Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಶತ ಮತದಾನ ವಾಗ್ದಾನಕ್ಕೆ ಕೈಜೋಡಿಸಲಿ: ನಾಮದೇವ ಲಮಾಣಿ

ರನ್ನ ಬೆಳಗಲಿ: ಏ.25., ಪಟ್ಟಣದ ಪಂಚಾಯತ್ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಧೋಳ ಹಾಗೂ ಪಟ್ಟಣ ಪಂಚಾಯತ ಕಾರ್ಯಾಲಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸದಸ್ಯರ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ಜರಗಿತು.

ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳಾದ ನಾಮದೇವ ಲಮಾಣಿ ರವರು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳು &quoಣ;ಪ್ರತಿಶತ ಮತದಾನ ರನ್ನ ಬೆಳಗಲಿ ಪಟ್ಟಣದ ವಾಗ್ದಾನ&quoಣ;ಕ್ಕೆ ಕೈಜೋಡಿಸಲಿ ಎಂದು ಹೇಳುವುದರೊಂದಿಗೆ ತಮ್ಮ ನೆರೆಹೊರೆಯ ಕುಟುಂಬದ ಎಲ್ಲಾ ೧೮ ವರ್ಷ ಮೇಲ್ಪಟ್ಟ ನಿವಾಸಿಗಳಿಗೆ ಮತದಾನ ಜಾಗೃತಿ ಕರಪತ್ರ ನೀಡಿ, ಪ್ರಜಾಪ್ರಭುತ್ವದ ಶಕ್ತಿಯೇ ಮತದಾನ ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಅವರಲ್ಲಿ ಅರಿವನ್ನು ಮೂಡಿಸಬೇಕು. ಏಕೆಂದರೆ ಪ್ರತಿಯೊಂದು ಮತವು ಭಾರತೀಯ ನಾಗರಿಕನ ಅಮೂಲ್ಯ ಆಸ್ತಿ ಆ ಅಮೂಲ್ಯವಾದ ಆಸ್ತಿಯನ್ನು ಮಾರಿಕೊಳ್ಳದೆ, ಸ್ವಾಭಿಮಾನದಿಂದ ಮತವನ್ನು ಹಾಕಿ ದೇಶದ ಭದ್ರತೆಗೆ ಕೈಜೋಡಿಸಬೇಕು. ಆದರಿಂದ ರನ್ನ ಬೆಳಗಲಿಯಲ್ಲಿ ನೂರಕ್ಕೆ ನೂರರಷ್ಟು
ಮತದಾನ ಆಗುವಂತೆ ನಾವೆಲ್ಲರೂ ಮತದಾರ ಬಾಂಧವರಲ್ಲಿ ಜಾಗೃತಿ ಮೂಡಿ ಸುತ್ತ ಚುನಾವಣೆಯ ಹಬ್ಬವನ್ನು ಆಚರಿಸೋಣ ಎಂದು ತಿಳಿಸಿದರು.

ಪಟ್ಟಣ ಪಂಚಾಯತ ಸಿಬ್ಬಂದಿಯವರಾದ ಪಿ.ಡಿ. ನಾಗನೂರು, ಎಸ್. ಬಿ.ಚೌದ್ರಿ, ಎಸ್.ಜಿ.ಅಳ್ಳಿಮಟ್ಟಿ, ಸಚಿನ ಕಾಸರ, ರಾಜು ಮುಗಳಖೋಡ, ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸದಸ್ಯರು, ಪಂಚಾಯತ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ