Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಸಿ ಬ್ಯಾಂಕ ನಿರ್ದೇಶಕ ಸ್ಥಾನಕ್ಕೆ ಮಹಾಂತೇಶ ದೊಡ್ಡಗೌಡರ ನಾಮಪತ್ರ ಸಲ್ಲಿಕೆ

ಬೆಳಗಾವಿ. ಜಿಲ್ಲೆಯ ಪ್ರತಿಷ್ಠಿತ ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ಗೆ  ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಗೆ  ಬೈಲಹೊಂಗಲ ತಾಲೂಕಾ ಕ್ಷೇತ್ರದಿಂದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರು  ಗುರುವಾರದಂದು ಡಿಸಿಸಿ ಬ್ಯಾಂಕ ಮುಖ್ಯ ಶಾಖೆ ಬೆಳಗಾವಿಯಲ್ಲಿ ಚುನಾವಣೆ  ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.


   ನಾಮಪತ್ರ ಸಲ್ಲಿಸಿ ಮಹಾಂತೇಶ ದೊಡ್ಡಗೌಡರ ಮಾತನಾಡಿ ಬೈಲಹೊಂಗಲ ತಾಲೂಕಿನಲ್ಲಿ ಒಟ್ಟು 73  ಪಿಕೆಪಿಎಸ್ ಸಂಘಗಳು  ಕಾರ್ಯನಿರ್ವಹಿಸುತ್ತಿದ್ದು ಅವುಗಳಿಗೆ ಹೊಸ ಕಟ್ಟಡ, ಗೋಡಾವನ, ರೈತರಿಗೆ ಸಾಲ, ಟ್ರ್ಯಾಕ್ಟರ್ ವಿತರಣೆ, ಗಣಕೀಕರಣ, ಪತ್ತು ಹೆಚ್ಳಳಕ್ಕೆ ಆದ್ಯತೆ,ರೈತರ ಬೆಳವಣಿಗೆ ಕಳೆದ 30 ವರ್ಷಗಳಿಂದ  ಡಿಸಿಸಿ ಬ್ಯಾಂಕ ನಿರ್ದೇಶಕ, ಉಪಾಧ್ಯಕ್ಷನಾಗಿ ಪ್ರಾಮಾಣಿಕ ಕಾರ್ಯ ಮಾಡಿದ್ದು ಮುಂದಿನ ದಿನಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಸವಲತ್ತು ಕಲ್ಪಿಸುವ  ಕಾರ್ಯ ಮಾಡುತ್ತೇನೆ.ಹಿಂದಿನ ಅವಧಿಯಲ್ಲಿ  ಕಿತ್ತೂರು ಬೈಲಹೊಂಗಲ ಸೇರಿದ್ದಂತೆ ಒಟ್ಟು 105 ಪ್ರಾಥಮಿಕ ಸಹಕಾರಿ ಸಂಘಗಳ ಬೆಳವಣಿಗೆ  ಉತ್ತೇಜನ ನೀಡಿದ್ದು ಸದಾ ರೈತರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಶಾಸಕನಾಗಿ ಹಲವಾರು ಜನಪರ ಕಾರ್ಯ ಮಾಡಿ ಮುಂದೆ ಸದಾ ರೈತಪರ ಕೆಲಸ ಮಾಡುತ್ತೇನೆ. ಬೈಲಹೊಂಗಲ ತಾಲೂಕಿನಲ್ಲಿ 73 ಪಿ ಕೆ ಪಿ ಎಸ್ ಸಂಘಗಳು ಕಾರ್ಯ ನಿರ್ವಹಿಸುತ್ತಿದ್ದು ಅವುಗಳನ್ನು ಬೆಳೆಸಿ ರೈತರ ಧ್ವನಿಯಾಗಿ ನಿಲ್ಲುತ್ತೇನೆ ಮತ್ತು ನಮ್ಮ ಜಯ ಖಚಿತ ಎಂದರು.



   ಈ ನಾಮಪತ್ರ ಸಲ್ಲಿಕೆ ವೇಳೆ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಅರವಿಂದ ಪಾಟೀಲ, ಶಾಸಕ ವಿಶ್ವಾಸ ವೈದ್ಯ, ವೀರೂಪಾಕ್ಷ ಮಾಮನಿ, ಮಾಜಿ ಶಾಸಕ ಜಗದೀಶ ಮೆಟಗುಡ, ಅಪ್ಪಸಾಹೇಬ ಕುಲಗಡೆ,ವಿಕ್ರಮ ಇನಾಮದಾರ, ರಾಜಶೇಖರ್ ಯತ್ತಿನಮನಿ, ಗುರು ಮೆಟಗುಡ, ವಿಜಯ ಮೆಟಗುಡ, ರಾಮನಗೌಡ ದೊಡ್ಡಗೌಡರ, ಸಿ ಆರ್ ಪಾಟೀಲ, ಸುನೀಲ ಮರಕುಂಬಿ, ಬಾಳಾಸಾಹೇಬ ದೇಸಾಯಿ, ಎಸ್ ಎಮ್ ಪಾಟೀಲ, ನಿಂಗನಗೌಡ ದೊಡ್ಡಗೌಡರ, ಅಡಿವಪ್ಪ ಮಾಳಣ್ಣವರ, ಕುಮಾರಗೌಡ ಪಾಟೀಲ, ಪ್ರಕಾಶ ಮುಗಬಸವ, ಬಿ ಕೆ ಪಾಟೀಲ, ಸೋಮನಗೌಡ ಪಾಟೀಲ, ಮಹಾಂತೇಶ ಏಣಗಿ, ಅಡಿವಪ್ಪ ಹೊಸಮನಿ, ಮಲ್ಲಿಕಾರ್ಜುನ ಕಲ್ಲೋಳಿ  ಸೇರಿದಂತೆ ಬೈಲಹೊಂಗಲ ತಾಲೂಕಾ ಪಿಕೆಪಿಎಸ್ ಸದಸ್ಯರು, ಮುಖಂಡರು, ರೈತರು, ದೊಡ್ಡಗೌಡರ ಅಭಿಮಾನಿಗಳು  ಭಾಗವಹಿಸಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ