ಇಂಡಿ,ಜು,೧೦ : ಇಂಡಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಯಶವಂತರಾಯಗೌಡ ವ್ಹಿ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ತಾಲೂಕಿನ ಭಾರತಿಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಇಂಡಿ ವತಿಯಿಂದ ಪ್ರಜಾಪ್ರಭುತ್ವದ ಮಾರ್ಗದಲ್ಲಿ ವಿಶಿಷ್ಟವಾದ ಸಹಿ ಸಂಗ್ರಹ ಹಾಗೂ ಪತ್ರ ಚಳುವಳಿ ಅಭಿಯಾನದ ಮೂಲಕ ಸಾವಿರಾರು ವಿದ್ಯಾರ್ಥಿಗಳ ಅಭಿಪ್ರಾಯ ಮತ್ತು ಆಶಯಗಳನ್ನು ಸಂಗ್ರಹಿಸಿ, ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಂಚೆ ಮುಖಾಂತರ ಮನವಿ ಪತ್ರವನ್ನು ಕಳುಹಿಸಲಾಯಿತು.
ಶಿಕ್ಷಣ, ನೀರಾವರಿ, ರಸ್ತೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಇಂಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯಶವಂತರಾಯಗೌಡ ಪಾಟೀಲ ಅವರ ಸೇವೆಯನ್ನು ಗುರುತಿಸಿ, ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾಗಿದೆ.
ಈ ಅಭಿಯಾನವು ಕ್ಷೇತ್ರದ ಜನರ ಅಭಿಮಾನ, ವಿಶ್ವಾಸ ಮತ್ತು ಆಶಯಗಳ ಪ್ರತೀಕವಾಗಿದ್ದು, ಇಂಡಿ ಕ್ಷೇತ್ರದ ಧ್ವನಿಯನ್ನು ಸರ್ಕಾರದ ಗಮನಕ್ಕೆ ತರುವ ಒಂದು ಮಹತ್ವದ ಪ್ರಯತ್ನವಾಗಿದೆ.
ಅಭಿಯಾನದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಅನೀಲಕುಮಾರ ಅತನೂರ, ರಾಹುಲ ಮಡ್ಡಿಮನಿ, ಪ್ರಕಾಶ, ಸುದೀಪ, ಸಂತೋಷ, ಅಕಬರ, ಗೋವಿಂದ, ಭರತ, ಈಶ್ವರ, ಸುರೇಶ ಸೇರಿದಂತೆ ಅನೇಕರು ಪಾಲ್ಗೋಂಡಿದ್ದರು.
