Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕರ ಕನಿಷ್ಠ ವೇತನ 20,000 ರೂ. ವರೆಗೆ ಹೆಚ್ಚಳ ಸಾಧ್ಯತೆ

ಬೆಂಗಳೂರು, ಏಪ್ರಿಲ್ 3: ಕೌಶಲಯುಕ್ತ ಮತ್ತು ಕೌಶಲ್ಯ ರಹಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ  ಉದ್ದೇಶಿಸಿದ್ದು, ಮುಂದಿನ ಒಂದೆರಡು ವಾರಗಳ ಒಳಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಒಂದು ವೇಳೆ, ಕರಡು ಪ್ರಸ್ತಾವನೆಯಲ್ಲಿ ಉಲ್ಲೇಖಿಸಿದಷ್ಟೇ ಪ್ರಮಾಣದಲ್ಲಿ ಕನಿಷ್ಠ ವೇತನ ಹೆಚ್ಚಳ ಮಾಡಿದ್ದೇ ಆದಲ್ಲಿ, ಕಾರ್ಮಿಕರಿಗೆ ದೇಶದಲ್ಲಿಯೇ ಅತಿ ಹೆಚ್ಚು ಕನಿಷ್ಠ ವೇತನ ನೀಡುವ ರಾಜ್ಯ ಎಂದು ಕರ್ನಾಟಕ ಗುರುತಿಸಿಕೊಳ್ಳಲಿದೆ. ಒಟ್ಟು 82 ವಿವಿಧ ಕೆಲಸಗಳಿಗೆ ಕಾರ್ಮಿಕರ ಕನಿಷ್ಠ ವೇತನ ಅನ್ವಯವಾಗಲಿದೆ. ಈ ಸಂಬಂಧ 2022 ರಲ್ಲಿ ಕರಡು ಅಧಿಸೂಚನೆ ಹೊರಡಿಸಲಾಗಿತ್ತು.

ಕರಡು ಅಧಿಸೂಚನೆಯನ್ನು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಲಾಗುವುದು. ಮಂಡಳಿಯು ಅನುಮೋದನೆ ನೀಡಿದ್ದೇ ಆದಲ್ಲಿ ಮುಂದಿನ ಒಂದೆರಡು ವಾರಗಳಲ್ಲಿ ಸರ್ಕಾರ ಅಧಿವೇಶನ ಹೊರಡಿಸುವ ನಿರೀಕ್ಷೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ವೇತನ ಪರಿಷ್ಕರಣೆಯಿಂದ ಸಂಘಟಿತ ಮತ್ತು ಅಸಂಘಟಿತ ವಲಯಗಳ ಕಾರ್ಮಿಕರಿಗೆ ಪ್ರಯೋಜನವಾಗಲಿದೆ.

ಪ್ರಸ್ತುತ ಕರ್ನಾಟಕದಲ್ಲಿ ಕೌಶಲ ಸಹಿತ ಮತ್ತು ಕೌಶಲರಹಿತ ಕಾರ್ಮಿಕರ ಕನಿಷ್ಠ ವೇತನ ತಿಂಗಳಿಗೆ 12,000 ಇದೆ. ಪರಿಷ್ಕೃತ ಲೆಕ್ಕಾಚಾರದ ಪ್ರಕಾರ ಇದು 20,000 ರೂಪಾಯಿಗೆ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಸೇರಿದಂತೆ ವಿವಿಧ ವಲಯಗಳ ಸುಮಾರು 1.7 ಕೋಟಿ ಕಾರ್ಮಿಕರಿದ್ದಾರೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ