ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಮಲ್ಲಿಕಾರ್ಜುನ ಎಮ್. ಹಿರೇಮಠ ಅವರು ಕನ್ನಡ ವಿಭಾಗಕ್ಕೆ ಸಲ್ಲಿಸಿದ ಮಂಟೇಸ್ವಾಮಿ ಹಾಗೂ ಪ್ರಮುಖ ವಚನಕಾರರು: ಸಾಂಸ್ಕೃತಿಕ ಮುಖಾಮುಖಿ ಎಂಬ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಡಾ. ಪಿ. ನಾಗರಾಜ ಅವರು ಮಾರ್ಗದರ್ಶನ ಮಾಡಿದರು.
ಪ್ರಸ್ತುತ ಮಲ್ಲಿಕಾರ್ಜುನ ಎಮ್. ಹಿರೇಮಠ ಅವರು ಮುಧೋಳ ನಗರದ ದಾನಮ್ಮದೇವಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
