Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ದರ ನಿಗದಿಗೆ ಸರ್ಕಾರಕ್ಕೆ ಮನವಿ : ಮಹಾಂತೇಶ ಕೌಜಲಗಿ 




ಬೈಲಹೊಂಗಲ. ರೈತರು ಪ್ರಸಕ್ತವಾಗಿ ಅತಿಯಾದ ಮಳೆಯಿಂದ ಹಿನ್ನಡೆ ಅನುಭವಿಸುತ್ತಿರುವ ಕಬ್ಬು ಬೆಳೆಗಾರರಿಗೆ ಕಬ್ಬಿನ ಬಿಲ್ಲು ನಿಗದಿ ಮಾಡಲು ಸರ್ಕಾರಕ್ಕೆ ಮನವಿ ಮಾಡಿ ರೈತರ ಪರ ಕೆಲಸ ಮಾಡಲು ಸಿದ್ದನಿದ್ದೇನೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

   ಅವರು ಸೋಮವಾರದಂದು ಪಟ್ಟಣದ ಚನ್ನಮ್ಮ ಸರ್ಕಲ್ ಮುಂದೆ ರೈತರು ಕಬ್ಬು ಬೆಳೆಗೆ ಸರ್ಕಾರ ರೂ. 3500/- ಗಳ ದರ ನಿಗದಿ ಮಾಡಲು ಒತ್ತಾಯಿಸಿ ನಡೆದ ಧರಣಿ ಸತ್ಯಾಗ್ರಹ, ರಸ್ತಾ ರೋಖೊ ಧರಣಿ ಉದ್ದೇಸಿಸಿ ಮಾತನಾಡಿದರು.

    ಅನ್ನದಾತನ ಸಮಸ್ಯೆಯನ್ನು ಸರ್ಕಾರ ಶೀಘ್ರ ಪರಿಹಾರ ಮಾಡಿ : ಮಹಾಂತೇಶ ದೊಡ್ಡಗೌಡರ

ಬೈಲಹೊಂಗಲ. ದೇಶಕ್ಕೆ ಅನ್ನ ನೀಡುವ ರೈತನನ್ನು ಸರ್ಕಾರ ಗೌರವಯುತವಾಗಿ ನಡೆಸಿಕೊಳ್ಳಬೇಕು. ಆತನ ಕಷ್ಟ ಕಾರ್ಪಣ್ಯದಲ್ಲಿ ಮುಂದೆ ಬಂದು ಸರ್ಕಾರ ಪರಿಹಾರ ನೀಡಬೇಕು. ಅದೇ ರೀತಿ ಅನೇಕ ತೊಂದರೆಗಳನ್ನು ಎದುರಿಸಿ ಕಬ್ಬು ಬೆಳೆಯುವ ರೈತನಿಗೆ ಸಕ್ಕರೆ ಕಾರ್ಖಾನೆಗಳು ಪ್ರತಿ ಟನಗೆ ರೂ 3500/- ನೀಡಲು ಸರ್ಕಾರ ದರ ನಿಗದಿ ಮಾಡಿ ರೈತರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಮತ್ತು ಅತಿಯಾದ ಮಳೆಗೆ, ವಿದ್ಯುತ್ ಸಮಸ್ಯೆ, ಕೆಲಸಗಾರರ ಕೊರತೆ, ಕೆಟ ಬೀಜ, ರಸಗೊಬ್ಬರ, ಕ್ರಿಮಿನಾಶಕ ಬಳಕೆ ಹತ್ತು ಹಲವಾರು ಸಮಸ್ಯೆಗಳಿಂದ ರೈತ ಸಾಲ ಸೋಲ ಮಾಡಿ ಸಂಕಷ್ಟ ಪರಿಸ್ಥಿತಿಗೆ ಬಂದು ನಿಂತಿದ್ದು,ಕೂಡಲೇ ಸರ್ಕಾರ ಎಚ್ಚೆತು ರೈತರ ಹಾಗೂ ರೈತ ಮುಖಂಡರ ಸಭೆಯನ್ನು ಮುಖ್ಯ ಮಂತ್ರಿಗಳು ಶೀಘ್ರವಾಗಿ ಕರೆದು ಅವರ ಸಮಸ್ಯ ಕೇಳಿ ದರ ನಿಗದಿ ಮಾಡಬೇಕೆಂದು ಹೇಳಿದರು.

    ಈ ಹೋರಾಟದಲ್ಲಿ ಮಾಜಿ ಸಚಿವ    ಶಶಿಕಾಂತ ನಾಯ್ಕ, ರೈತ ಹೋರಾಟಗಾರ, ರೈತ ಸೇವಾ ಸಂಘದ ಅಧ್ಯಕ್ಷ ಶಂಕರ ಬೋಳನ್ನವರ,   ಶಂಕರ ಮಾಡಲಗಿ,  ಭೀರಪ್ಪಾ ದೇಶನೂರ, ಮಲ್ಲಿಕಾರ್ಜುನ ಹುಂಬಿ, ಶಿವರಂಜನ ಬೋಳನ್ನವರ, ರಫೀಕ್ ಬಡೇಘರ, ಬಸವರಾಜ ಮೋಕಾಸಿ, ಬಸನಗೌಡ ಪಾಟೀಲ, ಬಸವರಾಜ ಉಪ್ಪಾರ, ಸುರೇಶ ವಾಲಿ, ಮಹಾಂತೇಶ ಕಮತ, ಸೋಮಪ್ಪ ಬೆಳಕೂಡ, ಬಸವರಾಜ ಹಣ್ಣಿಕೇರಿ,ಮಹಾಂತೇಶ ಗೌರಿ, ಶ್ರೀಕಾಂತ ಶಿರಹಟ್ಟಿ, ದಾಸಪ್ಪಗೌಡ ಕುಸಲಾಪುರ, ಸುರೇಶ ಹೊಳಿ ಬೈಲಹೊಂಗಲ ಮತ್ತು ಕಿತ್ತೂರು ತಾಲೂಕುಗಳ ರೈತ ಮುಖಂಡರು, ರೈತರು, ಮಹಿಳಾ ರೈತರು ಭಾಗವಹಿಸಿದ್ದರು. ಈ ಧರಣಿ ಸತ್ಯಾಗ್ರಹದಿಂದ ಸಂಪೂರ್ಣ ಬೈಲಹೊಂಗಲ ರಸ್ತೆ ಬಂದ ಆಗಿತ್ತು. ಬೆಳಿಗ್ಗೆ ಬಂದ ಪ್ರಯಾಣಿಕರು ತಮ್ಮ ಗ್ರಾಮಗಳಿಗೆ ತೆರಳಲು ಹರಸಾಹಸ ಪಟ್ಟರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ