Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿ, ಸಚಿವ ಅಮಿತ್ ಶಾ ಜತೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು, ಅಕ್ಟೋಬರ್ 11: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ರೈತರು ಭಾರೀ ಸಂಕಷ್ಟಕ್ಕೊಳಗಾಗಿದ್ದಾರೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಬೆಳೆಗಳು ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಬೆಳೆ ಹಾನಿ ಅಧ್ಯಯನಕ್ಕಾಗಿ ಶೀಘ್ರದಲ್ಲೇ ಕೇಂದ್ರದಿಂದ ತಂಡ ಕಳುಹಿಸುವಂತೆ ಮತ್ತು ಪರಿಹಾರ ನೀಡುವಂತೆ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ.





ನೈಋತ್ಯ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ 12.54 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಎರಡು ದಿನಗಳ ಹಿಂದೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದರು. ಭೀಮಾ ಜಲಾನಯನ ಪ್ರದೇಶದಲ್ಲಿನ ಪ್ರವಾಹದೊಂದಿಗೆ ಸೆಪ್ಟೆಂಬರ್‌ನಲ್ಲಿಉತ್ತರ ಕರ್ನಾಟಕದ ಜಿಲ್ಲೆಗಳು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದವು. ಎರಡನೇ ಸುತ್ತಿನ ಪ್ರವಾಹವು ಮುಖ್ಯವಾಗಿ ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 7.24 ಲಕ್ಷ ಹೆಕ್ಟೇರ್‌ಗಳಷ್ಟು ಹೆಚ್ಚುವರಿ ಬೆಳೆ ನಷ್ಟಕ್ಕೆ ಕಾರಣವಾಯಿತು ಎಂದು ಅವರು ಮಾಹಿತಿ ನೀಡಿದ್ದರು. ಪ್ರವಾಹ ಪೀಡಿತ ರೈತರಿಗೆ ಬೆಳೆಹಾನಿ ಪರಿಹಾರಕ್ಕೆಂದು 2000 ಕೋಟಿ ರೂ. ನಿಗದಿ ಮಾಡಲಾಗಿದ್ದು, 30 ದಿನಗಳಲ್ಲಿ ನೇರ ಬ್ಯಾಂಕ್ ಖಾತೆಗೆ ವರ್ಗಾವಣೆ ಮೂಲಕ ಹಣ ಪಾವತಿಸುವುದಾಗಿಯೂ ಅವರು ಭರವಸೆ ನೀಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ