Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಪ್ಪದೇ ಪೋಲಿಯೋ ಹನಿ ಹಾಕಿಸಿ ಮಕ್ಕಳನ್ನು ಕಾಪಾಡೋಣ

ಪೋಲಿಯೋ ಹನಿ ಹಾಕುವ ಕಾರ್ಯಕ್ರಮ ಚಾಲನೆಯಲ್ಲಿ ಯುವ ನಾಯಕಿ ಶ್ರೀದೇವಿ ಉತ್ಲಾಸರ ಅಭಿಪ್ರಾಯ

ಹಸಿರು ಕ್ರಾಂತಿ ವರದಿ ವಿಜಯಪುರ

ಪೋಲಿಯೋ ಮಾರಣಾಂತಿಕ ಕಾಯಿಲೆಯಾಗಿದ್ದು, ಹೆಚ್ಚಾಗಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳೇ ಈ ಕಾಯಿಲೆಗೆ ತುತ್ತಾಗುವುದರಿಂದ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋದಿಂದ ಮಕ್ಕಳನ್ನು ಕಾಪಾಡೋಣ ಎಂದು ಎಐಸಿಸಿ ಮಾಜಿ ಸದಸ್ಯೆ ಹಾಗೂ ಕಾಂಗ್ರೆಸ್‌ ಯುವ ನಾಯಕಿ ಶ್ರೀದೇವಿ ಉತ್ಲಾಸರ ಹೇಳಿದರು.

ಶಾಂತಿ ನಗರದ ಆರೋಗ್ಯ ಕೇಂದ್ರದಲ್ಲಿ ಪೋಲಿಯೋ ಲಿಸಿಕಾ ಕಾರ್ಯಕ್ರಮದಲ್ಲಿ ಪೋಲಿಯೋ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 1953 ರಲ್ಲಿ ಪೋಲಿಯೋ ಲಸಿಕೆ ಅಭಿವೃದ್ಧಿಪಡಿಸಿದ ನಂತರ ಪೋಲಿಯೊ ಪ್ರಕರಣಗಳು ಗಮನಾರ್ಹ ಇಳಿಕೆ ಕಂಡಿವೆ. ಕೆಲವು ದೇಶಗಳಲ್ಲಿ ಪೋಲಿಯೋ ಇನ್ನೂ ಜೀವಂತವಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಮ್ಮ ಸರ್ಕಾರಗಳು ಅಗತ್ಯ ಎಚ್ಚರಿಕಾ ಕ್ರಮಗಳನ್ನು ವಹಿಸಿರುವುದರಿಂದ ಪೋಲಿಯೋ ಲಸಿಕಾ ಕಾರ್ಯಕ್ರಮಗಳು ಮುಂದುವರೆದಿವೆ. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸದೇ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ವಿರುದ್ಧ ಹೋರಾಡಲು ಮಕ್ಕಳ ಆತ್ಮಬಲ ಹೆಚ್ಚಿಸೋಣ ಎಂದು ಮನವಿ ಮಾಡಿದರು.

Advertisement

ಡಾ.ಶ್ರೀಧರ ಓತಗೇರಿ ಮಾತನಾಡಿ, ನರಮಂಡಲದ ಮೇಲೆ ಪರಿಣಾಮ ಬೀರುವ ಪೋಲಿಯೋ ವೈರಸ್‌ ಸೋಂಕಿತ ವ್ಯಕ್ತಿಯ ಬೆನ್ನುಹುರಿ ಮತ್ತು ಮೆದುಳಿನ ಮೇಲೆ ದಾಳಿ ಮಾಡುವ ಪರಿಣಾಮ ಮಗುವಿನ ದೇಹದ ಕೆಲವು ಭಾಗಗಳನ್ನು ಚಲಿಸಲು ಸಾಧ್ಯವಾಗದ ಕಾರಣ ಪಾರ್ಶ್ವವಾಯು ಉಂಟಾಗುತ್ತದೆ. ಪೋಲಿಯೋ ವೈರಸ್‌ನಿಂದ ಸೋಂಕಿಗೆ ಒಳಗಾದ ಕೆಲವರು ಪಾರ್ಶ್ವವಾಯು (ಅಬಾರ್ಟಿವ್ ಪೋಲಯೋ) ಕ್ಕೆ ಕಾರಣವಾಗದ ಒಂದು ರೀತಿಯ ಪೋಲಿಯೋಗೆ ತುತ್ತಾಗುತ್ತಾರೆ. ಸಾಮಾನ್ಯವಾಗಿ ಇದು ಇತರ ವೈರಲ್ ರೋಗಗಳ ವಿಶಿಷ್ಟವಾದ ಸೌಮ್ಯ, ಜ್ವರ ತರಹದ ಚಿಹ್ನೆಗಳು ಮತ್ತು ರೋಗ ಲಕ್ಷಣಗಳನ್ನುಂಟು ಮಾಡುತ್ತದೆ ಎಂದು ವಿವರಿಸಿದರು.

ಈ ವೇಳೆ ಪಿಎಚ್‌ಸಿಒ ರತ್ನ ಪೂಜಾರ ಸೇರಿದಂತೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ನಗರ ನಿವಾಸಿಗಳು ಉಪಸ್ಥಿತರಿದ್ದರು.

ಮಕ್ಕಳನ್ನು ಪೋಲಿಯೋ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಾಲಕರು 5 ವರ್ಷದೊಳಗಿನ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಬೇಕು. ಮಗುವಿನ ಮುಂದಿನ ಆರೋಗ್ಯಕರ ಭವಿಷ್ಯದ ದೃಷ್ಟಿಯಿಂದ ಪೋಲಿಯೋ ಹನಿ ಹಾಕಿಸುವುದು ಬಹಳಷ್ಟು ಅವಶ್ಯವಾಗಿದೆ.
-ಶ್ರೀದೇವಿ ಉತ್ಲಾಸರ, ಯುವ ನಾಯಕಿ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೈಜ ದೇವರ ಕೆಲಸ ಮಾಡುತ್ತಿರುವ ಕ್ರೆಡಿಟ್‌ ಆಕ್ಸೆಸ್ ಇಂಡಿಯಾ ಫೌಂಡೇಶನ್‌ಗ್ರಂಥಾಲಯ ಸಂಘದ ಚಟುವಟಿಕೆ ವಿಸ್ತರಣೆಯಲ್ಲಿ ಒಗ್ಗೂಡಿ ಕಾರ್ಯನಿರ್ವಹಿಸಿನಾಲತವಾಡ ಸಮುದಾಯ ಆಸ್ಪತ್ರೆಯಲ್ಲಿ ಕಿರುಕುಳ ಆರೋಪ: ಹೊರಗುತ್ತಿಗೆ ಸಿಬ್ಬಂದಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ, ಪ್ರತಿಭಟನೆಮನೆಗಳಿಗೆ ಭೇಟಿ ನೀಡಿ ಎನ್ಯೂಮರೇಷನ್ ನಮೂನೆ ವಿತರಿಸಿದ ಡಿಸಿಕಾರ್ಮಿಕರು ಕೈಜೋಡಿಸಿದರೆ 4 ಲಕ್ಷ ಟನ್ ಕಬ್ಬು ನುರಿಸುವ  ಗುರಿ : ಚನ್ನರಾಜ ಹಟ್ಟಿಹೊಳಿಇಂದಿನಿಂದ ಬೂತ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ಸಂಚಾರ ಸುರಕ್ಷತೆ : ಕ್ರ್ಯಾಶ್ ಬಾರಿಯರ್ ದುರಸ್ತಿಧಾರವಾಡದಲ್ಲಿ ಮೌನೇಶ್ವರ ಸ್ವಾಗತ ಕಮಾನು ಉದ್ಘಾಟನೆ ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಪಿ ಎಸ್ ಇ ರಾಘವೇಂದ್ರ ಖೋತಧರ್ಮದಿಯಾ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್, ಪುಸ್ತಕ ಹಾಗೂ ಕಲಿಕಾ ಕಿಟ್ ವಿತರಣೆ