Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಂಪ್ಲಿ ಉತ್ಸವ: ಸಂಭ್ರಮ, ಸಾಂಸ್ಕೃತಿಕ ಇತಿಹಾಸ ಮರುಕಳಿಸಿದ ವೈಭವ ಮೆರವಣಿಗೆ

ಬಳ್ಳಾರಿ,ಫೆ.12 - ಐತಿಹಾಸಿಕ ಇತಿಹಾಸವಿರುವ ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಕಂಪ್ಲಿ ಪಟ್ಟಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ಕಂಪ್ಲಿ ಉತ್ಸವದ ಮೊದಲ ದಿನ ಬುಧವಾರ ಕಲಾತಂಡಗಳ ಮೆರವಣಿಗೆ ಜನಮನ ಸೆಳೆಯಿತು.
ಕಂಪ್ಲಿ ಉತ್ಸವದ ಅಂಗವಾಗಿ ಕಂಪ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನೊಳಗೊಂಡ ಸಂಭ್ರಮದ ಭವ್ಯ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಕಲಾ ವಾದ್ಯಗಳ ವೈಭವದ ಮೆರವಣಿಗೆಯು ಪಟ್ಟಣದ ಸಾಂಸ್ಕೃತಿಕ ಕಲಾ ವೈಭವವನ್ನು ಮರುಕಳಿಸಿತು.


ಕಂಪ್ಲಿ ಉತ್ಸವದ ಅಂಗವಾಗಿ ಏರ್ಪಡಿಸಿದ್ದ ಕಲಾ ತಂಡಗಳ ಮೆರವಣಿಗೆಗೆ ಕಂಪ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್‌ಲೂಮ್ಸ್) ದ ಅಧ್ಯಕ್ಷರೂ ಆಗಿರುವ ಜೆ.ಎನ್.ಗಣೇಶ್ ಅವರು ಪಟ್ಟಣದ ಕೋಟೆ ಪ್ರದೇಶದಲ್ಲಿ ಕಂಪಿಲರಾಯ, ಗಂಡುಗಲಿ ಕುಮಾರರಾಮ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.
*ಅದ್ಧೂರಿಯಾಗಿ ನಡೆದ ಮೆರವಣಿಗೆ:*
ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ಮೆರವಣಿಗೆಯು ಪಟ್ಟಣದ ಕೋಟೆ ಪ್ರದೇಶದಿಂದ ಆರಂಭವಾಗಿ ಡಾ.ರಾಜ್ ಕುಮಾರ್ ರಸ್ತೆಯ ಮೂಲಕ  ಮಾರ್ಕೆಟ್ ಮಾರ್ಗವಾಗಿ ಮಸೀದಿ ಮೂಲಕ ಅಂಬೇಡ್ಕರ್ ವೃತ್ತದಿಂದ ಸೋಮೇಶ್ವರ ದೇವಸ್ಥಾನದವರೆಗೆ ಸಾಗಿತು.


*ಗಮನ ಸೆಳೆದ ವಿವಿಧ ಕಲಾತಂಡಗಳು:*
ಮೆರವಣಿಗೆಯಲ್ಲಿ ಕಳಸ-ಅರ್ಧ ಕುಂಭ ಹೊತ್ತ ಮಹಿಳೆಯರು, ಸಾಂಸ್ಕೃತಿಕ ಕಲಾತಂಡಗಳಾದ ತಾಷೆ ರಂಡೋಲ್, ಡೊಳ್ಳು ಕುಣಿತ, ಹಗಲುವೇಷ, ನಂದಿಧ್ವಜ, ಮರಗಾಲು ಕುಣಿತ, ಕಹಳೆ ವಾದನ, ವೀರಗಾಸೆ ಕುಣಿತ, ಹಕ್ಕಿಪಿಕ್ಕಿ, ಕಂಸಾಳೆ, ವೀರಗಾಸೆ, ರಾಮಾಯಣ ವೇಷಧಾರಿತ ಪಾತ್ರಧಾರಿಗಳು, ಜನಪದ ಮಹಿಳಾ ನೃತ್ಯ ತಂಡದಿಂದ ಜಾನಪದ ನೃತ್ಯ, ಕುದುರೆ ಕುಣಿತ, ಗೊರವರ ಕುಣಿತ, ಹಲಗೆ ವಾದನ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಉತ್ಸವವದ ಮೆರಗನ್ನು ಇನ್ನಷ್ಟು ಹೆಚ್ಚಿಸಿದವು.
ಈ ಸಂದರ್ಭದಲ್ಲಿ ಕಂಪ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸರಾವ್, ತಹಶೀಲ್ದಾರ ಜೂಗಲ ಮಂಜುನಾಯಕ, ತೋರಣಗಲ್ಲು ಡಿಎಸ್ಪಿ ಪ್ರಸಾದ್ ಗೋಖಲೆ, ತಾಪಂ ಇಒ ಆರ್.ಕೆ.ಶ್ರೀಕುಮಾರ್, ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರು ಇದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ