Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಲಕ್ಷ್ಮೀ ಹೆಬ್ಬಾಳಕರ್‌ ಸಭೆ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನೊಳಗೊಂಡಂತೆ ಜಂಟಿ ಹೊಣೆಗಾರಿಗೆ ಗುಂಪುಗಳನ್ನು (Joint Liability Group) ರಚಿಸುವ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಇಂದು ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಬ್ಯಾಂಕ್‌ ಪ್ರತಿನಿಧಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದರು.


ಗೃಹಲಕ್ಷ್ಮಿ ಯೋಜನೆ ಈಗಾಗಲೇ ಜನಪ್ರಿಯಗೊಂಡಿದ್ದು, ಜಂಟಿ ಹೊಣೆಗಾರಿಗೆ ಗುಂಪುಗಳನ್ನು ರಚಿಸುವ ಮೂಲಕ ಮಹಿಳೆಯರಿಗೆ ಇನ್ನಷ್ಟು ಆರ್ಥಿಕ ಶಕ್ತಿ ನೀಡುವುದೇ ಇದರ ಉದ್ದೇಶ.  ಪ್ರಾಯೋಗಿಕವಾಗಿ ಸುಮಾರು 500 ಸಂಘಗಳನ್ನು ರಚಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಜೊತೆಗೆ ಮುಂದಿನ ಸಭೆಯಲ್ಲಿ ಜಂಟಿ ಹೊಣೆಗಾರಿಗೆ ಗುಂಪುಗಳ ರಚನೆಗೆ ಅಂತಿಮ ರೂಪು ರೇಷೆ ಸಿದ್ಧಪಡಿಸುವಂತೆ ಸೂಚಿಸಿದರು.


  ಕರ್ನಾಟಕದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭಗೊಂಡು 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ಸುವರ್ಣ ಮಹೋತ್ಸವ ಸಮಾರಂಭ ನಡೆಯಲಿದ್ದು, ಈ ವೇಳೆಗೆ ಜಂಟಿ ಹೊಣೆಗಾರಿಗೆ ಗುಂಪುಗಳ ರಚನೆಗೆ ಚಾಲನೆ ನೀಡಲಾಗುತ್ತಿದೆ.


ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್‌, ನಬಾರ್ಡ್‌ ಬ್ಯಾಂಕ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ.ಸುರೇಂದ್ರ ಬಾಬು,  ಆಪ್ತ ಕಾರ್ಯದರ್ಶಿ ಟಿ.ಎಚ್.ವಿಶ್ವನಾಥ್‌, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ವಲ್‌, ಸ್ತ್ರಿ ಶಕ್ತಿ ಯೋಜನೆಯ ಯೋಜನಾ ನಿರ್ದೇಶಕರಾದ ಎಂ.ಜಿ.ಪಾಲಿ, ನಬಾರ್ಡ್‌ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಡಾ.ಅಶುತೋಷ್‌ ಕುಮಾರ್‌, ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕರಾದ ವಿ.ಎಂ.ರುಕ್ಮಿಣಿ, ಯೋಜನಾಧಿಕಾರಿ ಸವಿತಾ ವೈ.ಡಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ