Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ: ಓಂ ಬಿರ್ಲಾ, ಕೆ ಸುರೇಶ್​ ನಾಮಪತ್ರ ಸಲ್ಲಿಕೆ

72 ವರ್ಷಗಳಲ್ಲಿ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್​ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಎನ್​ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ(Om Birla) ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದಾರೆ.

ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು. 72 ವರ್ಷಗಳ ನಂತರ ಮೂರನೇ ಬಾರಿಗೆ ಸ್ಪೀಕರ್ ಚುನಾವಣೆ ನಡೆಯುತ್ತಿದೆ.

ಈ ಹಿಂದೆ 1952 ಹಾಗೂ 1974ರಲ್ಲಿಯೂ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಸ್ವತಂತ್ರ ಭಾರತದಲ್ಲಿ 1952ರಲ್ಲಿ ಮೊಟ್ಟ ಮೊದಲ ಬಾರಿಗೆ ಜಿವಿ ಮಾಳವಂಕರ್ ಮತ್ತು ಶಂಕರ್ ಶಾಂತಾರಾಮ್ ನಡುವೆ ಸ್ಪೀಕರ್ ಹುದ್ದೆಗೆ ಚುನಾವಣೆ ಪೈಪೋಟಿ ಏರ್ಪಟ್ಟಿತ್ತು. ಆ ಬಳಿಕ 1976ರಲ್ಲಿ ತುರ್ತು ಪರಿಸ್ಥಿತಿ ಸಮಯದಲ್ಲಿ ಸ್ಪೀಕರ್ ಚುನಾವಣೆ ನಡೆದಿತ್ತು. ಆ ಸಮಯದಲ್ಲಿ ಬಲಿಗ್ರಾಮ ಭಗತ್ ಹಾಗೂ ಜಗನ್ನಾಥ ರಾವ್ ನಡುವೆ ಚುನಾವಣೆ ನಡೆದಿತ್ತು.

ಈಗ 2024ರಲ್ಲಿ ಮೂರನೇ ಬಾರಿಗೆ ಚುನಾವಣೆ ನಡೆಯಲಿದೆ. ಇಲ್ಲಿಯವರೆಗೆ ಪಕ್ಷ ಮತ್ತು ವಿರೋಧ ಪಕ್ಷಗಳ ಒಮ್ಮತದ ಮೇರೆಗೆ ಸ್ಪೀಕರ್ ನೇಮಕ ಮಾಡಲಾಗಿತ್ತು.

 

ಈ ಹಿಂದೆ, ಸ್ಪೀಕರ್ ಚುನಾವಣೆಗೆ ಒಮ್ಮತ ಮೂಡಿಸಲು ಎನ್​ಡಿಎ ಪ್ರಯತ್ನ ಡನೆಸಿತು ಹಾಗೂ ಬಿಜೆಪಿಯ ಹಿರಿಯ ನಾಯಕರು ಇಂಡಿಯಾ ಬ್ಲಾಕ್​ನ ನಾಯಕರೊಂದಿಗೆ ಮಾತುಕತೆ ನಡೆಸಿದರು. ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್ ಮತ್ತು ಸಂಶದೀಯ ವ್ಯವಹಾರಗಳ ಸಚಿವ ಕಿರಣ್​ ರಿಜಿಜು ವಿವಿಧ ನಾಯಕರನ್ನು ಭೇಟಿ ಮಾಡಿ ಮಾತನಾಡಿದರು.

ಕೆ ಸುರೇಶ್​ 8 ಬಾರಿ ಸಂಸದರಾಗಿದ್ದಾರೆ, ಅವರು ಈಗ ನಾಮಪತ್ರ ಸಲ್ಲಿಸಿದ್ದಾರೆ, ಪ್ರತಿಪಕ್ಷ 237 ಸಂಸದರನ್ನು ಹೊಂದಿದೆ. ಇದರಲ್ಲಿ ಮೂವರು ಸ್ವತಂತ್ರರ ಬೆಂಬಲವೂ ಇದೆ.

ಕೆ ಸುರೇಶ್​ ನಾಮಪತ್ರಕ್ಕೆ ಇಂಡಿಯಾ ಬ್ಲಾಕ್​ನ ಮಿತ್ರಪಕ್ಷಗಳಾದ ಡಿಎಂಕೆ, ಶಿವಸೇನೆ, ಶರದ್​ಪವಾರ್​(ಎನ್​ಸಿಪಿ) ಹಾಗೂ ಇತರೆ ಪ್ರಮುಖ ಪಕ್ಷಗಳು ಸಹಿ ಹಾಕಿವೆ. ಮಮತಾ ಬ್ಯಾನರ್ಜಿ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ. ಇದಕ್ಕೂ ಮುನ್ನ ಎನ್​ಡಿಎ ಪರವಾಗಿ ಓಂ ಬಿರ್ಲಾ ನಾಮಪತ್ರ ಸಲ್ಲಿಸಿದ್ದರು. ಆಡಳಿತ ಪಕ್ಷಕ್ಕೆ ಸಂಪೂರ್ಣ ಬಹುಮತವಿದೆ, ಎನ್​ಡಿಎಗೆ 292 ಸಂಸದರ ಬೆಂಬಲವಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ