LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಹಾರಾಷ್ಟ್ರ ಚುನಾವಣೆ: ಕನ್ನಡ ಭಾಷೆಯಲ್ಲಿ ಅಭ್ಯರ್ಥಿಗಳ ಹೆಸರು

ಇದೀಗ ಮೊದಲ ಬಾರಿಗೆ ಮಹಾರಾಷ್ಟ್ರದ ಚುನಾವಣಾ ಆಯೋಗವು ನೆರೆಯ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಇವಿಎಂ ಯಂತ್ರಗಳಲ್ಲಿ ಕನ್ನಡ ಹಾಗೂ ಮರಾಠಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಮುದ್ರಿಸಿದೆ. ಲಾತೂರ್, ಮಂಗಳವೇಡ್, ಅಕ್ಕಲಕೋಟ, ಜತ್ತ್ ಮತ್ತು ದಕ್ಷಿಣ ಸೊಲ್ಲಾಪುರ ಸೇರಿದಂತೆ ಈ 15 ವಿಧಾನಸಭಾ ಕ್ಷೇತ್ರಗಳಲ್ಲಿ ಕನ್ನಡ ಮಾತನಾಡುವ ಜನ ಹೆಚ್ಚು. ಮಹಾರಾಷ್ಟ್ರದ ಈ ಕ್ಷೇತ್ರಗಳಲ್ಲಿ ಕನಿಷ್ಠ 50 ರಿಂದ 60 ಲಕ್ಷ ಕನ್ನಡ ಮಾತನಾಡುವವರಿದ್ದು, ಹೆಚ್ಚಿನವರು ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಇದರ ಮಹತ್ವವನ್ನು ಮನಗಂಡ ವಿವಿಧ ಪಕ್ಷಗಳ ಅಭ್ಯರ್ಥಿಗಳು ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದ ಪ್ರಮುಖ ಕನ್ನಡಿಗ ನಾಯಕರನ್ನು ಸ್ಟಾರ್ ಪ್ರಚಾರಕರನ್ನಾಗಿ ಆಹ್ವಾನಿಸಿದ್ದರು. ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಇತ್ತೀಚೆಗೆ ಮಹಾರಾಷ್ಟ್ರದ ರಾಜಕೀಯ ಪಕ್ಷಗಳನ್ನು ಭೇಟಿ ಮಾಡಿತು ಮತ್ತು ಕರ್ನಾಟಕ-ಮಹಾರಾಷ್ಟ್ರ ಗಡಿ ರೇಖೆಯನ್ನು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಲು ಕೇಳಿದೆ. ಕುತೂಹಲಕಾರಿ ಸಂಗತಿಯೆಂದರೆ, ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳು ತಮ್ಮ ಚುನಾವಣಾ ಭಾಷಣಗಳಲ್ಲಿ ಗಡಿ ವಿಷಯವನ್ನು ಪ್ರಸ್ತಾಪಿಸಲಿಲ್ಲ. ಬದಲಾಗಿ ಕನ್ನಡ ಮತದಾರರನ್ನು ತಲುಪಲು ಕನ್ನಡದಲ್ಲಿ ಪೋಸ್ಟರ್, ಹ್ಯಾಂಡ್ ಬಿಲ್ ಗಳನ್ನು ಮುದ್ರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್