LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿಗೆ ಶಾಕ್ ನೀಡಿದ ಮಮತಾ ಬ್ಯಾನರ್ಜಿ

2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ನಟಿ ಇದೀಗ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾರ್ಯಶೈಲಿಯಿಂದ ಪ್ರೇರಿತರಾಗಿ, ಜನರ ಸೇವೆ ಮಾಡಲು ಬಿಜೆಪಿಯಲ್ಲಿ ಸೂಕ್ತ ಅವಕಾಶ ಸಿಗದ ಕಾರಣ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ಚುನಾವಣೆಗೂ ಮುನ್ನ ಮಮತಾ ಬ್ಯಾನರ್ಜೀ ಬಿಜೆಪಿಗೆ ಶಾಕ್‌ ನೀಡದ್ದಾರೆ.


ನಟಿ ಪರ್ನೋ ಮಿತ್ರಾ ಶುಕ್ರವಾರದಂದು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಮತ್ತು ಪಕ್ಷದ ವಕ್ತಾರ ಜಯ ಪ್ರಕಾಶ್ ಮಜುಂದಾರ್ ಅವರ ಸಮ್ಮುಖದಲ್ಲಿ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾದರು.


ಸಿಎಂ ಮಮತಾ ಬ್ಯಾನರ್ಜಿ ಅವರ ಕಾರ್ಯವೈಖರಿ ನನಗೆ ಬಹಳ ಇಷ್ಟವಾಗಿದೆ. ನಾನು ಜನರ ಹಿತದೃಷ್ಟಿಯಿಂದ ಟಿಎಂಸಿ ಸೇರುತ್ತಿದ್ದೇನೆ. ಮಮತಾ ಬ್ಯಾನರ್ಜಿ ಕಾರ್ಯವೈಖರಿ ರಾಜ್ಯದ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಸಾರ್ವಜನಿಕರ ಹಿತಕ್ಕಾಗಿ ಕೆಲಸ ಮಾಡಲು ರಾಜಕೀಯ ಪ್ರವೇಶಿಸಿದ್ದೆ, ಆದ್ರೆ ಬಿಜೆಪಿಯಲ್ಲಿದ್ದುಕೊಂಡು ಜನಸೇವೆ ಮಾಡಲು ಹಾಗೂ ನಿರೀಕ್ಷಿಸಿದಷ್ಟು ಕೆಲಸ ಮಾಡಲು ಅವಕಾಶ ಸಿಗಲಿಲ್ಲ. ಈ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಪರ್ನೋ ಮಿತ್ರಾ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ, ಬಿಜೆಪಿಯಲ್ಲಿ ಯಾರಿಂದಲೂ ಒಳ್ಳೆಯ ಜನಸೇವೆಯ ಕೆಲಸ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಟಿ ಪರ್ನೋ ಮಿತ್ರಾ ಬಿಜೆಪಿ ತೊರೆದು ಟಿಎಂಸಿಗೆ ಸೇರಿದ್ದಾರೆ ಎಂದು ಹೇಳಿದರು.

ಬಂಗಾಳದಲ್ಲಿ ತಮ್ಮದೇ ಆದ ಜನಪ್ರಿಯತೆಯನ್ನು ಹೊಂದಿರುವ ನಟಿ ಪರ್ನೋ ಮಿತ್ರಾ, 2019ರಲ್ಲಿ ಬಿಜೆಪಿ ಸೇರ್ಪಡೆಯಾಗಿ. 2021ರ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು  ಬಾರಾನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತಪಸ್ ರಾಯ್ ವಿರುದ್ಧ ಪರ್ನೊ ಮಿತ್ರಾ ಸೋತಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಸಹಾಯ ಸಹಕಾರದಿಂದ ದೇವಸ್ಥಾನಗಳ ಅಭಿವೃದ್ಧಿ :ಬಾಬಾಸಾಹೇಬ ಪಾಟೀಲ ಶ್ರೀ ವೇಮನ್ ಕೋ-ಆಪ್. ಕ್ರೆಡಿಟ್ ಸೊಸಾಯಿಟಿಗೆ 3.06 ಕೋಟಿ ರೂ. ಲಾಭ : ಸಂತೋಷ ಸೋನವಾಲ್ಕರ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಮತ್ತು ಅಭಿಯಂತರರ ಪಾತ್ರ ಮಹತ್ವಪೂರ್ಣವಾದುದು :  ಡಾ.ಅಲ್ಲಮಪ್ರಭು ಮಹಾಸ್ವಾಮಿಗಳುಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಕಾಲಮಿತಿಯೊಳಗೆ ಜನರಿಗೆ ತಲುಪಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶಿಕ್ಷಣ ಇಲಾಖೆಯಿಂದ ಅಭಿನಂದನಾ ಪತ್ರಅಭಿಯಂತರರು ಸಮಾಜದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿ : ಶಾಸಕರಾದ ವಿನಯ ಕುಲಕರ್ಣಿಪ್ರಜಾಪ್ರಭುತ್ವ ಉಳಿಸಲು ಯುವಜನತೆ ನಾಯಕತ್ವ ಗುಣ ಬೆಳೆಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಕರೆ            ’ವಕ್ರತುಂಡ’ ಚಿತ್ರದ ಧಮಾಕಾ : ’ಜೈ ಗಣೇಶ’ ಟೈಟಲ್ ಟ್ರ್ಯಾಕ್ ಸಾಂಗ್ ಭರ್ಜರಿ ಸದ್ದು  ಮಹಿಳೆ ಕಾಣೆ: ಪತ್ತೆಗೆ ಮನವಿಕಲ್ಯಾಣ ಕರ್ನಾಟಕ ಉತ್ಸವ: ಬಳ್ಳಾರಿಯಲ್ಲಿ ಸಚಿವ ಟಿ. ರಘುಮೂರ್ತಿ ಅವರಿಂದ ಧ್ವಜಾರೋಹಣ