Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆ ಶಿವಕುಮಾರ್​ಗೆ ಲೋಕಾಯುಕ್ತ ಶಾಕ್: ಚುನಾವಣೆ ಹೊತ್ತಲ್ಲೇ ನೋಟಿಸ್

ಬೆಂಗಳೂರು, ಏಪ್ರಿಲ್ 11: 2013ರ ಏಪ್ರಿಲ್ 1ರಿಂದ 2018ರರ ಏಪ್ರಿಲ್ 30ರ ಅವಧಿಯಲ್ಲಿನ ಅಕ್ರಮವಾಗಿ 74.93 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳಿಸಿರುವ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ವಿರುದ್ಧ ಈಗಾಗಲೇ ಲೋಕಾಯುಕ್ತ ದೂರು ದಾಖಲಿಸಿಕೊಂಡಿದ್ದು, ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ದಾಖಲೆ ಒದಗಿಸುವಂತೆ ನೊಟೀಸ್ ಜಾರಿ ಮಾಡಿದೆ. ಇದರಿಂದ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿರುವ ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದು ಮಾಡಿ ರಾಜ್ಯ ಸರ್ಕಾರ, ಲೋಕಾಯುಕ್ತ ತನಿಖೆಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್, ಕಳೆದ ಪ್ರೆಬ್ರವರಿ ತಿಂಗಳಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಎಫ್​ಐಆರ್ ದಾಖಲಿಸಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ತಿ ಗಳಿಕೆ ವಿವರ ನೀಡುವಂತೆ ನೋಟಿಸ್ ಜಾರಿ ಮಾಡಿದ್ದು, ಸಿಬಿಐಗೆ ನೀಡಿರುವ ದಾಖಲಾತಿಗಳ ಮಾಹಿತಿಗಳನ್ನು ಒದಗಿಸುವಂತೆ ನೋಟಿಸ್​ನಲ್ಲಿ ಸೂಚಿಸಿದೆ.

ಇದೇ ಆಸ್ತಿ ಗಳಿಕೆ ಆರೋಪದಡಿ ಡಿಕೆ ಶಿವಕುಮಾರ್ ವಿರುದ್ಧ 2020ರ ಅಕ್ಟೋಬರ್ 03ರಂದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸಿಬಿಐ ಪ್ರಕರಣ ದಾಖಲಿಸಿತ್ತು. ಆದ್ರೆ, ಈ ಹಿಂದೆ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು. ಅಲ್ಲದೇ ಈ ಪ್ರಕರಣದ ತನಿಖೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ, 2023ರ ನವೆಂಬರ್ 23ರಂರು ಲೋಕಾಯುಕ್ತ ಪೊಲೀಸ್​ ವಿಭಾಗಕ್ಕೆ ವಹಿಸಿತ್ತು. ಬಳಿಕ ಸರ್ಕಾರದ ಆದೇಶದಂತೆ ಲೋಕಾಯುಕ್ತ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆಯನ್ನು ಪ್ರತ್ಯೇಕ ತಂಡಕ್ಕೆ ವಹಿಸಲಾಗಿತ್ತು.

2013ರ ಮಾರ್ಚ್ 31ರ ವೇಳೆಗೆ ಡಿಕೆ ಶಿವಕುಮಾರ್ ಕುಟುಂಬ 33 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿತ್ತು. ಐದು ವರ್ಷಗಳ ಅವಧಿಯಲ್ಲಿ ಅವರ ಕುಟುಂಬದ ಆಸ್ತಿ 166.79 ಕೋಟಿ ರೂ.ಗೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 113.12 ಕೋಟಿ ವಚ್ಚ ಮಾಡಲಾಗಿದೆ ಎಂಬ ಅಂಶ ಸಿಬಿಐ ಎಫ್​ಐಆರ್​ನಲ್ಲಿತ್ತು.

2018ರ ಏ.30ರ ವೇಳೆಗೆ ಡಿಕೆ ಶಿವಕುಮಾರ್ ಕುಟುಂಬ 128.60 ಕೋಟಿ ಆಸ್ತಿ ಹೊಂದಿತ್ತು. ವರಮಾನ, ಸ್ವೀಕೃತಿ ಮತ್ತು ವೆಚ್ಚಕ್ಕೆ ಹೋಲಿಸಿದರೆ ಶೇಕಡ 44.93ರಷ್ಟು ಹೆಚ್ಚುವರಿ ಆಸ್ತಿ ಇರುವುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಸಿಬಿಐ, ತನ್ನ ಎಫ್​ಐಆರ್​ನಲ್ಲಿ ಉಲ್ಲೇಖಿಸಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ