ತಾಳಿಕೋಟೆ, ತಾಲೂಕಿನ ತುಂಬಗಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ತ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ತಾಳಿಕೋಟೆ ಪುರಸಭೆಯ ಮಾಜಿ ಸದಸ್ಯ ಜೈ ಸಿಂಗ್ ಮೂಲಿಮನಿ ಅವರ ಕುಟುಂಬಸ್ಥರ ವತಿಯಿಂದ ಶ್ರೀ ರಾಮಲಿಂಗೇಶ್ವರ ದೇವರಿಗೆ ಮಹಾ ರುದ್ರಾಭಿಷೇಕವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.
ಶ್ರಾವಣ ಮಾಸವು ಅತ್ಯಂತ ಪವಿತ್ರ ಹಾಗೂ ವಿಶೇಷ ಮಹತ್ವ ಹೊಂದಿರುವ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮಹಾ ರುದ್ರಾಭಿಷೇಕ ನೆರವೇರಿಸಲಾಯಿತು. ಭಕ್ತರು ಶ್ರದ್ಧಾಭಕ್ತಿಯಿಂದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ರಾಮಲಿಂಗೇಶ್ವರ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.
ಲೋಕಕಲ್ಯಾಣ, ನಾಡಿನ ಶಾಂತಿ-ಸಮೃದ್ಧಿ ರೈತರ ಒಳಿತಿಗಾಗಿ ಹಾಗೂ ತಾಳಿಕೋಟಿ ತಾಲೂಕಿನ ಜನತೆಯ ಸುಖ, ಆರೋಗ್ಯ ಮತ್ತು ಒಳಿತಿಗಾಗಿ ಈ ಮಹಾ ರುದ್ರಾಭಿಷೇಕವನ್ನು ನೆರವೇರಿಸಲಾಗಿದೆ ಎಂದು ಜೈ ಸಿಂಗ್ ಮೂಲಿಮನಿ ಕುಟುಂಬಸ್ಥರು ತಿಳಿಸಿದರು.
ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ದೇವರಿಗೆ ವಿಶೇಷ ಅಭಿಷೇಕ, ಪೂಜಾ ವಿಧಿ-ವಿಧಾನಗಳನ್ನು ಅರ್ಚಕರ ನೇತೃತ್ವದಲ್ಲಿ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವಸ್ಥಾನದ ಅರ್ಚಕರಾದ ಜಯತೀರ್ಥ ಜೋಶಿ, ಅಪ್ಪು ಜೋಶಿ, ರಾಜು ತುಂಬಿಗಿ, ಗಗನ್ ಸಿಂಗ್ ಮೂಲಿಮನಿ ಸೇರಿದಂತೆ ತುಂಬಗಿ ಗ್ರಾಮದ ಗ್ರಾಮಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು.