LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

 ಚಲನಚಿತ್ರೋತ್ಸವ ಯಶಸ್ವಿಗೊಳಿಸಿ-ಡಾ.ಕಲ್ಮೇಶ ಹಾವೇರಿಪೇಠ


ಧಾರವಾಡ:   ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ರಿ)ಯಿಂದ ಅಗಷ್ಟ ೨೨ ಮತ್ತು ೨೩ ರಂದು   ನಡೆಯಲಿರುವ  ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ-೨೦೨೬ರಲ್ಲಿ ನಮ್ಮ ಮಂಡಳಿಯ ನಿರ್ಮಾಪಕರು, ನಿರ್ದೇಶಕರು, ಚಲನಚಿತ್ರದ ಕಲಾವಿದರು, ತಂತ್ರಜ್ಞರು ಆಸಕ್ತಿಯಿಂದ ಭಾಗವಹಿಸುವ ಮೂಲಕ ಚಲನಚಿತ್ರೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ಉ.ಕ.ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯಾಧ್ಯಕ್ಷ ಡಾ.ಕಲ್ಮೇಶ ಹಾವೇರಿಪೇಠ ಹೇಳಿದರು.
    ಅವರು ಉ.ಕ.ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಗಳ ರಚನೆ, ಜವಾಬ್ದಾರಿಗಳ ಹಂಚಿಕೆ ಮತ್ತು ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚೆ ಮಾಡಲಾಯಿತು. ಅಧ್ಯಕ್ಷತೆ ವಹಿಸಿದ್ದ ಮಂಡಳಿಯ ಅಧ್ಯಕ್ಷ ಮಂಜುನಾಥ ಹಗೇದಾರ ಮಾತನಾಡಿ ಮಂಡಳಿ ಕ್ರಿಯಾಶೀಲವಾಗಿ ಇರಲು ಪ್ರತಿಯೊಬ್ಬರ ಸಹಕಾರ ಅಗತ್ಯ. ಬರಿ ಪದಾಧಿಕಾರಿಗಳಿಂದ ಕಾರ್ಯ ಮಾಡಲಾಗದು. ನಾಲ್ಕನೂರಕ್ಕೂ ಹೆಚ್ಚು ನಿರ್ಮಾಪಕರು ನಮ್ಮ ಸಂಘದಲ್ಲಿದ್ದು ಅವರು ಚಿತ್ರ ನಿರ್ಮಾಣ ಮಾಡಲು ನಮ್ಮ ಮಂಡಳಿ ಎಲ್ಲ ರೀತಿಯ ಸಹಕಾರ ನೀಡಲಿದೆ. ಈಗಾಗಲೇ ಕೆಲವರು ಚಿತ್ರ ನಿರ್ಮಾಣದಲ್ಲೂ ತೊಡಗಿದ್ದಾರೆ. ನಮ್ಮ ಸಂಘದ ನೊಂದಾಯಿತ ಸದಸ್ಯರಿಗೆ ಚಿತ್ರಗಳಲ್ಲಿ  ಹೆಚ್ಚಿನ ಅವಕಾಶ ನೀಡಲಾಗುತ್ತಿದೆ ಎಂದರು. ಚಲನಚಿತ್ರ ಸಹನಿರ್ದೇಶಕ ದೀಪಕ, ಇಂಡಿಯ ನಿರ್ದೇಶಕ ಶಾಂತಕುಮಾರ ಪಾಟೀಲ,  ಕಲಾವಿದ ಜ್ಯೂ.ರಾಜಕುಮಾರ ಪ್ರಕಾಶ ರಾಜಕುಮಾರ ಬಡ್ನಿ, ದ್ಯಾಪೂರ ಸರ್, ರಾಜೀವಸಿಂಗ್ ಹಲವಾಯಿ, ಪ್ರೇಮಾ ನಡುವಿನಮನಿ, ವಿಕ್ರಮ್ ಕುಮಠಾ, ಜ್ಯೂ ಉಪೇಂದ್ರ ಬಾಬು ಮತ್ತು ವಿಜಯಪೂರ, ಬಾಗಲಕೋಟ, ಬೆಳಗಾವಿ, ಇಂಡಿ ಮೊದಲಾದ ಕಡೆಯಿಂದ ಆಗಮಿಸಿದ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು ತಮ್ಮ ಸಲಹೆ ನೀಡಿ ಅಭಿಪ್ರಾಯಗಳನ್ನು ಹಂಚಿಕೊಂಡರು. ಮಂಡಳಿಯಿಂದ ಏನೆಲ್ಲ ಸೌಲಭ್ಯ ಒದಗಿಸಲಾಗುತ್ತದೆ ಎಂಬುದನ್ನು ಕುರಿತು ಪ್ರಧಾನಕಾರ್ಯದರ್ಶಿ ರಾಹುಲ್ ದತ್ತಪ್ರಸಾದ ಹೇಳಿದರು. 
      ಇದೇ ಸಂದರ್ಭದಲ್ಲಿ ಅವರ ಹುಟ್ಟುಹಬ್ಬವನ್ನು ಮಂಡಳಿಯಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಿ ಶುಭ ಕೋರಲಾಯಿತು. ಸಲಹಾ ಮಂಡಳಿ ಸದಸ್ಯರಾದ ಅನಿಶ್ ಭರೂದವಾಲೆ, ಮಮ್ಮಿಗಟ್ಟಿ , ಡಾ.ಪ್ರಭು ಗಂಜಿಹಾಳ , ಚಿತ್ರೋತ್ಸವ ಕುರಿತು  ಮಾತನಾಡಿದರು. ವೇದಿಕೆಯಲ್ಲಿ ಚಲನಚಿತ್ರ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.  ಉಪಾಧ್ಯಕ್ಷ ಪ್ರಭು ಹಂಚಿನಾಳ ಪ್ರಾಸ್ತವಿಕ ಜೊತೆಗೆ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಚಲನಚಿತ್ರ ನಿರ್ದೇಶಕ ಅರವಿಂದ ಮುಳಗುಂದ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್