ಬಳ್ಳಾರಿ, ಏ.೩೦.. ಬಳ್ಳಾರಿ ಜನತಾ ಬಜಾರ್ (ಬಳ್ಳಾರಿ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ)ದ ನೂತನ ಅಧ್ಯಕ್ಷೆಯಾಗಿ ಶ್ರೀಮತಿ ಮೈತ್ರಿ ಪಲ್ಲೇದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಅಧ್ಯಕ್ಷ ಕೆ.ಎ. ವೇಮಣ್ಣ ಅವರ ರಾಜೀನಾಮೆಯಿಂದ ಖಾಲಿಯಾಗಿದ್ದ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಮೈತ್ರಿ ಪಲ್ಲೇದ ಅವರ ಏಕೈಕ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆ ಘೋಷಿಸಲಾಯಿತು. ಅವರ ನಾಮಪತ್ರಕ್ಕೆ ಜಿ. ನೀಲಕಂಠಪ್ಪ ಸೂಚಕರಾಗಿ ಹಾಗೂ ಶ್ರೀಮತಿ ನಸೀಮಾಬೇಗಂ ಅನುಮೋದಕರಾಗಿ ಸಹಿ ಹಾಕಿದ್ದರು.
ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಕೆ.ಎ. ವೇಮಣ್ಣ, ಉಪಾಧ್ಯಕ್ಷ ಎಸ್. ಮುಜಾಹಿದ್ ಅಲಿ, ವೆಂಕಟೇಶ್ ಹೆಗಡೆ, ನಸೀಮಾಬೇಗಂ, ಪಿ. ದಾನರೆಡ್ಡಿ, ವಿ. ಪ್ರದೀಪರೆಡ್ಡಿ, ಕೆ. ಭರಮರೆಡ್ಡಿ, ಹಲಕುಂದಿ ವಿಜಯಕುಮಾರ್, ಕೆ.ಎಂ. ಕೇದಾರನಾಥ, ಜಿ. ನೀಲಕಂಠಪ್ಪ, ಕೋರಿ ಚನ್ನಬಸಪ್ಪ (ಪುಟ್ಟ), ಎಂ. ನರೇಶ್ ಕುಮಾರ್, ಕೆ. ವೆಂಕಟಸ್ವಾಮಿ, ಕಾತ್ಯಾಯಿನಿ ಮರಿದೇವಯ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪರಿಣಿತ ಸದಸ್ಯರಾದ ಎಚ್.ಎಂ. ಮಹೇಂದ್ರ ಕುಮಾರ್, ವೀರಶೈವ ತರುಣ ಸಂಘದ ಅಧ್ಯಕ್ಷ ನಂದೀಶ್ ಮಠಂ, ಮಾಜಿ ಉಪಾಧ್ಯಕ್ಷ ಇಬ್ರಾಹಿಂ ಬಾಬು, ಜಾನೆಕುಂಟೆ ಬಸವರಾಜ್ (ಕುಮ್ಮಿ), ಪಲ್ಲೇದ ಪ್ರಭುಲಿಂಗ, ಕೋರಿ ವಿರುಪಾಕ್ಷಪ್ಪ, ಗಂಗಾವತಿ ವೀರೇಶ್, ಮುಂಡಾಸದ ಮಲ್ಲಿಕಾರ್ಜುನ, ಬಾಡದ ಬದರಿನಾಥ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಚುನಾವಣಾ ಅಧಿಕಾರಿಯಾಗಿ ಜನತಾ ಬಜಾರ್ ಪ್ರಧಾನ ವ್ಯವಸ್ಥಾಪಕರಾದ ರಾಮು ಅವರು ಕಾರ್ಯನಿರ್ವಹಿಸಿದರು.
ಗಮನಾರ್ಹವಾಗಿ, ಮೈತ್ರಿ ಪಲ್ಲೇದ ಅವರು ಜನತಾ ಬಜಾರ್ ಇತಿಹಾಸದಲ್ಲಿ ಎರಡನೇ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.