Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೃಹತ್ ಮೆರವಣಿಗೆ ಮೂಲಕ ವೃತ್ತ ತಲುಪಿದ ಮಹರ್ಷಿ ವಾಲ್ಮೀಕಿ ಪುತ್ಥಳಿ

ಜ.03 ರಂದು ಅದ್ಧೂರಿ ಅನಾವರಣ ಕಾರ್ಯಕ್ರಮ: ಶಾಸಕ ನಾರಾ ಭರತ್ ರೆಡ್ಡಿ


ಬಳ್ಳಾರಿ, ಡಿ.26..jan03 ಭವ್ಯ ಮೆರವಣಿಗೆಯೊಂದಿಗೆ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯನ್ನು ವೃತ್ತಕ್ಕೆ ತರಲಾಗಿದೆ, ಜ.03 ರಂದು ಅದ್ಧೂರಿ ಅನಾವರಣ ಕಾರ್ಯಕ್ರಮ ನಡೆಯಲಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಗುರುವಾರ ನಗರ-ಜಿಲ್ಲೆಯ ವಾಲ್ಮೀಕಿ ನಾಯಕರ ಸಮಾಜದ ವತಿಯಿಂದ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯ ಸ್ವಾಗತ ಮೆರವಣಿಗೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಒಟ್ಟು 16 ಟನ್ ತೂಕದ ಮಹರ್ಷಿ ವಾಲ್ಮೀಕಿಯವರ ಈ ಪುತ್ಥಳಿಯ ನಿರ್ಮಾಣಕ್ಕೆ 1.18 ಕೋಟಿ ವೆಚ್ಚ ಖರ್ಚಾಗಿದೆ, ಇಡೀ ವೃತ್ತ ನಿರ್ಮಾಣಕ್ಕೆ 8.50 ಕೋಟಿ ರೂ.ಗಳು ಅನುದಾನ ವಿನಿಯೋಗ ಆಗಿದೆ ಎಂದರು.

ಅಯೋಧ್ಯೆಯ ರಾಮಲಲ್ಲಾನ ಮೂರ್ತಿಯನ್ನು ಕೆತ್ತಿರುವ ಕಲಾವಿದ ಅರುಣ್ ಯೋಗಿರಾಜ್ ಅವರೇ ಬಳ್ಳಾರಿಯ ಈ ವಾಲ್ಮೀಕಿಯವರ ಪುತ್ಥಳಿಯನ್ನು ಕೆತ್ತಿದ್ದು, ರಾಮಲಲ್ಲಾನ ಮೂರ್ತಿಗೆ ಬಳಸಲಾದ ಕಲ್ಲನ್ನೇ ಈ ಮೂರ್ತಿಗೆ ಬಳಸಲಾಗಿದೆ ಎಂದು ಹೇಳಿದ ಶಾಸಕ ನಾರಾ ಭರತ್ ರೆಡ್ಡಿ, ಅರುಣ್ ಯೋಗಿರಾಜ್ ಅವರ ಪರಿಕಲ್ಪನೆಯಲ್ಲಿ ಮೂಡಿ ಬಂದಿರುವ ಈ ವಾಲ್ಮೀಕಿಯವರ ಪುತ್ಥಳಿ ಇಡೀ ದೇಶದಲ್ಲಿ ಇದೇ ಒಂದು ಎಂದರು.

ಜ.03 ರಂದು ಅದ್ಧೂರಿಯಾಗಿ ಪುತ್ಥಳಿಯ ಅನಾವರಣ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ, ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಕೆ.ಎನ್.ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್, ರಾಜ್ಯಸಭಾ ಸದಸ್ಯ ಡಾ.ಸಯ್ಯದ್ ನಾಸಿರ್ ಹುಸೇನ್, ಮಾಜಿ ಸಚಿವ ಶಾಸಕ ಬಿ.ನಾಗೇಂದ್ರ, ಶಾಸಕರಾದ ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ ಹಾಗೂ ಎಸ್ಟಿ ಸಮುದಾಯದ ಹಲವು ಶಾಸಕರು ಭಾಗಿಯಾಗಲಿದ್ದಾರೆ, ಕಾರ್ಯಕ್ರಮದ ಸಾನಿಧ್ಯವನ್ನು ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ವಹಿಸಲಿದ್ದಾರೆ ಎಂದರು.

*ಭವ್ಯ ಮೆರವಣಿಗೆ, ಕುಂಭ-ಕಳಶ ಹೊತ್ತ ಮಹಿಳೆಯರಿಂದ ಪುತ್ಥಳಿಗೆ ಸ್ವಾಗತ:* ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯನ್ನು ಸ್ವಾಗತಿಸಲು ವಾಲ್ಮೀಕಿ ನಾಯಕರ ಸಮಾಜದ ವತಿಯಿಂದ ಅದ್ಧೂರಿ ಮೆರವಣಿಗೆ ಏರ್ಪಡಿಸಲಾಗಿತ್ತು. ಮೆರವಣಿಗೆಯಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಸಾವಿರಾರು ಜನರು, ಮುಖಂಡರು ಭಾಗಿಯಾದರು. ಹಲವು ಗಣ್ಯರು ಭವ್ಯ ಮೆರವಣಿಗೆಗೆ ಸಾಕ್ಷಿಯಾದರು. 1008 ಜನ ಕುಂಭ-ಕಳಶ ಹೊತ್ತ ಮಹಿಳೆಯರು, ವಿವಿಧ ಕಲಾ ವಾದ್ಯ ತಂಡಗಳೊಂದಿಗೆ ಜರುಗಿದ ಮೆರವಣಿಗೆಯು ಕಣ್ಣಿಗೆ ಹಬ್ಬದಂತಿತ್ತು. ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಿಂದ ವಾಲ್ಮೀಕಿ ವೃತ್ತದವರೆಗೆ ಮೆರವಣಿಗೆ ನಡೆಯಿತು.

ಮೆರವಣಿಗೆಯಲ್ಲಿ ವಾಲ್ಮೀಕಿ ನಾಯಕರ ಸಮಾಜದ ಮುಖಂಡ, ಮಾಜಿ ಸಂಸದ ಸಣ್ಣಫಕ್ಕೀರಪ್ಪ, ಗುಮ್ಮನೂರು ಚಿನ್ನಾಯಪ್ಪ, ಕೆಇಬಿ ರುದ್ರಪ್ಪ, ವಕೀಲರಾದ ಜಯರಾಂ, ನಾಗರಾಜ, ರಾಂಪ್ರಸಾದ್, ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ತಿಮ್ಮನಗೌಡ, ನಾಗಭೂಷಣಗೌಡ, ಮೇಯರ್ ಪಿ.ಗಾದೆಪ್ಪ, ಮಾಜಿ ಮೇಯರ್ ರಾಜೇಶ್ವರಿ, ಪಾಲಿಕೆಯ ಸದಸ್ಯರಾದ ರಾಜಶೇಖರ, ಕೆ.ಎಸ್

ಅಶೋಕ್, ನೂರ್ ಮೊಹಮ್ಮದ್, ಕುಬೇರಾ, ಆಸಿಫ್, ಪಿ.ಶಶಿಕಳಾ, ವೆಂಕಟೇಶ ಹೆಗಡೆ, ಮಹಮ್ಮದ್ ಭಾಯ್, ಪರಶುರಾಮುಡು, ದೇವಿನಗರ ಹೊನ್ನೂರಪ್ಪ, ಹಗರಿ ಗೋವಿಂದ, ಹಾವಂಭಾವಿ ಲೋಕೇಶ್, ಯರಗುಡಿ ಸೋಮಣ್ಣ, ಮುದಿಮಲ್ಲಯ್ಯ, ಕೆ.ಕೆ.ಹಾಳ್ ಸತ್ಯನಾರಾಯಣ, ಹುಲಿಯಪ್ಪ, ಪಿ.ಜಗನ್ನಾಥ, ಕೆ.ಎಸ್.ದಿವಾಕರ್, ವಿ.ಎನ್.ಶ್ರೀನಾಥ, ಲಾಲಸ್ವಾಮಿ, ಬಸರಕೋಡು ಗೋವಿಂದ, ಎಪಿಎಂಸಿ ರಾಮಣ್ಣ, ಸುಧಾಕರ್, ಭವಾನಿ ಪ್ರಸಾದ್, ಪದ್ಮಾ, ಮಂಜುಳಾ ಸೇರಿದಂತೆ ಹಲವರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ