Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುತಾತ್ಮರ ಸೇವೆ ಗೌರವಿಸೋಣ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ

ಬಳ್ಳಾರಿ,ಅ.21: ದೇಶಕ್ಕಾಗಿ ದೇಶದ ರಕ್ಷಣೆಗಾಗಿ ವಿಧಿವಶರಾದ ಮತ್ತು ಸಾರ್ವಜನಿಕರ ನೆಮ್ಮದಿಗೆ ಕಾರಣರಾದ ಪೊಲೀಸರ ಹುತಾತ್ಮರ ಬಗ್ಗೆ ಗೌರವ ಭಾವನೆ ಹೊಂದಬೇಕು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.


ಮಂಗಳವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.


ದೇಶದ ಎಲ್ಲಾ ರಾಜ್ಯ ಮತ್ತು ಕೇಂದ್ರ, ಅರೆಸೇನಾ ಪಡೆಗಳಲ್ಲಿ ದೇಶದ ಆಂತರಿಕ ಭದ್ರತೆಗಾಗಿ ಸಮವಸ್ತ್ರಗಳ ಮೂಲಕ ಕರ್ತವ್ಯದಲ್ಲಿ ಹುತಾತ್ಮರಾದವರ ಸೇವೆಗೆ ನಮನ ಸಲ್ಲಿಸಬೇಕು ಎಂದು ಸ್ಮರಿಸಿದರು.


ಪೊಲೀಸರು ನನಗಿಂತ ನನ್ನ ಕರ್ತವ್ಯ ಮೇಲು ಎಂದು ಭಾವಿಸುತ್ತಾರೆ. ನಾವು ವ್ಯಕ್ತಿಯನ್ನು ಕಳೆದುಕೊಳ್ಳುವುದಿಲ್ಲ, ಬದಲಾಗಿ ಅಮೂಲ್ಯ ಜೀವವನ್ನು ಕಳೆದುಕೊಳ್ಳುತ್ತೇವೆ. ಸಮಾಜದ ಶಾಂತಿಯ ಬದುಕಿಗೆ ಪೊಲೀಸರ ಸೇವೆ ಅತ್ಯಂತ ಶ್ಲಾಘನೀಯವಾದದ್ದು. ಪೊಲೀಸರು ಕರ್ತವ್ಯದ ಒಂದು ಮಾನವ ಸಂಪನ್ಮೂಲ ಎಂದು ಹೇಳಿದರು.


ಬಳ್ಳಾರಿ ವಲಯ ಉಪ ಪೊಲೀಸ್ ಮಹಾ ನಿರೀಕ್ಷಕರಾದ ವರ್ತಿಕ ಕಟಿಯಾರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪೊಲೀಸ್ ಹುತಾತ್ಮರ ದಿನವನ್ನು ಪ್ರತಿ ವರ್ಷ ಅಕ್ಟೋಬರ್ 21 ರಂದು ಆಚರಿಸಲಾಗುತ್ತದೆ. ಈ ದಿನವನ್ನು ಪೊಲೀಸ್ ಸಂಸ್ಮರಣಾ ದಿನ ಎಂದೂ ಕರೆಯುತ್ತೇವೆ. 1958 ರಲ್ಲಿ ಲಡಾಖ್‌ನ ಹಾಟ್ ಸ್ಟ್ರಿಂಗ್ ನಲ್ಲಿ ಚೀನಾ ಸೈನಿಕರೊಂದಿಗಿನ ಘರ್ಷಣೆಯಲ್ಲಿ ಪ್ರಾಣತ್ಯಾಗ ಮಾಡಿದ 10 ಪೊಲೀಸ್ ಅಧಿಕಾರಿಗಳನ್ನು ಗೌರವಿಸಲು 1960 ರ ಅಕ್ಟೋಬರ್ 21 ರಂದು, ವೀರ ಪೊಲೀಸರ ತ್ಯಾಗವನ್ನು ಗೌರವಿಸಲು ಪೊಲೀಸ್ ಸಂಸ್ಮರಣಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಮಾತನಾಡಿ, ಪೊಲೀಸರ ತ್ಯಾಗ ಮತ್ತು ರಾಷ್ಟ್ರೀಯ ಭದ್ರತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಎಲ್ಲರೂ ಕೈಜೋಡಿಸಬೇಕು. ದೇಶದಲ್ಲಿ 191 ಪೊಲೀಸರು ಮತ್ತು ಕರ್ನಾಟಕದಲ್ಲಿ 8 ಜನ ಪೊಲೀಸರು ಹುತಾತ್ಮರಾಗಿದ್ದರೆ ಎಂದು ಹೇಳಿದರು.


ಇದಕ್ಕೂ ಮೊದಲು ಆರ್‌ಪಿಎಫ್ ಕಮಾಂಡರ್ ಸಿಕೀಂದ್ರ ಅವರು ಪೊಲೀಸ್ ತುಕಡಿಗಳಿಂದ ವಂದನೆ ಸ್ವೀಕರಿಸಿದರು. ನಂತರ ಪಥ ಸಂಚಲನ ಮೂಲಕ ಹುತಾತ್ಮರ ಶಾಂತಿಗಾಗಿ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಆ ಬಳಿಕ ಧ್ವಜವನ್ನು ಅರ್ಧಕ್ಕೆ ಇಳಿಸಿ ಏರಿಸಲಾಯಿತು.


ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೆ.ಪಿ.ರವಿಕುಮಾರ್, ಎಸ್.ನವೀನ್ ‌ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವರ್ಗ ಕುಟುಂಬ ವರ್ಗದವರು, ಸಾರ್ವಜನಿಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ