LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಾದರಿ ನೀತಿ ಸಂಹಿತೆ ‘ಮೋದಿ ನೀತಿ ಸಂಹಿತೆ’ಯಾಗಿದೆ: ಮಮತಾ ಬ್ಯಾನರ್ಜಿ ಕಿಡಿನುಡಿ

ಪುರುಲಿಯಾ, 07: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ. ಆದರೂ ಚುನಾವಣಾ ಆಯೋಗ ಕಣ್ಣುಮುಚ್ಚಿ ಕುಳಿತಿದ್ದು, ಮಾದರಿ ನೀತಿ ಸಂಹಿತೆಯನ್ನು ‘ಮೋದಿ ನೀತಿ ಸಂಹಿತೆ’ಯಾಗಿ ಪರಿವರ್ತಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಇಂದು ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಟಿಎಂಸಿ ವರಿಷ್ಠೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ತಮ್ಮನ್ನು ಮಾತ್ರ ಹಿಂದೂಗಳು ಎಂದು ಪರಿಗಣಿಸುತ್ತಾರೆ ಮತ್ತು ಅವರು ಇತರ ಸಮುದಾಯಗಳ ಬಗ್ಗೆ ಯೋಚಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮೋದಿ ಮತ್ತು ಇತರ ಬಿಜೆಪಿ ನಾಯಕರು ತಮ್ಮ "ದ್ವೇಷ ತುಂಬಿದ ಭಾಷಣಗಳ" ಮೂಲಕ ಕೆಳ ಜಾತಿಯ ಹಿಂದೂಗಳು, ಅಲ್ಪಸಂಖ್ಯಾತರು ಮತ್ತು ಇತರ ವರ್ಗದ ಜನರನ್ನು ಬೆದರಿಸುತ್ತಿದ್ದಾರೆ. ಆದರೆ ಚುನಾವಣಾ ಆಯೋಗ ಮೌನವಾಗಿದೆ ಎಂದು ಮಮತಾ ಆರೋಪಿಸಿದ್ದಾರೆ.

 

 

ಬಿಜೆಪಿ ಆಡಳಿತದಲ್ಲಿ ಮಾದರಿ ನೀತಿ ಸಂಹಿತೆ 'ಮೋದಿ ನೀತಿ ಸಂಹಿತೆ'ಯಾಗಿ ಮಾರ್ಪಟ್ಟಿದೆ: ಮಮತಾ

ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ. ಆದರೂ ಚುನಾವಣಾ ಆಯೋಗ ಕಣ್ಣುಮುಚ್ಚಿ ಕುಳಿತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

"ಚುನಾವಣಾ ಆಯೋಗದ ಮಾದರಿ ನೀತಿ ಸಂಹಿತೆ ಅಣಕವಾಗಿದೆ ಮತ್ತು ಅದನ್ನು ಮೋದಿ ನೀತಿ ಸಂಹಿತೆ ಎಂದು ಮರುನಾಮಕರಣ ಮಾಡಬೇಕು. ಆದರೆ ಈ ದೇಶದ ನಾಗರಿಕರ ಹಕ್ಕುಗಳ ಉಲ್ಲಂಘನೆಯ ವಿರುದ್ಧ ನಾವು ಹೋರಾಟ ಮುಂದುವರಿಸುತ್ತೇವೆ" ಎಂದು ಬ್ಯಾನರ್ಜಿ ಹೇಳಿದ್ದಾರೆ.

ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಬ್ಯಾನರ್ಜಿ, ಇಷ್ಟೊಂದು ಸುಳ್ಳು ಹೇಳುವ ಮತ್ತೊಬ್ಬ ಪ್ರಧಾನಿಯನ್ನು ನಾನು ನೋಡಿಲ್ಲ ಎಂದಿದ್ದಾರೆ.

"ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ನೀಡುವುದಾಗಿ 2014 ರಲ್ಲಿ ನೀಡಿದ ಭರವಸೆ ಏನಾಯಿತು? ಉಚಿತ ಎಲ್‌ಪಿಜಿ ಗ್ಯಾಸ್ ನೀಡುವುದಾಗಿ ನೀಡಿದ ಭರವಸೆ ಏನಾಯಿತು? ಅವರ 'ಬೇಟಿ ಬಂಚಾವೋ ಬೇಟಿ ಪಡಾವೋ' ಯೋಜನೆ ಏನಾಯಿತು?" ಎಂದು ಪಶ್ಚಿಮ ಬಂಗಾಳ ಸಿಎಂ ಪ್ರಶ್ನಿಸಿದರು.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್