Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ: ಓಂ ಬಿರ್ಲಾ, ಕೆ ಸುರೇಶ್​ ನಾಮಪತ್ರ ಸಲ್ಲಿಕೆ

72 ವರ್ಷಗಳಲ್ಲಿ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್​ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಎನ್​ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ(Om Birla) ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದಾರೆ.

ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು. 72 ವರ್ಷಗಳ ನಂತರ ಮೂರನೇ ಬಾರಿಗೆ ಸ್ಪೀಕರ್ ಚುನಾವಣೆ ನಡೆಯುತ್ತಿದೆ.

ಈ ಹಿಂದೆ 1952 ಹಾಗೂ 1974ರಲ್ಲಿಯೂ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಸ್ವತಂತ್ರ ಭಾರತದಲ್ಲಿ 1952ರಲ್ಲಿ ಮೊಟ್ಟ ಮೊದಲ ಬಾರಿಗೆ ಜಿವಿ ಮಾಳವಂಕರ್ ಮತ್ತು ಶಂಕರ್ ಶಾಂತಾರಾಮ್ ನಡುವೆ ಸ್ಪೀಕರ್ ಹುದ್ದೆಗೆ ಚುನಾವಣೆ ಪೈಪೋಟಿ ಏರ್ಪಟ್ಟಿತ್ತು. ಆ ಬಳಿಕ 1976ರಲ್ಲಿ ತುರ್ತು ಪರಿಸ್ಥಿತಿ ಸಮಯದಲ್ಲಿ ಸ್ಪೀಕರ್ ಚುನಾವಣೆ ನಡೆದಿತ್ತು. ಆ ಸಮಯದಲ್ಲಿ ಬಲಿಗ್ರಾಮ ಭಗತ್ ಹಾಗೂ ಜಗನ್ನಾಥ ರಾವ್ ನಡುವೆ ಚುನಾವಣೆ ನಡೆದಿತ್ತು.

ಈಗ 2024ರಲ್ಲಿ ಮೂರನೇ ಬಾರಿಗೆ ಚುನಾವಣೆ ನಡೆಯಲಿದೆ. ಇಲ್ಲಿಯವರೆಗೆ ಪಕ್ಷ ಮತ್ತು ವಿರೋಧ ಪಕ್ಷಗಳ ಒಮ್ಮತದ ಮೇರೆಗೆ ಸ್ಪೀಕರ್ ನೇಮಕ ಮಾಡಲಾಗಿತ್ತು.

 

ಈ ಹಿಂದೆ, ಸ್ಪೀಕರ್ ಚುನಾವಣೆಗೆ ಒಮ್ಮತ ಮೂಡಿಸಲು ಎನ್​ಡಿಎ ಪ್ರಯತ್ನ ಡನೆಸಿತು ಹಾಗೂ ಬಿಜೆಪಿಯ ಹಿರಿಯ ನಾಯಕರು ಇಂಡಿಯಾ ಬ್ಲಾಕ್​ನ ನಾಯಕರೊಂದಿಗೆ ಮಾತುಕತೆ ನಡೆಸಿದರು. ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್ ಮತ್ತು ಸಂಶದೀಯ ವ್ಯವಹಾರಗಳ ಸಚಿವ ಕಿರಣ್​ ರಿಜಿಜು ವಿವಿಧ ನಾಯಕರನ್ನು ಭೇಟಿ ಮಾಡಿ ಮಾತನಾಡಿದರು.

ಕೆ ಸುರೇಶ್​ 8 ಬಾರಿ ಸಂಸದರಾಗಿದ್ದಾರೆ, ಅವರು ಈಗ ನಾಮಪತ್ರ ಸಲ್ಲಿಸಿದ್ದಾರೆ, ಪ್ರತಿಪಕ್ಷ 237 ಸಂಸದರನ್ನು ಹೊಂದಿದೆ. ಇದರಲ್ಲಿ ಮೂವರು ಸ್ವತಂತ್ರರ ಬೆಂಬಲವೂ ಇದೆ.

ಕೆ ಸುರೇಶ್​ ನಾಮಪತ್ರಕ್ಕೆ ಇಂಡಿಯಾ ಬ್ಲಾಕ್​ನ ಮಿತ್ರಪಕ್ಷಗಳಾದ ಡಿಎಂಕೆ, ಶಿವಸೇನೆ, ಶರದ್​ಪವಾರ್​(ಎನ್​ಸಿಪಿ) ಹಾಗೂ ಇತರೆ ಪ್ರಮುಖ ಪಕ್ಷಗಳು ಸಹಿ ಹಾಕಿವೆ. ಮಮತಾ ಬ್ಯಾನರ್ಜಿ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ. ಇದಕ್ಕೂ ಮುನ್ನ ಎನ್​ಡಿಎ ಪರವಾಗಿ ಓಂ ಬಿರ್ಲಾ ನಾಮಪತ್ರ ಸಲ್ಲಿಸಿದ್ದರು. ಆಡಳಿತ ಪಕ್ಷಕ್ಕೆ ಸಂಪೂರ್ಣ ಬಹುಮತವಿದೆ, ಎನ್​ಡಿಎಗೆ 292 ಸಂಸದರ ಬೆಂಬಲವಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ