Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾತಂತ್ರ್ಯವನ್ನು ಗೌರವಿಸೋಣ, ದೇಶ ರಕ್ಷಣೆ ಮಾಡೋಣ : ಎಫ್ ಎಸ್ ಸಿದ್ದನಗೌಡರ 



ಬೈಲಹೊಂಗಲ: ಬ್ರಿಟಿಷರ ವಿರುದ್ದ ಸಂಘಟನಾತ್ಮಕ ಹೋರಾಟ ಮಾಡುವದರೊಂದಿಗೆ ಯರವಾಡ ಜೈಲು ವಾಸಿಯಾಗಿದ್ದ ಗ್ರಾಮದ ನೂರಾರು ಸ್ವಾತಂತ್ರ್ಯ ಹೊರಾಟಗಾರರ ಆದರ್ಶ ಜೀವನ ಮಂದಿನ ಪೀಳಿಗೆಗೆ ತತ್ವಾದರ್ಶಗಳು ಅನುಕರಣೆಯಾಗಲೆಂದು ಪ್ರತಿವರ್ಷ ಅ14ರಂದು ಮಧ್ಯರಾತ್ರಿ ಧ್ವಜಾರೋಹಣ ಮಾಡಲಾಗುತ್ತಿದೆ ಎಂದು ನ್ಯಾಯವಾದಿ ಎಫ್‌ ಎಸ್‌ ಸಿದ್ದನಗೌಡರ ಹೇಳಿದರು.

   ಗುರುವಾರ ಮಧ್ಯರಾತ್ರಿ ಹಮ್ಮಿಕೊಂಡಿದ್ದ ಅಖಂಡ ಭಾರತ ಸಂಕಲ್ಪ‌ದಿನ ಹಾಗೂ ಗ್ರಾಮದ 215 ಕ್ಕೂ ಹೆಚ್ಚಿನ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆಯ ಕಾರ್ಯಕ್ರಮದಲ್ಲಿ ಮಾತನಾಡಿ,

ಗ್ರಾಮದ ಯುವಕರು ಉತ್ತಮ ರೀತಿಯಲ್ಲಿ ಸುಶಿಕ್ಷಿತರಾಗಿ ತಮ್ಮ ಜೀವನದಲ್ಲಿ ಸಾಧನೆಯ ಉತ್ತುಂಗಕ್ಕೆರಬೇಕು.  79ನೇ ಸ್ವಾತಂತ್ರ್ಯೋತ್ಸವವನ್ನು ಆಚರಣೆಯಲ್ಲಿದ್ದು ನಮ್ಮ ಹಿರಿಯರ ತ್ಯಾಗ ಬಲಿದಾನದಿಂದ ಭಾರತ ಬ್ರೀಟಿಷರ ದಾಸ್ಯದಿಂದ ಮುಕ್ತವಾಗಿದೆ. ಅವರು ತಂದು ಕೊಟ್ಟ ಸ್ವಾತಂತ್ರ್ಯವನ್ನು ಪ್ರತಿಯೊಬ್ಬರು ಗೌರವಿಸೋಣ, ದೇಶದ ರಕ್ಷಣೆ ಕಾನೂನು ಸುವ್ಯವಸ್ಥೆಯ ಪಾಲನೆ ನಮ್ಮಲ್ಲರ ಕರ್ತವ್ಯವಾಗಿದೆ ಎಂದರು. ಧ್ವಜಾರೋಹಣ ನೆರವೆರಿಸಿ  ಸೋಮಶೇಖರ ವಣ್ಣುರ  ಮಾತನಾಡಿ, 1905 ರಲ್ಲಿ ರಾಷ್ಟ್ರಾಭಿಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬ್ರೀಟಿಷರ್ ವಿರುದ್ದ ಹೋರಾಟ ಮಾಡಿ ಯರವಾಡ ಜೈಲುವಾಸ ಅನುಭವಸಿದ ಸ್ವಾತಂತ್ರ್ಯ ಹೊರಾಟಗಾರರನ್ನು ಪ್ರತಿಯೊಬ್ಬರು ಸ್ಮರಣೆ ಮಾಡಬೇಕಾಗಿದೆ. ಗ್ರಾಮಸ್ಥರ ಹೋರಾಟದ ಮನೊಭಾವನೆ ಕಂಡು ಗ್ರಾಮಕ್ಕೆ ಗಾಂಧೀಜಿ ಅಗಮಿಸಿ 93 ವರ್ಷವಾಗಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಆಗಮಿಸಿ 92 ವರ್ಷ ಸಂದಿದೆ. ಬಾಲಗಂಗಾಧರ ತಿಲಕರು ಗ್ರಾಮಕ್ಕೆ ಬಂದು 120 ವರ್ಷ ಸಂದಿರುವ ಪ್ರಯುಕ್ತ ಪ್ರತಿ ವರ್ಷ ಗ್ರಾಮದ  ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ ಅಗಸ್ಟ್ 14 ರಂದು ಮಧ್ಯರಾತ್ರಿ12 ಘಂಟೆಗೆ ಧ್ವಜಾರೋಹಣ ಮಾಡುವ ಮೂಲಕ ಸ್ವಾತಂತ್ರ್ಯೋತ್ಸವ ಅಚರಿಸುತ್ತಾ ಬಂದಿರುವದು ನಮ್ಮೂರಿನ ಹೆಮ್ಮೆ. ಸ್ವಾತಂತ್ರ್ಯ ಹೋರಾಟದಲ್ಲಿ ಗ್ರಾಮದ ಹೆಣ್ಣು ಮಕ್ಕಳು ಪಾಲ್ಗೊಂಡಿರುವದು ಈ ಗ್ರಾಮದ ವಿಶೇಷವಾಗಿದ್ದು  215ಕ್ಕೂ ಹೆಚ್ಚು ಸ್ವಾತಂತ್ರ್ಯದ ಹೋರಾಟದಲ್ಲಿ ಪಾಲ್ಗೊಂಡಿರುವದು ನಮಗೆಲ್ಲ ಆದರಣಿಯ ಸ್ವಾತಂತ್ರ್ಯ ಹೋರಾಟದಲ್ಲಿ ಈ ಗ್ರಾಮಕ್ಕೆ 3 ಮಹಾನ್ ನಾಯಕರು ಆಗಮಿಸಿದ ಇತಿಹಾಸ ಹೊಂದಿದ ಹೊಸೂರಿನಲ್ಲಿ ಇಷ್ಟೊಂದು ಅದ್ದೂರಿಯಾಗಿ ಪ್ರತಿವರ್ಷ ಮಧ್ಯರಾತ್ರಿ ಧ್ವಜಾರೋಹಣ ಕಾರ್ಯಕ್ರಮ ಗ್ರಾಮದ ಘನತೆಯನ್ನು ಹೆಚ್ಚಿಸಿದೆ ಎಂದರು.

ಗ್ರಾಮದ  ಸೋಮಲಿಂಗಪ್ಪ ಕೊಟಗಿ, ಗೌಡಪ್ಪ ಹೊಸಮನಿ, ಮಂಜುನಾಥ ಬುಡಶೆಟ್ಟಿ, ಶಿವಾನಂದ ಬೋಳೆತ್ತಿನ, ನಾಗರಾಜ ಬುಡಶೆಟ್ಟಿ, ಗಂಗಾಧರಗೌಡ ಸಿದ್ದನಗೌಡರ, ಸಂಜು ಸಂಗೊಳ್ಳಿ,  ಶಿವಾನಂದ ಅಪ್ಪೊಜಿ,  ಸುನಿಲ್ ಸೊಗಲ, ಪ್ರಮೋದ ವಕ್ಕುಂದ, ಪೃಥ್ವಿಗೌಡ ಸಿದ್ದನಗೌಡರ, ಸುರೇಶ ಗುಳಣ್ಣವರ,  ನಾಗರಾಜ ಚಿಕ್ಕೊಪ್ಪ, ಆಕಾಶ ತೇಲಿ, ಶಿವಾನಂದಗೌಡ ಸಿದ್ದನಗೌಡರ, ಮಂಜುನಾಥ ಬೋಳೆತ್ತಿನ,  ಮಲ್ಲಿಕಾರ್ಜುನ  ಚಿಕ್ಕೊಪ್ಪ, ರಮೇಶ ಬೋಳೆತ್ತಿನ, ಹಾಗೂ ಅನೇಕ ದೇಶಭಕ್ತರು ಸೇರಿದ್ದರು. ಮುರಗೋಡ ಠಾಣೆಯ ಎಎಸ್ಐ ಗಂಗಾಧರ ಆಲದಕಟ್ಟಿ,  ಎಫ್.ಎಮ್.ಮದ್ಲಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ