Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲವ್ ಮಾಕ್ಟೇಲ್-೩ ಬಿಡುಗಡೆ ದಿನಾಂಕ ಘೋಷಣೆ

ನಟನಾಗಿ ಹೆಸರಾಗಿದ್ದ ಡಾರ್ಲಿಂಗ್ ಕೃಷ್ಣ ಲವ್ ಮಾಕ್ಟೇಲ್ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದರು. ಅದಾದ ನಂತರ ಬಂದಿದ್ದ ಎರಡನೇ ಆವೃತ್ತಿಯೂ ಗೆದ್ದಿತ್ತು. ಆ ಗೆಲುವಿನ ಪ್ರಭೆಯಲ್ಲಿ ಲವ್ ಮಾಕ್ಟೇಲ್ ೩ ಚಿತ್ರಕ್ಕೆ ಚಾಲನೆ ನೀಡಿದ್ದ ಡಾರ್ಲಿಂಗ್ ಕೃಷ್ಣ ಮೋಷನ್ ಪೋಸ್ಟರ್ ಲಾಂಚ್ ಮಾಡಿದ್ದರು. ಈ ಮೂಲಕ ಮೂರನೇ ಆವೃತ್ತಿ ನವಿರಾದ ಕುತೂಹಲವೊಂದಕ್ಕೆ ಚಾಲನೆ ನೀಡಿದೆ.

     ಇದೀಗ ಹೊಸ ವರ್ಷದ ಉಡುಗೊರೆ ಎಂಬಂತೆ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಡಾಲಿಂಗ್ ಕೃಷ್ಣ ಘೋಶಿಸಿದ್ದಾರೆ. ಇದರೊಂದಿಗೆ ಲವ್ ಮಾಕ್ಟೇಲ್ ೩ ಪ್ರೇಕ್ಷಕರ ಮುಂದೆ ಬರಲು ಇದೇ ಏಪ್ರಿಲ್ ೧೦ರಂದು ಮುಹೂರ್ತ ನಿಗಧಿಯಾದಂತಾಗಿದೆ.

     ೨೦೨೦ರಲ್ಲಿ ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶನ ಮಾಡಿದ್ದ ಲವ್ ಮಾಕ್ಟೇಲ್ ಚಿತ್ರ ತೆರೆಗಂಡಿತ್ತು. ನವಿರು ಪ್ರೇಮದೊಂದಿಗೆ ಹೊಸೆದುಕೊಂಡಿದ್ದ ಸೂಕ್ಷ್ಮ ಕಥನದ ಮೂಲಕ ಗೆದ್ದ ನಂತರ, ಲವ್ ಮಾಕ್ಟೇಲ್೨ ಚಿತ್ರವನ್ನು ಕೃಷ್ಣ ರೂಪಿಸಿದ್ದರು. ಇದೀಗ ತೆರೆಗಾಣಲು ಸಜ್ಜಾಗಿರುವ ಲವ್ ಮಾಕ್ಟೇಲ್೩ ಈ ಹಿಂದಿನ ಎರಡು ಆವೃತ್ತಿಗಳಿಗಿಂತಲೂ ಭಿನ್ನವಾಗಿರಲಿದೆ ಎಂಬ ವಿಚಾರವನ್ನಷ್ಟೇ ಕೃಷ್ಣ ಹಂಚಿಕೊಂಡಿದ್ದಾರೆ. ಕಥೆ, ನಿರೂಪಣೆ ಸೇರಿದಂತೆ ಎಲ್ಲದರಲ್ಲಿಯೂ ಲವ್ ಮಾಕ್ಟೇಲ್-೩ ಹೊಸ ಅನುಭೂತಿ ಕೊಡಲಿದೆ ಎಂಬ ಭರವಸೆ ಕೃಷ್ಣ ಅವರದ್ದು.

      ಅಂದಹಾಗೆ, ಈ ಚಿತ್ರವನ್ನು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕ್ರಿಸ್‌ಮಿ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಶ್ರೀ ಕ್ರೇಜಿ ಮೈಂಡ್ಸ್ ಛಾಯಾಗ್ರಹಣ ಮತ್ತು ಸಂಕಲ ಈ ಚಿತ್ರಕ್ಕಿದೆ. ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ರಚೆಲ್ ಡೇವಿಡ್, ಅಭಿಲಾಶ್ ದಳಪತಿ,  ಮುಂತಾದವರ ತಾರಾಗಣವಿದೆ. ಇದೀಗ ಎಲ್ಲ ಕೆಲಸ ಕಾರ್ಯಗಳನ್ನೂ ಮುಗಿಸಿಕೊಂಡಿರುವ ಚಿತ್ರತಂಡ, ಬೇಸಿಗೆ ರಜೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ ೧೦ರಂದು ಪ್ರೇಕ್ಷಕರ ಮುಂದೆ ಬರಲು ತೀರ್ಮಾನಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ