Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರೇ ಸೂಳಿಕೇರಿ ತಾಂಡಾದಲ್ಲಿ ಅಂಗನವಾಡಿ ಮಕ್ಕಳಿಗೆ ಅಕ್ಷರಾಭ್ಯಾಸ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ


ಕೊಪ್ಪಳ ಜುಲೈ,೧೦: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಿಕಾ ಟಾಟಾ ಟ್ರಸ್ಟ್ ಸಹಯೋಗದೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗುರುವಾರದಂದು ಕೊಪ್ಪಳ ಯೋಜನೆಯ ಹಿರೇ ಸೂಳಿಕೇರಿ ತಾಂಡಾದಲ್ಲಿ ಅಂಗನವಾಡಿ ಮಕ್ಕಳಿಗೆ ಅಕ್ಷರಾಭ್ಯಾಸ ಹಾಗೂ ಒಂದನೇ ತರಗತಿಗೆ ಹೋಗುವ ೧೦ ಮಕ್ಕಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಅಂಗನವಾಡಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಅಂಗನವಾಡಿಯಲ್ಲಿ ಮೂರು ವರ್ಷ ಶಾಲಾ ಪೂರ್ವ ಶಿಕ್ಷಣ ಅಧ್ಯಯನ ಮಾಡಿ ಒಂದನೇ ತರಗತಿಗೆ ಹೋಗುವ ಮಕ್ಕಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಮಾಡಲಾಯಿತು ಹಾಗೂ ಅತಿಥಿಗಳಿಂದ ಮಕ್ಕಳಿಗೆ ಅಕ್ಷರಾಭ್ಯಾಸವನ್ನು ಮಾಡಿಸಲಾಯಿತು.
ಒಂದನೇ ತರಗತಿಗೆ ಹೋಗುವ ಮಕ್ಕಳು ಪ್ರಸ್ತುತ ಇಲ್ಲಿಯವರೆಗೆ ಅಂಗನವಾಡಿಯಲ್ಲಿ ಕಲಿತ ಚಟುವಟಿಕೆಗಳು, ಆಕಾರಗಳು, ಬಣ್ಣಗಳು, ಅಂಕಿಗಳು, ಅಂಗನವಾಡಿ ನಿಯಮಗಳು, ಶಿಶು ಗೀತೆಗಳು, ಚಿಕ್ಕದು ದೊಡ್ಡದು, ಭೌತಿಕ ಚಟುವಟಿಕೆ ಹಾಗೂ ಅಂಕಿಗಳ ಕುರಿತು ಮಕ್ಕಳಿಂದ ಚಟುವಟಿಕೆ ಮಾಡಿಸಲಾಯಿತು. ಕಾರ್ಯಕ್ರಮಕ್ಕೆ ಶಾಲಾಪೂರ್ವ ಶಿಕ್ಷಣದ ಕುರಿತು ಮಾಹಿತಿ ನೀಡಿ ಮಕ್ಕಳು ಚಟುವಟಿಕೆ ಆಧಾರಿತ ಶಿಕ್ಷಣವನ್ನು ನೀಡುವಲ್ಲಿ ಶಾಲಾ ಪೂರ್ವ ಶಿಕ್ಷಣವು ಯಶಸ್ವಿ ಕಾರ್ಯಕ್ರಮವಾಗಿರುತ್ತದೆ. ಮಕ್ಕಳಿಗೆ ಅಂಗನವಾಡಿ ಕೇಂದ್ರವು ಭದ್ರಬುನಾದಿಯಾಗಿ ಕೆಲಸ ನಿರ್ವಹಿಸುತ್ತದೆ ಎಂದು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಿದ್ದಪ್ಪ ಕುರಿ ಹೇಳಿದರು.
ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಹನುಮಂತಪ್ಪ ಮಾತನಾಡಿ, ನಾವು ಕಲಿಯುವಾಗ ಯಾವುದೇ ಚಟುವಟಿಕೆಯನ್ನು ಮಾಡುತ್ತಿರಲಿಲ್ಲ. ಇಂದಿನ ಮಕ್ಕಳು ಕಂಪ್ಯೂಟರ್‌ನಂತೆ ಉತ್ತರವನ್ನು ನೀಡುತ್ತಾರೆ. ಅಂಗನವಾಡಿಯಲ್ಲಿ ಕಲಿತ ಮಕ್ಕಳು ಒಂದನೇ ತರಗತಿಗೆ ಬಂದಾಗ ಧೈರ್ಯವಾಗಿ ಉತ್ತರಿಸುವ ಮತ್ತು ಪ್ರತಿದಿನ ಶಾಲೆಗೆ ಬರುವ ಹವ್ಯಾಸವನ್ನು ರೂಢಿಸಿಕೊಂಡಿದ್ದಾರೆ. ಇದು ನಮಗೆ ಬಹಳ ಖುಷಿಯನ್ನು ತಂದುಕೊಡುತ್ತದೆ. ಮಕ್ಕಳ ತೊದಲು ನುಡಿಯಲ್ಲಿ ಚಟುವಟಿಕೆಗಳನ್ನು ಮಾಡುವುದನ್ನು ನೋಡಿದಾಗ ಬಹಳ ಖುಷಿ ಆಗುತ್ತದೆ ಎಂದು ಹೇಳಿದರು. ಹಾಗೆಯೇ ಪಾಲಕರು ಕೂಡ ಇನ್ನು ಮೇಲೆ ತಪ್ಪದೇ ಸಹಾಯಕಿ ಅಂಗನವಾಡಿಗೆ ಕರೆದುಕೊಂಡು ಹೋಗುವ ಮೊದಲು ಮಕ್ಕಳನ್ನು ಶಾಲೆಗೆ ತಯಾರಿ ಮಾಡಿ ಕಳಿಸುತ್ತೇವೆ ಎಂದು ಸಭೆಯಲ್ಲಿ ಹೇಳಿಕೊಂಡರು.
ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರು, ಶಾಲಾ ಅಧ್ಯಕ್ಷರು, ಬಾಲ ವಿಕಾಸ ಕಮಿಟಿ ಅಧ್ಯಕ್ಷರು ಹಾಗೂ  ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣಪ್ಪ, ಮೇಲ್ವಿಚಾರಕಿ ಮಂಜುಳಾ ಕುಂಬಾರ್, ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರು ಸೇರಿದಂತೆ ಇನ್ನಿತರರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಜಪೂತ ಸಮೂದಾಯಗಳ ಅಭಿವೃದ್ದಿ ನಿಗಮ ಸ್ಥಾಪಿಸಲು ಮನವಿರೈತರ ಪಂಪ್ ಸೆಟ್ ಗಳಿಗೆ ಸಮರ್ಪಕವಾಗಿ ಪೂರೈಕೆಯಾಗದ ವಿದ್ಯುತ್ : ಸುರೇಬಾನ ಹೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿ ರೈತರ ಪ್ರತಿಭಟನೆಸಂಸದ ಈರಣ್ಣ ಕಡಾಡಿ ಅವರ ನಿಧಿಯಿಂದ ಬಿ. ಕೆ. ಮಾಡೆಲ್ ಹೈಸ್ಕೂಲ್‌ಗೆ ಸ್ಮಾರ್ಟ್ ಬೋರ್ಡ್ ಕೊಡುಗೆ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಪದಗ್ರಹಣ ಇಂದುಖಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಯ ಶಾಸಕ ರಾಜು ಕಾಗೆ ಚಾಲನೆ ನೀಡಿದರು ಪವಾಡ ಬಸವೇಶ್ವರ ದೇವಸ್ಥಾನ ಕಳ್ಳತನ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ, ಮೂರ್ತಿ ಮರುಸ್ಥಾಪನೆಗೆ ಕ್ರಮ ? ಶಾಸಕ ಸಿ.ಎಸ್. ನಾಡಗೌಡವಿದ್ಯುತ್ ಅವಘಡ ಗುತ್ತಿಗೆ ನೌಕರ ಸಾವು ಬ್ರಿಟೀಷ್ ಭಾರತದಲ್ಲಿ ಇಳಕಲ್ ಒಂದು ಆಡಳಿತ ಕೇಂದ್ರವಾಗಿತ್ತು  : ಡಾ. ಎಸ್.ಆರ್ ನಾಗಣ್ಣನವರ್ಸಾಮಾಜಿಕ ಜವಾಬ್ದಾರಿ ಹಾಗೂ ಪರಿಸರ ಸಂರಕ್ಷಣೆಯ ಮನೋಭಾವ ಬೆಳೆಸಿಕೊಳ್ಳಬೇಕು : ನ್ಯಾ.ಜಿ.ಎ. ಮೂಲಿಮನಿ ಮತದಾರರ ಪಟ್ಟಿ ಪರಿಷ್ಕರಣೆ: ಜು.೧೧ ಮತ್ತು ೧೨ ರಂದು ಜಿಲ್ಲೆಯಲ್ಲಿ ವಿಶೇಷ ಅಭಿಯಾನ