Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾಂಕುಗಳು ಮಿನಿಮಮ್ ಬ್ಯಾಲೆನ್ಸ್ ಎಂಬ ಹಗಲು ದರೋಡೆಯನ್ನು ನಿಲ್ಲಿಸಲಿ : ಜನ ಹಿತ ಪಕ್ಷ ಆಗ್ರಹ 






 ಬಳ್ಳಾರಿ. ಅ. 10. : ದೇಶದಲ್ಲಿನ ಬ್ಯಾಂಕುಗಳಿಂದ ತನ್ನ ಗ್ರಾಹಕರು ತಮ್ಮ ಖಾತೆಯಲ್ಲಿ ಕನಿಷ್ಠ ಠೇವಣಿಯನ್ನು ಇಡದೆ ಇದ್ದಲ್ಲಿ ಅದಕ್ಕೆ ದಂಡವನ್ನು ವಿಧಿಸಲಾಗುತ್ತಿದೆ ಇದು ತನ್ನ ಗ್ರಾಹಕರನ್ನು ಹಗಲು ದರೋಡೆ ಮಾಡುವ ಕ್ರಮವಾಗಿದೆ ಎಂದು ಜನ ಹಿತಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ವಿ ಜಯರಾಮ್ ಆರೋಪಿಸಿದರು.

 ಅವರು ಇಂದು ಜನಹಿತ ಪಕ್ಷದಿಂದ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, ಬ್ಯಾಂಕುಗಳು ಈಗಾಗಲೇ ಕಡಿತಗೊಳಿಸಿರುವ ಶುಲ್ಕದ ಹೆಸರಿನ ದಂಡದ ಹಣವನ್ನು ಅವರವರ ಖಾತೆಗಳಿಗೆ ಮರಳಿಸಬೇಕು ಕನಿಷ್ಠ ಬ್ಯಾಲೆನ್ಸ್ ಮೊತ್ತ ಎಂಬುದನ್ನು ರದ್ದು ಮಾಡಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನ ಅಧಿಕಾರಿಗಳನ್ನು ಒತ್ತಾಯಿಸಿದರು. ದೇಶದ ನಾಗರಿಕರು ಹಣವನ್ನು ಖಾಸಗಿ ವ್ಯಕ್ತಿಗಳಿಗೆ ನೀಡಿ ಮೋಸ ಹೋಗುವುದನ್ನು ತಪ್ಪಿಸಿಕೊಳ್ಳಲು ಬ್ಯಾಂಕ್ ಗಳಲ್ಲಿ ಜಮೆ ಮಾಡುತ್ತಾರೆ ಇಂಥ ಜನರ ವಿಶ್ವಾಸವನ್ನು ಬ್ಯಾಂಕುಗಳು ಕನಿಷ್ಠ ಬ್ಯಾಲೆನ್ಸ್ ನಿಂದ ಕಳೆದುಕೊಳ್ಳುತ್ತಿದ್ದಾರೆ, ಅತ್ಯಂತ ಮುಖ್ಯವಾಗಿ ಸ್ವಯಂ ಚಾಲಿತವಾಗಿ ಆ ಶುಲ್ಕ ಈ ಶುಲ್ಕ ಜಿಎಸ್‌ಟಿ ಇತರ ತೆರಿಗೆ ದಂಡ ಎಂದು ಸಾರ್ವಜನಿಕರ ಹಣವನ್ನು ಕಡಿತಗೊಳಿಸಿ ಜನರ ಜೇಬಿಗೆ ಕನ್ನ ಹಾಕುತ್ತಿದೆ ಇದನ್ನು ಕೂಡಲೇ ರದ್ದುಪಡಿಸಬೇಕೆಂದು ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಗೆ ಪತ್ರ ಬರೆದು ಆಗ್ರಹಿಸಿದರು.

 ಈ ರೀತಿಯಾಗಿ ಎಲ್ಲಾ ಕನಿಷ್ಠ ಬ್ಯಾಲೆನ್ಸ್ ಎಂಬ ನಿಯಮಗಳನ್ನು ರದ್ದುಪಡಿಸಿ ಅದಕ್ಕೆ ಸಂಬಂಧಿಸಿದ ಎಲ್ಲಾ ಶುಲ್ಕಗಳನ್ನು ಮರುಪಾವತಿಸಿ ಖಾತೆಗಳನ್ನು   ಸ್ಥಗಿತ ಗೊಳಿಸುವ ವ್ಯವಸ್ಥೆಯನ್ನು ರದ್ದುಪಡಿಸಬೇಕು,  ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ  ದೇಶದ ನಾಗರಿಕರನ್ನು ತಮ್ಮ ಠೇವಣಿ ಹಣವನ್ನು ಬ್ಯಾಂಕ್ ನಿಂದ ಹಿಂಪಡೆಯುವಂತಹ ಅಭಿಯಾನ ಮತ್ತು ಜಾಗೃತಿಯನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.

 ಈ ಪತ್ರಿಕಾಗೋಷ್ಠಿಯಲ್ಲಿ ಜನಹಿತ ಪಕ್ಷದ ಜಿಲ್ಲಾಧ್ಯಕ್ಷರು ಇತರ ಪದಾಧಿಕಾರಿಗಳು ಇದ್ದರು.

 ಈ ಸಂದರ್ಭದಲ್ಲಿ ಜನ ಜಾಗೃತಿಯ ಪೋಸ್ಟರ್ಗಳನ್ನು  ಜನಹಿತ ಪಕ್ಷದಿಂದ  ಬಿಡುಗಡೆಗೊಳಿಸಲಾಯಿತು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ