Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಕಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಲಕ್ಷ್ಮೀ ಢವಳೇಶ್ವರ ಆಯ್ಕೆ

ಸಾಧನೆಯ ಶಿಖರಕ್ಕೇರಿದ ಲಕ್ಷ್ಮಣ ಅಡಿಹುಡಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ


ಮೂಡಲಗಿ: ಪ್ರತಿಭೆ ಎನ್ನುವುದು ಕೇವಲ ಶ್ರೀಮಂತರ ಸೊತ್ತಲ್ಲ, ಅದು ಛಲಗಾರರ ಸ್ವತ್ತು ಎಂಬುದನ್ನು ಲಕ್ಷ್ಮಣ ಅಡಿಹುಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಲಕ್ಷ್ಮೀ ಸಂಜು ಢವಳೇಶ್ವರ ಸಾಬೀತು ಪಡಿಸಿದ್ದಾಳೆ. ಕಡು ಬಡತನ, ಸೌಲಭ್ಯಗಳ ಕೊರತೆಯ ನಡುವೆಯೂ ಹಾಕಿ ಸ್ಟಿಕ್ ಹಿಡಿದು ಮೈದಾನದಲ್ಲಿ ಮಿಂಚಿನ ಸಂಚಲನ ಮೂಡಿಸಿರುವ ಲಕ್ಷ್ಮೀ, ಈಗ ೬೯ನೇ ರಾಷ್ಟ್ರೀಯ ಮಟ್ಟದ ೧೪ ವ?ದೊಳಗಿನ (U-೧೪) ಹಾಕಿ ಚಾಂಪಿಯನ್‌ಶಿಪ್‌ಗೆ ಕರ್ನಾಟಕ ರಾಜ್ಯ ತಂಡದ ಪ್ರತಿನಿಧಿಯಾಗಿ ಆಯ್ಕೆಯಾಗುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾಳೆ.
ಮೂಡಲಗಿಯ ಶಿವಾಪುರ ರಸ್ತೆಯ ನಿವಾಸಿಯಾಗಿರುವ ಲಕ್ಷ್ಮೀ ಅವರ ಕುಟುಂಬದ ಹಿನ್ನೆಲೆ ಅತ್ಯಂತ ಸಾಮಾನ್ಯವಾದುದು. ಇವಳು ತನ್ನ ಕುಟುಂಬದ ೫ ಜನ ಮಕ್ಕಳಲ್ಲಿ ೪ನೇ ಮಗಳಾಗಿದ್ದು, ತಂದೆ ಮತ್ತು ತಾಯಿ ಇಬ್ಬರೂ ಕೆಲಸ ಮಾಡಿ ಕುಟುಂಬವನ್ನು ಸಲಹುತ್ತಿದ್ದಾರೆ. ದಿನವಿಡೀ ಕ?ಪಟ್ಟು ದುಡಿಯುವ ಪೋ?ಕರಿಗೆ ಮಗಳು ಕ್ರೀಡೆಯಲ್ಲಿ ಇ?ಂದು ಎತ್ತರಕ್ಕೆ ಬೆಳೆಯುತ್ತಾಳೆ ಎಂಬ ಕನಸಿತ್ತು. ಆ ಕನಸಿಗೆ ಈಗ ರೆಕ್ಕೆ ಬಂದಂತಾಗಿದೆ. ಮನೆಯ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದಿದ್ದರು, ಮಗಳ ಕ್ರೀಡಾ ಆಸಕ್ತಿಗೆ ಪೋ?ಕರು ಎಂದೂ ಅಡ್ಡಿಯಾಗದೆ, ಅವಳ ಶ್ರಮಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ.
ಲಕ್ಷ್ಮೀ ಅವರ ಈ ಯಶಸ್ಸಿನ ಹಿಂದೆ ಶ್ರೀ ಲಕ್ಷ್ಮಣ ವಾಯ್. ಅಡಿಹುಡಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಪಾತ್ರ ದೊಡ್ಡದಿದೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಸಚಿನ್ ಕಾಂಬಳೆ ಅವರು ಲಕ್ಷ್ಮೀಯಲ್ಲಿದ್ದ ಹಾಕಿ ಕೌಶಲ್ಯವನ್ನು ಗುರುತಿಸಿ, ಅವಳಿಗೆ ವಿಶೇ? ತರಬೇತಿ ನೀಡಿದ್ದಾರೆ. ಮೈದಾನದಲ್ಲಿ ಚೆಂಡನ್ನು ನಿಯಂತ್ರಿಸುವ ರೀತಿ, ವೇಗ ಮತ್ತು ಗುರಿ ತಲುಪುವ ಆಕೆಯ ಚಾಕಚಕ್ಯತೆ ರಾಜ್ಯ ಮಟ್ಟದ ಆಯ್ಕೆ ಸಮಿತಿಯ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಮಧ್ಯಪ್ರದೇಶದ ಐತಿಹಾಸಿಕ ನಗರ ಗ್ವಾಲಿಯರ್‌ನಲ್ಲಿ ಬರುವ ಜನವರಿ ೦೨ ರಿಂದ ಜನವರಿ ೦೭, ೨೦೨೬ರವರೆಗೆ ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗಳು ಜರುಗಲಿವೆ. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ ಪ್ರತಿಭಾನ್ವಿತರ ತಂಡದಲ್ಲಿ ಲಕ್ಷ್ಮೀ ಸ್ಥಾನ ಪಡೆದಿದ್ದು, ರಾಜ್ಯಕ್ಕೆ ಪದಕ ತಂದುಕೊಡುವ ವಿಶ್ವಾಸದಲ್ಲಿದ್ದಾಳೆ.
ಈ ಅಭೂತಪೂರ್ವ ಸಾಧನೆ ಮಾಡಿದ ಲಕ್ಷ್ಮೀಗೆ ಕ್ಷೇತ್ರದ ಶಾಸಕ ಶ್ರೀ ಬಾಲಚಂದ್ರ ಲ. ಜಾರಕಿಹೊಳಿ, ಬೆಳಗಾವಿ ಉಸ್ತುವಾರಿ ಸಚಿವ ಶ್ರೀ ಸತೀಶ ಲ. ಜಾರಕಿಹೊಳಿ, ಮೂಡಲಗಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಾಲೆಯ ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.
ನಮ್ಮ ಶಾಲೆಯು ಕೇವಲ ಪಠ್ಯಕ್ಕೆ ಸೀಮಿತವಾಗದೆ, ಗ್ರಾಮೀಣ ಭಾಗದ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಸದಾ ಬದ್ಧವಾಗಿದೆ. ಲಕ್ಷ್ಮೀಯ ಈ ಸಾಧನೆಯ ಹಿಂದೆ ಶಾಲೆಯ ಸರ್ವ ಶಿಕ್ಷಕ ವೃಂದದ ಬೆಂಬಲವಿದೆ. ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಲಕ್ಷ್ಮೀ ಶ್ರೇ? ಪ್ರದರ್ಶನ ನೀಡಿ, ರಾಜ್ಯಕ್ಕೆ ಕೀರ್ತಿ ತರಲಿ ಎಂದು ಹಾರೈಸುತ್ತೇನೆ. ಆಕೆಯ ಮುಂದಿನ ಎಲ್ಲಾ ಕ್ರೀಡಾ ಮತ್ತು ಶೈಕ್ಷಣಿಕ ಜೀವನಕ್ಕೆ ನಮ್ಮ ಸಂಸ್ಥೆಯ ಸಂಪೂರ್ಣ ಸಹಕಾರ ಸದಾ ಇರಲಿದೆ" ಎಂದು ಸಂಸ್ಥೆಯ ಸಂಸ್ಥಾಪಕ ಶ್ರೀ ಲಕ್ಷ್ಮಣ ವಾಯ್. ಅಡಿಹುಡಿ ಹೇಳಿದರು

ಹೆಚ್ಚಿನ ವಿವರಗಳಿಗಾಗಿ:
ವಿದ್ಯಾರ್ಥಿನಿ: ಲಕ್ಷ್ಮೀ ಸಂಜು ಢವಳೇಶ್ವರ (೮ನೇ ತರಗತಿ)
ತರಬೇತುದಾರರು: ಶ್ರೀ ಸಚಿನ್ ಕಾಂಬಳೆ
ಸ್ಥಳ: ಶಿವಾಪುರ ರಸ್ತೆ, ಮೂಡಲಗಿ
ಪಂದ್ಯಾವಳಿ: ೬೯ನೇ ರಾಷ್ಟ್ರೀಯ U-೧೪ ಹಾಕಿ ಚಾಂಪಿಯನ್‌ಶಿಪ್

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*