ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕೋರ್ಟ್ನಲ್ಲಿ ಈ ಪ್ರಕರಣದ ಬಗ್ಗೆ ವಾದ ಪ್ರತಿವಾದ ಆಗಿದೆ. ಸಿಎಂ ಪರ ವಕೀಲರು ವಾದ ಮಾಡಲು ಸಮಯ ಕೇಳುತ್ತಿದ್ದಾರೆ ಎಂದರು.
ನಾಡಿಗೆ ಅನೇಕ ಕೊಡುಗೆಗಳನ್ನು ಎನ್ಯು ಆಸ್ಪತ್ರೆ ಕೊಟ್ಟಿದೆ. ಶಿವಮೊಗ್ಗದಲ್ಲಿ ಹಲವಾರು ಕುಟುಂಗಳಿಗೆ ಯಶಸ್ವಿಯಾಗಿ ಕಿಡ್ನಿ ಕಸಿ ಮಾಡಿದ್ದಾರೆ. ಶಿವಮೊಗ್ಗಕ್ಕೆ ಇಂತಹ ಒಂದು ಆಸ್ಪತ್ರೆ ಅವಶ್ಯಕವಾಗಿತ್ತು. ಇಲ್ಲವಾದರೆ ಬೆಂಗಳೂರು ಅಥವಾ ಮಂಗಳೂರಿಗೆ ಆಸ್ಪತ್ರೆಗೆ ಹೋಗಬೇಕಿತ್ತು. ಇದೀಗ ಆ ಸೌಲಭ್ಯ ಶಿವಮೊಗ್ಗದಲ್ಲಿ ದೊರೆಯುತ್ತಿದೆ ಎಂದರು.