Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹರ್ಷಿ ಶ್ರೀ ವಾಲ್ಮೀಕಿ ಪುತ್ಥಳಿ ಡಿ.25ಕ್ಕೆ ಆಗಮನ; ಬೃಹತ್ ಮೆರವಣಿಗೆಗೆ ಸಿದ್ಧತೆ

ವೃತ್ತಕ್ಕೆ ಶಾಸಕ ನಾರಾ ಭರತ್ ರೆಡ್ಡಿ ಭೇಟಿ, ಪರಿಶೀಲನೆ


ಬಳ್ಳಾರಿ, ಡಿ.23: ನಗರ ಶಾಸಕ ನಾರಾ ಭರತ್ ರೆಡ್ಡಿಯವರ ಅಧ್ಯಕ್ಷತೆಯಲ್ಲಿ ಜ.03, 2026ರಂದು ನಗರದ ವಾಲ್ಮೀಕಿ ವೃತ್ತದಲ್ಲಿ ನಡೆಯಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಪುತ್ಥಳಿಯ ಅನಾವರಣ ಕಾರ್ಯಕ್ರಮಕ್ಕಾಗಿ ಭರದ ಸಿದ್ಧತೆಗಳು ನಡೆದಿವೆ ಎಂದು ವಾಲ್ಮೀಕಿ ನಾಯಕರ ಸಮಾಜದ ಮುಖಂಡರು ತಿಳಿಸಿದ್ದಾರೆ.

ಇದೇ ತಿಂಗಳು ಡಿ, 25ರಂದು ಬಳ್ಳಾರಿ ನಗರಕ್ಕೆ ಮಹರ್ಷಿ ಶ್ರೀ ವಾಲ್ಮೀಕಿಯವರ ಪುತ್ಥಳಿಯ ಆಗಮನ ಆಗುತ್ತಿದ್ದು, ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಿಂದ ವಾಲ್ಮೀಕಿ ವೃತ್ತದವರೆಗೆ ಬೃಹತ್ ಮೆರವಣಿಗೆ ಆಯೋಜಿಸಲಾಗಿದೆ.


ವಾಲ್ಮೀಕಿ ಪುತ್ಥಳಿಯನ್ನು ಹೊತ್ತು ಬರುವ ವಾಹನವನ್ನು ಹೂಗಳಿಂದ ಸಿಂಗರಿಸಿ, ವಿವಿಧ ಕಲಾ ವಾದ್ಯ ತಂಡಗಳೊಂದಿಗೆ ಕುಂಭ-ಕಳಶ ಹೊತ್ತ 1008 ಜನ ಮಹಿಳೆಯರು ಒಳಗೊಂಡು ವಾಲ್ಮೀಕಿ ನಾಯಕರ ಸಮಾಜದ ಜನ ಹಾಗೂ ಸಾರ್ವಜನಿಕರು ಸೇರಿದಂತೆ ಅಂದಾಜು 4 ಸಾವಿರ ಜನ ಮೆರವಣಿಗೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಮುಖಂಡರು ತಿಳಿಸಿದ್ದಾರೆ.

ಡಿ.24ರಿಂದಲೇ ವಾಲ್ಮೀಕಿ ವೃತ್ತದಲ್ಲಿ ಹೋಮ ಹವನ ನಡೆಯಲಿದ್ದು, ಡಿ.25ರಂದು ಬೆಳಿಗ್ಗೆಯಿಂದ ವಾಲ್ಮೀಕಿ ವೃತ್ತದಲ್ಲಿ ಪೂಜೆ ನಡೆಯಲಿದೆ.

ಜ.03ರಂದು ಸಂಜೆ 5 ಗಂಟೆಗೆ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯ ಅನಾವರಣ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಕೈ.ಎನ್.ರಾಜಣ್ಣ, ಬಿ.ನಾಗೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಜಡ್.ಜಮೀರ್ ಅಹ್ಮದ್ ಖಾನ್, ರಾಜ್ಯಸಭಾ ಸದಸ್ಯ ಡಾ.ಸಯ್ಯದ್ ಹುಸೇನ್, ಶಾಸಕರಾದ ಜೆ.ಎನ್.ಗಣೇಶ್ ಸೇರಿದಂತೆ ಹಲವು ಶಾಸಕರು ಭಾಗಿಯಾಗಲಿದ್ದಾರೆ. ಶಾಸಕ ನಾರಾ ಭರತ್ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ವಾಲ್ಮೀಕಿ ವೃತ್ತಕ್ಕೆ ಶಾಸಕ ನಾರಾ ಭರತ್ ರೆಡ್ಡಿ ಭೇಟಿ, ಪರಿಶೀಲನೆ: ಜ.03ರ ವಾಲ್ಮೀಕಿಯವರ ಪುತ್ಥಳಿಯ ಅನಾವರಣ ಕಾರ್ಯಕ್ರಮದ ಹಿನ್ನಲೆಯಲ್ಲಿ ಶಾಸಕ ನಾರಾ ಭರತ್ ರೆಡ್ಡಿ ಮಂಗಳವಾರ ಬೆಳಿಗ್ಗೆ ಹಾಗೂ ಸಂಜೆ ವಾಲ್ಮೀಕಿ ವೃತ್ತಕ್ಕೆ ಭೇಟಿ ನೀಡಿ ವೃತ್ತ ನಿರ್ಮಾಣದ ಅಂತಿಮ ಹಂತದ ಸಿದ್ಧತೆಗಳಿಗೆ ಸಂಬಂಧಿಸಿ ಸೂಚನೆ ನೀಡಿದರು.

ಈ ಸಂದರ್ಭ ವಾಲ್ಮೀಕಿಯವರ ನಾಯಕರ ಮುಖಂಡರಾದ ಪರಶುರಾಮುಡು, ಹಾವಂಭಾವಿ ಲೋಕೇಶ್, ಹಗರಿ ಗೋವಿಂದ, ಯರಗುಡಿ ಸೋಮಣ್ಣ, ಮುದಿ ಮಲ್ಲಯ್ಯ, ಎಪಿಎಂಸಿ ರಾಮಣ್ಣ, ಮಾಜಿ ಮೇಯರ್ ಜಾನಕಮ್ಮ, ಪಿ.ಜಗನ್ನಾಥ, ದೇವಿನಗರ ಹೊನ್ನೂರಪ್ಪ, ಸಂಗನಕಲ್ಲು ವಿಜಯ್, ಭವಾನಿ ಪ್ರಸಾದ್, ಗಂಗಾಧರ, ಗಂಗಪ್ಪ, ಸುಧಾಕರ್, ರಾಜು, ನರೇಂದ್ರ, ಗೋವಿಂದರಾಜು, ಲಾಲಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ