LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರಧಾನಿ ಮೋದಿ, ಸಚಿವ ಅಮಿತ್ ಶಾ ಜತೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು, ಅಕ್ಟೋಬರ್ 11: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ರೈತರು ಭಾರೀ ಸಂಕಷ್ಟಕ್ಕೊಳಗಾಗಿದ್ದಾರೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಬೆಳೆಗಳು ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಬೆಳೆ ಹಾನಿ ಅಧ್ಯಯನಕ್ಕಾಗಿ ಶೀಘ್ರದಲ್ಲೇ ಕೇಂದ್ರದಿಂದ ತಂಡ ಕಳುಹಿಸುವಂತೆ ಮತ್ತು ಪರಿಹಾರ ನೀಡುವಂತೆ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ.





ನೈಋತ್ಯ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ 12.54 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಎರಡು ದಿನಗಳ ಹಿಂದೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದರು. ಭೀಮಾ ಜಲಾನಯನ ಪ್ರದೇಶದಲ್ಲಿನ ಪ್ರವಾಹದೊಂದಿಗೆ ಸೆಪ್ಟೆಂಬರ್‌ನಲ್ಲಿಉತ್ತರ ಕರ್ನಾಟಕದ ಜಿಲ್ಲೆಗಳು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದವು. ಎರಡನೇ ಸುತ್ತಿನ ಪ್ರವಾಹವು ಮುಖ್ಯವಾಗಿ ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 7.24 ಲಕ್ಷ ಹೆಕ್ಟೇರ್‌ಗಳಷ್ಟು ಹೆಚ್ಚುವರಿ ಬೆಳೆ ನಷ್ಟಕ್ಕೆ ಕಾರಣವಾಯಿತು ಎಂದು ಅವರು ಮಾಹಿತಿ ನೀಡಿದ್ದರು. ಪ್ರವಾಹ ಪೀಡಿತ ರೈತರಿಗೆ ಬೆಳೆಹಾನಿ ಪರಿಹಾರಕ್ಕೆಂದು 2000 ಕೋಟಿ ರೂ. ನಿಗದಿ ಮಾಡಲಾಗಿದ್ದು, 30 ದಿನಗಳಲ್ಲಿ ನೇರ ಬ್ಯಾಂಕ್ ಖಾತೆಗೆ ವರ್ಗಾವಣೆ ಮೂಲಕ ಹಣ ಪಾವತಿಸುವುದಾಗಿಯೂ ಅವರು ಭರವಸೆ ನೀಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್