Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಚಕ್ರ ಆರಾಧನಾ ಮಹೋತ್ಸವಕ್ಕೆ ಚಾಲನೆ

ಬೆಳಗಾವಿ;

ಬೆಳಗಾವಿಯ ಕೋಟೆ ಆವರಣದಲ್ಲಿರುವ ಐತಿಹಾಸಿಕ ಕಮಲ ಬಸದಿಯಲ್ಲಿ ಇದೇ ಏಪ್ರಿಲ್ 24 ರಿಂದ 28 ರವರೆಗೆ ಐದು ದಿನಗಳ ಕಾಲ ನಡೆಯುತ್ತಿರುವ ಧರ್ಮಚಕ್ರ ಆರಾಧನಾ ಮಹೋತ್ಸವಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ  ಧರ್ಮಬಂಧುಗಳನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜೈನ ಸಮಾಜ ಶಾಂತಿಪ್ರೀಯ ಸಮಾಜವಾಗಿದ್ದು,  ಎಲ್ಲ ಸಮಾಜದವರೊಂದಿಗೆ ಒಂದಾಗಿ ಹಾಗೂ ಎಲ್ಲರೊಂದಿಗೆ ಹೊಂದಿಕೊಂಡು ಹೋಗುವ ಸಮಾಜವಾಗಿದೆ. ಇಂದು ಐತಿಹಾಸಿಕ ಕೋಟೆ ಆವರಣದಲ್ಲಿ ಒಂದು ಧಾರ್ಮಿಕ  ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಈಗಾಗಲೆ ಕೋಟೆ ಆವರಣವನ್ನು ಅಭಿವೃದ್ಧಿಗೊಳಿಸಲಾಗಿದ್ದು,  ಇದನ್ನು ಇದೇ ರೀತಿ ಕಾಪಾಡಿಕೊಂಡು ಹೋಗುವುದು ಎಲ್ಲರ ಜವಾಬ್ದಾರಿಯಾಗಿದೆ.‌ ಇಂದಿನ ಕಾರ್ಯಕ್ರಮದಲ್ಲಿ ಅನೇಕ‌ ಯುವಕ- ಯುವತಿಯರು ಭಾಗವಹಿಸಿದ್ದು  ಹೆಮ್ಮೆಯ ಸಂಗತಿ. ‌ಇಂತಹ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ಸಂಸ್ಕಾರ  ಬೆಳೆಯಲು ಕಾರಣವಾಗುತ್ತದೆ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ  ಮಹೋತ್ಸವ ಸಮಿತಿ ವತಿಯಿಂದ ಹಾಗೂ ಜೈನ ಸಮಾಜದ ವತಿಯಿಂದ ಗೌರವಿಸಲಾಯಿತು. ಸಮಾರಂಭದಲ್ಲಿ  ಮಹೋತ್ಸವ ಸಮಿತಿಯ ಖಜಾಂಚಿ ಹಾಗೂ ಭರತೇಶ ಶಿಕ್ಷಣ ಸಂಸ್ಥೆ ಯ ಕಾರ್ಯದರ್ಶಿ  ವಿನೋದ ದೊಡ್ಡಣ್ಣವರ, ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಇದಕ್ಕೂ ಮೊದಲು ಬೆಳಿಗ್ಗೆ  ಮಾಜಿ ಶಾಸಕರಾದ ವೀರಕುಮಾರ ಪಾಟೀಲ, ಸಂಜಯ ಪಾಟೀಲ, ಖ್ಯಾತ ನ್ಯಾಯವಾದಿ ರವಿರಾಜ ಪಾಟೀಲ, ಉದ್ಯಮಿ‌ ಭರತ ಪಾಟೀಲ ಇನ್ನಿತರ ಗಣ್ಯರಿಂದ ಧ್ವಜಾರೋಹಣ ಮತ್ತು ಮಂಟಪ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಇಂದ್ರಜಿತ್ ‌ದೊಡ್ಡಣ್ಣವರ ಮತ್ತು ಭರತೇಶ ಬುಡವಿ ಇವರು ವಿಧಿ- ವಿಧಾನ ಮಾಡಿದರು. ಪಂಡಿತ ಅಮೋಲ  ಉಪಾಧ್ಯೆ ಮತ್ತು ಮಹಾವೀರ ಉಪಾಧ್ಯೆ  ಅವರು ಪೂಜಾ ವಿಧಿಗಳನ್ನು ನಡೆಸಿಕೊಟ್ಟರು. ‌

 ಈ ಸಂದರ್ಭದಲ್ಲಿ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುನಿಲ ಹನಮಣ್ಣವರ,  ಕಾರ್ಯದರ್ಶಿ ಹೀರಾಚಂದ ಕಲಮನಿ, ಸನ್ಮತಿ ಕಸ್ತೂರಿ, ಅಭಿನಂದನ ಜಾಬನ್ನವರ, ರಾಜೇಂದ್ರ ಜಕ್ಕನ್ನವರ , ಅಭಯ ಅವಲಕ್ಕಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. ಪದ್ಮರಾಜ ವೈಜನ್ನವರ  ಕಾರ್ಯಕ್ರಮ ನಿರೂಪಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಂಟೋನ್ಮೆಂಟ್ ರೈಲ್ವೆ ಗೇಟ್ ಬಳಿ ನೆರಳಿನ ವ್ಯವಸ್ಥೆಗಾಗಿ ಸಾರ್ವಜನಿಕರ ಆಗ್ರಹವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಜಾಸ್ತಿಯಾಗಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ವೀರಶೈವ ಲಿಂಗಾಯತ ಸಮಾಜದಿಂದ ಉನ್ನತ ಸ್ಥಾನಕ್ಕೇರುವವರ ಸಂಖ್ಯೆ ಜಾಸ್ತಿಯಾಗಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಕನ್ನಡ ಚಲನ ಚಿತ್ರರಂಗ ಶ್ರೀಮಂತ ಪರಂಪರೆ ಹೊಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಸ್,ಎಸ್,ಎಲ್,ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಲಕ್ಷ್ಮಣ ಸವದಿ ಸನ್ಮಾನOnline Liquor Delivery ಮಣ್ಣಿನ ಫಲವತ್ತತೆಯ ರಕ್ಷಣೆ ಪ್ರತಿಯೊಬ್ಬರ  ಕರ್ತವ್ಯವಾಗಿದೆ:ಡಾ. ಎನ್ ಆರ್ ಸಾಲೀಮಠ ಅಕ್ಕಮಹಾದೇವಿ ಜಯಂತಿ ಉತ್ಸವ ವಿಜೃಂಭಣೆಯಿಂದ ಆಚರಣೆಧರ್ಮಚಕ್ರ ಆರಾಧನಾ ಮಹೋತ್ಸವಕ್ಕೆ ಚಾಲನೆಬಳ್ಳಾರಿಯಲ್ಲಿ ಸಂಭ್ರಮದ ಶ್ರೀ ಭಗೀರಥ ಜಯಂತ್ಯೋತ್ಸವ