Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಚಕ್ರ ಆರಾಧನಾ ಮಹೋತ್ಸವಕ್ಕೆ ಚಾಲನೆ

ಬೆಳಗಾವಿ;

ಬೆಳಗಾವಿಯ ಕೋಟೆ ಆವರಣದಲ್ಲಿರುವ ಐತಿಹಾಸಿಕ ಕಮಲ ಬಸದಿಯಲ್ಲಿ ಇದೇ ಏಪ್ರಿಲ್ 24 ರಿಂದ 28 ರವರೆಗೆ ಐದು ದಿನಗಳ ಕಾಲ ನಡೆಯುತ್ತಿರುವ ಧರ್ಮಚಕ್ರ ಆರಾಧನಾ ಮಹೋತ್ಸವಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ  ಧರ್ಮಬಂಧುಗಳನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜೈನ ಸಮಾಜ ಶಾಂತಿಪ್ರೀಯ ಸಮಾಜವಾಗಿದ್ದು,  ಎಲ್ಲ ಸಮಾಜದವರೊಂದಿಗೆ ಒಂದಾಗಿ ಹಾಗೂ ಎಲ್ಲರೊಂದಿಗೆ ಹೊಂದಿಕೊಂಡು ಹೋಗುವ ಸಮಾಜವಾಗಿದೆ. ಇಂದು ಐತಿಹಾಸಿಕ ಕೋಟೆ ಆವರಣದಲ್ಲಿ ಒಂದು ಧಾರ್ಮಿಕ  ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಈಗಾಗಲೆ ಕೋಟೆ ಆವರಣವನ್ನು ಅಭಿವೃದ್ಧಿಗೊಳಿಸಲಾಗಿದ್ದು,  ಇದನ್ನು ಇದೇ ರೀತಿ ಕಾಪಾಡಿಕೊಂಡು ಹೋಗುವುದು ಎಲ್ಲರ ಜವಾಬ್ದಾರಿಯಾಗಿದೆ.‌ ಇಂದಿನ ಕಾರ್ಯಕ್ರಮದಲ್ಲಿ ಅನೇಕ‌ ಯುವಕ- ಯುವತಿಯರು ಭಾಗವಹಿಸಿದ್ದು  ಹೆಮ್ಮೆಯ ಸಂಗತಿ. ‌ಇಂತಹ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ಸಂಸ್ಕಾರ  ಬೆಳೆಯಲು ಕಾರಣವಾಗುತ್ತದೆ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ  ಮಹೋತ್ಸವ ಸಮಿತಿ ವತಿಯಿಂದ ಹಾಗೂ ಜೈನ ಸಮಾಜದ ವತಿಯಿಂದ ಗೌರವಿಸಲಾಯಿತು. ಸಮಾರಂಭದಲ್ಲಿ  ಮಹೋತ್ಸವ ಸಮಿತಿಯ ಖಜಾಂಚಿ ಹಾಗೂ ಭರತೇಶ ಶಿಕ್ಷಣ ಸಂಸ್ಥೆ ಯ ಕಾರ್ಯದರ್ಶಿ  ವಿನೋದ ದೊಡ್ಡಣ್ಣವರ, ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಇದಕ್ಕೂ ಮೊದಲು ಬೆಳಿಗ್ಗೆ  ಮಾಜಿ ಶಾಸಕರಾದ ವೀರಕುಮಾರ ಪಾಟೀಲ, ಸಂಜಯ ಪಾಟೀಲ, ಖ್ಯಾತ ನ್ಯಾಯವಾದಿ ರವಿರಾಜ ಪಾಟೀಲ, ಉದ್ಯಮಿ‌ ಭರತ ಪಾಟೀಲ ಇನ್ನಿತರ ಗಣ್ಯರಿಂದ ಧ್ವಜಾರೋಹಣ ಮತ್ತು ಮಂಟಪ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಇಂದ್ರಜಿತ್ ‌ದೊಡ್ಡಣ್ಣವರ ಮತ್ತು ಭರತೇಶ ಬುಡವಿ ಇವರು ವಿಧಿ- ವಿಧಾನ ಮಾಡಿದರು. ಪಂಡಿತ ಅಮೋಲ  ಉಪಾಧ್ಯೆ ಮತ್ತು ಮಹಾವೀರ ಉಪಾಧ್ಯೆ  ಅವರು ಪೂಜಾ ವಿಧಿಗಳನ್ನು ನಡೆಸಿಕೊಟ್ಟರು. ‌

 ಈ ಸಂದರ್ಭದಲ್ಲಿ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುನಿಲ ಹನಮಣ್ಣವರ,  ಕಾರ್ಯದರ್ಶಿ ಹೀರಾಚಂದ ಕಲಮನಿ, ಸನ್ಮತಿ ಕಸ್ತೂರಿ, ಅಭಿನಂದನ ಜಾಬನ್ನವರ, ರಾಜೇಂದ್ರ ಜಕ್ಕನ್ನವರ , ಅಭಯ ಅವಲಕ್ಕಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. ಪದ್ಮರಾಜ ವೈಜನ್ನವರ  ಕಾರ್ಯಕ್ರಮ ನಿರೂಪಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ