Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ವಿರುದ್ಧ ಕಾನೂನು ಸಮರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ ಎಂದರು. ‌


ಘಟನೆ ಬಳಿಕ ಸಿ.ಟಿ.ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ.

ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ.‌ ಸಿ.ಟಿ. ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆ ಬೇಗ ಆಗಬೇಕು. ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು.

ಇಂಥ ಸಂದರ್ಭದಲ್ಲೂ ಬಿಜೆಪಿಯವರು ಸಿ.ಟಿ ರವಿ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವರು ಕಿಡಿ ಕಾರಿದರು.


ಸಿ.ಟಿ.ರವಿ ಅವರಿಗೆ ಏನಾಗಿದೆ ಗಾಯ, ಎಷ್ಟಾಗಿದೆ ಗಾಯ. ಪೊಲೀಸರು ಎನ್ ಕೌಂಟರ್ ಮಾಡುತ್ತಿದ್ದರು, ಅಂತಾರಲ್ಲಾ, ನಾಚಿಕೆ ಆಗಲ್ವ ನಿಮಗೆ. ಇಡೀ ಕರ್ನಾಟಕದ ಜನತೆ ನಿಮಗೆ ಛೀಮಾರಿ ಹಾಕುತ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಏನು ಮಾಡಬೇಕು ಅದನ್ನು ಮಾಡಿದ್ದಾರೆ. ಪ್ರಕರಣದ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸಿ.ಟಿ.ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ, ಸಾಧ್ಯವಾದರೆ ಭೇಟಿ ಯಾಗುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


 *ಸಿ.ಟಿ ರವಿ ಆಡಿದ ಮಾತಿರುವ ವಿಡಿಯೋ ರಿಲೀಸ್ ಮಾಡಿದ ಸಚಿವರು:

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಬಳಸಿದ ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ‌ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು.  ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ‌


ಸಿಎಂ, ಡಿಸಿಎಂ ಸೇರಿದಂತೆ ಪಕ್ಷದ ನಾಯಕರಿಂದ ಧೈರ್ಯ:

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಲವು ನಾಯಕರು ನನಗೆ ಧೈರ್ಯ ತುಂಬಿದರು ಎಂದರು.

ಸಿ.ಟಿ.ರವಿ ಬೆಳಗಾವಿ ಚಲೋ ಮಾಡುವ ಬಗ್ಗೆ ಕೇಳಿದಾಗ,


 ‌ಬೆಳಗಾವಿ ಶಾಂತಿಯ ತೋಟ. ನಾಲಿಗೆಯನ್ನು ಸ್ವಚ್ಛವಾಗಿಟ್ಟುಕೊಂಡು ಇಲ್ಲಿಗೆ ಯಾರು ಬೇಕಾದರೂ ಬರಬಹುದು. ಅಂತಹ ವ್ಯಕ್ತಿಗಳಿಗೆ ತುಂಬು ಹೃದಯದ ಸ್ವಾಗತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ