Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕ್ ಮುಖವಾಡ ಕಳಚಲು ನಮ್ಮ ಸಂಸದರನ್ನು ಕಳಿಸೋದಿಲ್ಲ : ಮಮತಾ ಬ್ಯಾನರ್ಜಿ

ಕೋಲ್ಕತ್ತಾ, ಮೇ 19: ಪಾಕಿಸ್ತಾನದೊಳಗಿನ ಭಯೋತ್ಪಾದನೆಯ ವಿರುದ್ಧ ಭಾರತ ನಡೆಸಿದ ಪ್ರಬಲ ದಾಳಿಯ ನಂತರ, ಭಾರತ ಸರ್ಕಾರ ಭಯೋತ್ಪಾದನೆಯ ವಿರುದ್ಧ ತನ್ನ ಅಚಲ ನಿಲುವನ್ನು ಜಗತ್ತಿಗೆ ತಿಳಿಸುವ ಕಾರ್ಯವನ್ನು ಪ್ರಾರಂಭಿಸಿದೆ. ಪಾಕಿಸ್ತಾನ ಏನೆಂಬುದನ್ನು ಜಗತ್ತಿಗೆ ಅರ್ಥ ಮಾಡಿಸಿ ಎಲ್ಲರ ಮುಂದೆ ಅದರ ಮುಖವಾಡ ಕಳಚಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಮ್ಮ ಟಿಎಂಸಿ ಸಂಸದರನ್ನು ನಾವು ಕಳುಹಿಸುವುದಿಲ್ಲ ಎಂದು ಹೇಳಿದ್ದಾರೆ.

ಕೇವಲ ಎನ್​ಡಿಎ ಮಾತ್ರವಲ್ಲ ಎಲ್ಲಾ ಪಕ್ಷಗಳ ಸಂಸದರ ನಿಯೋಗವನ್ನು ಮಾಡಿದ್ದು, ಅವರು ವಿಶ್ವದೆಲ್ಲೆಡೆ ಸಂಚರಿಸಿ ಪಾಕ್​ ಕಳ್ಳಾಟಗಳ ಕುರಿತು ಮಾಹಿತಿ ನೀಡಲಿದ್ದಾರೆ. ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಭಾರತ ಕೈಗೊಂಡ ಆಪರೇಷನ್‌ ಸಿಂಧೂರ್ ಕಾರ್ಯಾಚರಣೆಯ ಬಗ್ಗೆ ಹಾಗೂ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ಥಾನದ ಕಪಟ ಮುಖವನ್ನು ಜಗತ್ತಿಗೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಸರ್ವ ಪಕ್ಷಗಳ ನಿಯೋಗವನ್ನು ಪ್ರಮುಖ ರಾಷ್ಟ್ರಗಳಿಗೆ ಕಳುಹಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಪಾಕ್‌ ವಿರುದ್ಧ ದ್ವಿತೀಯ ಹಂತದ ರಾಜತಾಂತ್ರಿಕ ಯುದ್ಧವನ್ನು ನಡೆಸಲಿದೆ.

ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜತೆ ಕೇಂದ್ರ ಸಚಿವ ಕಿರಣ್‌ ರಿಜಿಜು ಮಾತುಕತೆ ನಡೆಸಿದ್ದು, ಕಾಂಗ್ರೆಸ್‌ ಇದರಲ್ಲಿ ಭಾಗಿಯಾಗುವುದಾಗಿ ತಿಳಿಸಿದೆ. ರಾಜತಾಂತ್ರಿಕ ಪ್ರಯತ್ನಕ್ಕೆ ಕಾಂಗ್ರೆಸ್‌ ಸಹಿತ ವಿವಿಧ ಪಕ್ಷಗಳು ತಮ್ಮ ಸಂಸದರನ್ನು ಕಳುಹಿಸಲು ಒಪ್ಪಿಗೆ ಸೂಚಿಸಿವೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ