್ರೀಕೃಷ್ಣ ಪಾರಿಜಾತ ರಚಿಸಿದ ಕುಲಗೋಡ ತಮ್ಮಣ್ಣನವರು ಪಾರಿಜಾತವನ್ನೇ ತಮ್ಮ ಉಸಿರನ್ನಾಗಿಸಿಕೊಂಡಿದ್ದರು ಎಂದು ಹೇಳಿದರು.

ಅತಿಥಿಯಾಗಿ ಆಗಮಿಸಿದ್ದ ಬಸನಗೌಡ ಪಾಟೀಲ್ ಮಾತನಾಡಿ, ನಮ್ಮ ಪಾರಿಜಾತ ನಮ್ಮ ಹೆಮ್ಮೆ, ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಪಾರಿಜಾತದ ಕತೃವಾದ ಕುಲಗೋಡ ತಮ್ಮಣ್ಣವರ ಮೂರ್ತಿಯ ಪ್ರತಿಷ್ಠಾಪಣಾ ಕಾರ್ಯವನ್ನು, ಎಲ್ಲ ಗ್ರಾಮಸ್ಥರ ವಿಶ್ವಾಸ ಹಾಗೂ ಶಾಸಕರ ಮಾರ್ಗದರ್ಶನಲ್ಲಿ ಆದಷ್ಟು ಬೇಗ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ಶ್ರೀ ಬಲಭೀಮ ದೇವರ ಪ್ರಧಾನ ಅರ್ಚಕರಾದ ಶ್ರೀ ಭೀಮಪ್ಪ. ರಾ. ಪೂಜೇರರವರು, ಶ್ರೀ ಬಲಭೀಮ ಕೃಪಾಪೋಷಿತ ಕುಲಗೋಡ ತಮ್ಮಣ್ಣ ಶ್ರೀಕೃಷ್ಣ ಪಾರಿಜಾತ ಕಂಪನಿ ನಾಮ ಫಲಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ನೂತನವಾಗಿ ಸ್ಥಾಪಿತವಾದ ಶ್ರೀಕೃಷ್ಣ ಪಾರಿಜಾತ ಕಂಪನಿಯಿಂದ ನೂರಾರು ಕಲಾವಿದರು ಬೆಳಕಿಗೆ ಬಂದು, ಪಾರಿಜಾತ ವಿಶ್ವ ವಿಖ್ಯಾತವಾಗಲಿ ಎಂದು ಶುಭ ಹಾರೈಸಿದರು. ಪಾರಿಜಾತ ಉತ್ಸವ ಕಾರ್ಯಕ್ರಮವನ್ನು ಅಶೋಕ ನಾಯಿಕ ಉದ್ಘಾಟಿಸಿದರು ಹಾಗೂ ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ರಮೇಶ್ ಲವಪ್ಪ ಕೌಜಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಗ್ರಾಮ ಪಂ. ಅಧ್ಯಕ್ಷರಾದ ತಮ್ಮಣ್ಣ ದೇವರ, ಶ್ರೀಕಾಂತ ನಾಯಕ, ಅಶೋಕ್ ನಾಯಕ, ಡಾ.ಬಿ.ವಿ.ದೇವರ ದಂಪತಿಗಳು, ಸತೀಶ್ ವಂಟಗೋಡಿ, ಸುನಿಲ್ ವಂಟಗೋಡಿ, ದತ್ತಾತ್ರೇಯ ಕುಲಕರ್ಣಿ, ಶ್ರೀಪತಿ ಗಣಿ, ಡಾ.ಮಹೇಶ ಕಂಕಣವಾಡಿ, ಜಗದೀಶ ಗಿಡ್ಡಾಳಿ, ಶಿವನಗೌಡ ಪಾಟೀಲ್, ಪ್ರಕಾಶ ಅರಳಿ ಸೇರಿದಂತೆ ಗ್ರಾಮದ ಹಲವಾರು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮುತ್ತಪ್ಪ ಜಿಡ್ಡಿಮನಿ ನಿರೂಪಿಸಿ, ಬಲರಾಮ ತಟ್ಟಿಯವರು ವಂದಿಸಿದರು.



ನಂತರ ಶ್ರೀ ಬಲಭೀಮ ಕೃಪಾಪೋಷಿತ ಕುಲಗೋಡ ತಮ್ಮಣ್ಣ ಬಯಲಾಟ ಕಂಪನಿಯ ಕಲಾವಿದರು ರಮೇಶ ಲವಪ್ಪ ಕೌಜಲಗಿಯವರ ನಿರ್ದೇಶನದಲ್ಲಿ ಶ್ರೀಕೃಷ್ಣ ಪಾರಿಜಾತ ಪ್ರದರ್ಶನ ಮಾಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ