Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವನಮೊಹೋತ್ಸವ ಮಕ್ಕಳಲ್ಲಿ ನಿಸರ್ಗ ಪ್ರೇಮವನ್ನು ಹುಟ್ಟು ಹಾಕುತ್ತದೆ : ಶಾಸಕ ಲಕ್ಷ್ಮಣ ಸವದಿ


ಅಥಣಿ 26: ನಿಸರ್ಗದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವದು ಪ್ರಮುಖವಾದ ಕಾರ್ಯವಾಗಿದೆ. ಮಕ್ಕಳಿಗೆ ಇದು ಪ್ರೇರಣಾದಾಯಕವಾಗಿದೆ. ತಾಲೂಕಿನಲ್ಲಿ 5 ವರ್ಷಗಳಲ್ಲಿ 1 ಲಕ್ಷ 25 ಸಾವಿರ ಮರಗಳನ್ನು ಸರಕಾರಿ ಶಾಲಾ ಆವರಣದಲ್ಲಿ ನಡುವ ಸಂಕಲ್ಪ ಮಾಡಿದ್ದು ಎಲ್ಲ ಶಿಕ್ಷಕರು ಹಾಗೂ ಶಾಲಾ ಮಕ್ಕಳು ಸಹಕರಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಲಕ್ಷ್ಮಣ ಸವದಿ ಹೇಳಿದರು

ತಾಲೂಕಿನ ಮುರಗುಂಡಿ ಗ್ರಾಮದಲ್ಲಿ ಶುಕ್ರವಾರ ನಡೆದ ಶಾಲಾ ಶಿಕ್ಷಣ ಇಲಾಖೆ, ಸರ್ಕಾರಿ ಪ್ರೌಢಶಾಲೆ ಮುರಗುಂಡಿ, ಪ್ರಾದೇಶಿಕ ಅರಣ್ಯ ವಲಯ ಅಥಣಿ, ಹಾಗೂ ಗ್ರಾಮ ಪಂಚಾಯತ ಮುರಗುಂಡಿಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ 200 ಕೊಡೆಗಳ (ಛತ್ರಿ) ವಿತರಣಾ ಕಾರ್ಯಕ್ರಮವನ್ನು ಶಾಸಕ ಲಕ್ಷ್ಮಣ ಸವದಿ ಅವರು ಸಸಿಗೆ ನೀರುಣಿಸವು ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಎಲ್ಲ ವಿದ್ಯಾರ್ಥಿಗಳಿಗೆ ಸಸಿಗಳನ್ನು ದತ್ತು ತೆಲಗೆದುಕೊಂಡು ಪ್ರತಿಯೊಂದು ಸಸಿಯೂ ಹೆಮ್ಮರವಾಗಿ ಬೆಳೆಯಬೇಕು. ನೆಟ್ಟಿರುವ ಸಸಿಗಳಿಗೆ ಪ್ರತಿದಿನ ನೀರು, ಗೊಬ್ಬರ ಹಾಕಿ ಚನ್ನಾಗಿ ಬೆಳೆಸಿ ಸುಂದರ ಹಾಗೂ ಸ್ವಚ್ಚ ಪರಿಸರ ನಿರ್ಮಾಣಕ್ಕೆ ಕೈಜೊಡಿಸಬೇಕು. ಅಲ್ಲದೆ ಮಕ್ಕಳಿಗೆ ಮಳೆಗಾಲದಲ್ಲಿ ಶಾಲೆಗೆ ಬರಲು ತೊಂದರೆ ಆಗಬಾರದು ಅನ್ನುವ ಹಿನ್ನಲೆಯಲ್ಲಿ ನಮ್ಮ ಅಭಿಮಾನಿ ಮಲ್ಲು ಕುಳ್ಳೋಳ್ಳಿ ಅವರು 200 ಛತ್ರಿಗಳನ್ನು ನೀಡಿರುವದು ಸಂತಸ ತಂದಿದೆ, ಮುರಗುಂಡಿ ಜನರ ಪರವಾಗಿ ಮತ್ತು ನನ್ನ ವೈಯಕ್ತಿಕ ಮಲ್ಲು ಕುಳ್ಳೋಳಿ ಅವರಿಗೆ ಅಭಿನಂದನೆ ಸಲ್ಲಿಸುತ್ತನೆ ಇಂತಹ ಕಾರ್ಯ ಇತರರಿಗೆ ಮಾದರಿಯಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಈ ವೇಳೆ ಮುರಗುಂಡಿ ಗ್ರಾ.ಪಂ ಅಧ್ಯಕ್ಷ ಅಶ್ವಿನಿ ಕಾಟಕರ, ಎಸ್ ಡಿ ಎಮ್ ಸಿ ಅಧ್ಯಕ್ಷ ಮಕಬುಲ ನದಾಫ್, ಮಾಜಿ ಜಿ.ಪಂ ಸದಸ್ಯ ವಿನಾಯಕ ಬಾಗಡಿ, ಗ್ರಾಮ ಪಂಚಾಯತ ಸದಸ್ಯರಾದ ಬರಮಾ ಮಗಾಡಿ, ಮಹಾದೇವ ಕೋರಿ, ರಮೇಶ ಕುಸನಾಳೆ, ಪರಸಭೆ ಸದಸ್ಯ ರಾಜು ಗುಡೊಡಗಿ, ಕ್ಷೇತ್ರಶಿಕ್ಷಣಾಧಿಕಾರಿ ಎಮ್. ಆರ್ ಮುಂಜೆ, ಅರಣ್ಯಾಧಿಕಾರಿ ರಾಕೇಶ ಅರ್ಜುನವಾಡ, ಈರಣ್ಣ ವಾಲಿ ಸೇರಿದಂತೆ ಶಾಲಾ ಮಕ್ಕಳು ಹಾಗೂ ಶಿಕ್ಷಕರು, ಹಾಗೂ ಗ್ರಾಮದ ಮುಖಂಡರಾದ ಭೀಮು ಸಡ್ಡಿ, ಕುಮಾರ ಪಾಟೀಲ, ಹೋಳೆಪ್ಪ ಪೂಜಾರಿ, ಅಮರ ಕೋಳಿ, ಮುರುಗೇಪ್ಪ ಕೋಳಿ, ಸುನಿಲ ಪವಾರ, ವಿಶಾಲ ನಿಂಬಾಳ, ಗಜ್ಜು ಜಬ್ಬಂಗಿ, ಮುತ್ತುರಾಜ ಮೊಕಾಶಿ, ಬಸ್ಸು ತೇರದಾಳ,  ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ