Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರದ್ಧೆ, ನಿಷ್ಟೆಯ ಕೆಲಸ ಸಮಾಜಕ್ಕೆ ಕೊಡುಗೆ: ಮಹೇಶ ಪೋತದಾರ

ಗದಗ, 16 : ನಿಶ್ಚಿತ ಗುರಿಯೊಂದಿಗೆ ಶ್ರದ್ಧೆ, ನಿಷ್ಟೆಯಿಂದ ಫಲಾಪೇಕ್ಷೆ ಇಲ್ಲದೇ ನಾವು ಮಾಡುವ ಯಾವುದೇ ಕೆಲಸವಿರಲಿ ಅದು ಆತ್ಮ ತೃಪ್ತಿ ನೀಡುವುದರೊಂದಿಗೆ, ಸಮಾಜಕ್ಕೆ ಕೊಡುಗೆಯಾಗಿ ಸಲ್ಲುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಹಾಗೂ ಗದಗ ಬೆಟಗೇರಿ ನಗರಸಭೆಯ ಪೌರಾಯುಕ್ತರಾದ ಮಹೇಶ
ಪೋತದಾರ ಹೇಳಿದರು.

ಅವರು ನಗರದ ವಿಜಯನಗರ ಬಡಾವಣೆಯ ಶ್ರೀವಿಶ್ವಕರ್ಮ ಸಮುದಾಯ ಭವನದಲ್ಲಿ ಜಿಲ್ಲಾ ವಿಶ್ವಕರ್ಮ ನೌಕರರ   ಕ್ಷೇಮಾಭಿವೃದ್ಧಿ ಸಂಘ ಹಾಗೂ ಅಂಗಸಂಸ್ಥೆಗಳು ಮತ್ತು ವಾರ್ಡಿನ
ನಾಗರಿಕರು ಸಂಘಟಿಸಿದ್ದ ೭೮ನೇ ಸ್ವಾತಂತ್ರೋತ್ಸವದ ಸಂಜೆ  ಸಮಾರಂಭದಲ್ಲಿ, ಸಮಾಜಕಲ್ಯಾಣ ಇಲಾಖೆ ಹಾಗೂ ನಗರಸಭೆ ಪೌರಾಯುಕ್ತರಾಗಿ ಅಧಿಕಾರ ವಹಿಸಕೊಂಡ ಹಿನ್ನೆಲೆಯಲ್ಲಿ
ಸಂಘಟಕರು ಸನ್ಮಾನದೊಂದಿಗೆ ಸ್ವಾಗತಿಸಿದ ವೇಳೆ ಮಾತನಾಡಿದರು.

ಐದು ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಯಾಗಿ ಆತ್ಮತೃಪ್ತಿಯೊಂದಿಗೆ  ಪ್ರಾಮಾಣಿಕವಾಗಿ ಮತು ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ಇದೀಗ ದೇವರು, ಶರಣರು, ಸಂತರ ನಾಡು, ಮುದ್ರಣ ಹಾಗೂ ಸಂಗೀತ ಕಾಶಿ, ಕಲಾವಿದರ ಬೀಡಾದ ಗದಗ ಜಿಲ್ಲೆಗೆ ಸೇವೆ ಸಲ್ಲಿಸಲು ಬಂದಿರುವುದು  ನನ್ನ ಸುಕೃತ. ಎಲ್ಲರ ಪ್ರೀತಿ ವಿಶ್ವಾಸಗಳೊಂದಿಗೆ ಜನಮೆಚ್ಚುವಂತೆ
ಕರ್ತವ್ಯ ನಿರ್ವಹಿಸುವೆ. ತಮ್ಮೆಲ್ಲರ ಸಹಕಾರ ಸದಾ ಇರಲಿ ಎಂದರು.

ಅಧ್ಯಕ್ಷತೆವಹಿಸಿದ್ದ ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ರಾಜಗೋಪಾಲ ಡಿ. ಕಡ್ಲಿಕೊಪ್ಪ ಅವರು ಮಾತನಾಡಿ, ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳಾದ ಮಹೇಶ ಪೋತದಾರ ಅವರು ಹಿಂದೆ ಸೇವೆ ಸಲ್ಲಿಸಿದ ಎಲ್ಲ ಜಿಲ್ಲೆಗಳಲ್ಲಿ ಅಪಾರ ಜನಪ್ರೀಯತೆ ಪಡೆದಿರುವರು. ಇಲ್ಲಿ ಕೂಡಾ ಗದಗಬೆಟಗೇರಿ ಅವಳಿ ನಗರ ಸೇರಿ ಜಿಲ್ಲೆಯ ಅಭಿವೃದ್ಧಿಯಲ್ಲಿ ವಿಶೇಷ ಕೊಡುಗೆ ಸೇವೆ ಸಲ್ಲಿಸಬೇಕು ಎಂದು ಆಶಿಸಿದರು.

ವಿಶ್ವಕರ್ಮ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಕೆ. ಎಸ್. ಬಡಿಗೇರ, ವಿಶ್ವಕರ್ಮ ಸಾಹಿತ್ಯ ಸಾಂಸ್ಕೃತಿಕ ಕಲಾ ಸಂಘದ ಅಧ್ಯಕ್ಷ ಮೌನೇಶ ಸಿ. ಬಡಿಗೇರ, ವಾರ್ಡಿನ ಹಿರಿಯರಾದ ಶಿವಾನಂದ ಹೊಂಬಳ, ಶಶಿಕಾಂತ ಗುಂಜಾಳ, ಹನಮಂತಗೌಡ ಪಾಟೀಲ, ನಾಗಪ್ಪ ಚುರ್ಚಿಹಾಳ, ಶಿವಪ್ಪ ಮೇಟಿ, ವಿಶ್ವಕರ್ಮ ಮಹಳಾ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀಮತಿ ರಿಂದಮ್ಮ ನಾ. ವಡ್ಡಟ್ಟಿ, ಬೆಟಗೆರಿ ಕಾಳಿಕಾದೇವಿ ಟ್ರಸ್ಟ್ ಕಮೀಟಿ ಅಧ್ಯಕ್ಷರಾದ ಬಾಲರಾಜ ಕೊಣ್ಣೂರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾಜದ ಗಣ್ಯರು ಪಾಲ್ಗೊಂಡಿದ್ದರು. ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಯ. ಕಮ್ಮಾರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ