Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಷ್ಟ್ರದಲ್ಲಿ ಎಂವಿಎ ಅಧಿಕಾರಕ್ಕೇರುವುದು ಖಚಿತ: ಲಕ್ಷ್ಮೀ ಹೆಬ್ಬಾಳ್ಕರ್

* ಮಹಾರಾಷ್ಟ್ರದ ಚುನಾವಣಾ ಅಖಾಡಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಎಂಟ್ರಿ

* ಚಂದಗಡ್ ವಿಧಾನಸಭಾ ಕ್ಷೇತ್ರದಲ್ಲಿ ಎಂವಿಎ ಅಭ್ಯರ್ಥಿ ಪರ ಪ್ರಚಾರ

 

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ ಚಂದಗಡ್ ವಿಧಾನಸಭಾ ಕ್ಷೇತ್ರದ ತುಡಯೆ ಗ್ರಾಮದಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ) ಅಭ್ಯರ್ಥಿ ನಂದಾತಾಯಿ ಕುಪೆಕರ್ ಪರ ಸಚಿವರು ಗುರುವಾರ ಸಂಜೆ ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಎಂವಿಎ ಒಕ್ಕೂಟವನ್ನು ಬೆಂಬಲಿಸಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಬದಲಾವಣೆ ಆಗಿದೆ. ಪ್ರತಿ ತಿಂಗಳು ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ 2 ಸಾವಿರ ನೀಡಲಾಗುತ್ತಿದೆ. ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾರಥ್ಯದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ನಮ್ಮ ರಾಜ್ಯ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ, ಅದೇ ಮಾದರಿಯಲ್ಲಿ ಮಹಾರಾಷ್ಟ್ರ ಕೂಡ ಅಭಿವೃದ್ಧಿ ಆಗಬೇಕಾದರೆ ಎಂವಿಎ ಅಧಿಕಾರಕ್ಕೆ ಬರಬೇಕು ಎಂದರು.

ಮಹಾರಾಷ್ಟ್ರದಲ್ಲಿ ಎಂವಿಎ ಅಧಿಕಾರಕ್ಕೆ ಬಂದರೆ ಕರ್ನಾಟಕ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ. ಚಂದಗಡ್ ಕ್ಷೇತ್ರದಿಂದ ನಂದಾತಾಯಿ ಅವರು ಗೆದ್ದರೆ, ನಾನು ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಅಭಿವೃದ್ಧಿ ಮಾಡಿರುವ ಮಾದರಿಯಲ್ಲೆ ಅವರು ಕೂಡ ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಿದ್ದಾರೆ. ಚಂದಗಡ್ ಕ್ಷೇತ್ರದ ಸರ್ವತೋಮುಖದ ಅಭಿವೃದ್ಧಿಗಾಗಿ ನಂದಾತಾಯಿ‌ ಕುಪೆಕರ್ ಅವರನ್ನು ಬೆಂಬಲಿಸಿ ಎಂದು ಮತದಾರರಲ್ಲಿ ಸಚಿವರು ಮನವಿ ಮಾಡಿದರು.

ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರ ಹೆಸರಿಗೆ ಮಹಾರಾಷ್ಟ್ರದಲ್ಲಿ ಬಹಳ ದೊಡ್ಡ ಶಕ್ತಿ ಇದ್ದು, ದೊಡ್ಡ ಪ್ರಮಾಣದಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಕಾಂಗ್ರೆಸ್, ಶರದ್ ಪವಾರ್ ಸಾರಥ್ಯದ ಎನ್ ಸಿಪಿ‌ (ಎಸ್ ಪಿ) ಹಾಗೂ ಉದ್ದವ್ ಠಾಕ್ರೆ ಸಾರಥ್ಯದ ಶಿವಸೇನಾ (ಯುಬಿಟಿ) ಒಳಗೊಂಡ ಮಹಾ ವಿಕಾಸ ಅಘಾಡಿ ಅಧಿಕಾರಕ್ಕೇರುವುದು ಖಚಿತ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಚಂದಗಡ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಧ್ಯಕ್ಷರಾದ ಸಂಭಾಜಿ‌ ಶಿರೋಳಕರ್, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಜ್ಯೋತಿಬಾ ಪಾಟೀಲ, ಶಿವಾಜಿ ಸಾವಂತ, ರಜತ್ ಹುಲ್ಜಿ, ಎಂ.ಜೆ.ಪಾಟೀಲ, ಬೈರು ಖಂಡೇಕರ್, ವಿಲಾಸ್ ಪಾಟೀಲ, ತಾನಾಜಿ ವಾಘಮೊರೆ, ಗಣೇಶ ಫಾಠಕ್, ಬಸವಂತ ಅಡಕುರಕರ್, ನಾರಾಯಣ, ವಿಷ್ಣು ಗಾವಡೆ, ಜ್ಯೋತಿಬಾ ಚಂದಿಲಕರ್, ಹನಮಂತ ಪಾಟೀಲ, ದೀಪಕ್ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*