Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾದರಿ ನೀತಿ ಸಂಹಿತೆ ‘ಮೋದಿ ನೀತಿ ಸಂಹಿತೆ’ಯಾಗಿದೆ: ಮಮತಾ ಬ್ಯಾನರ್ಜಿ ಕಿಡಿನುಡಿ

ಪುರುಲಿಯಾ, 07: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ. ಆದರೂ ಚುನಾವಣಾ ಆಯೋಗ ಕಣ್ಣುಮುಚ್ಚಿ ಕುಳಿತಿದ್ದು, ಮಾದರಿ ನೀತಿ ಸಂಹಿತೆಯನ್ನು ‘ಮೋದಿ ನೀತಿ ಸಂಹಿತೆ’ಯಾಗಿ ಪರಿವರ್ತಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಇಂದು ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಟಿಎಂಸಿ ವರಿಷ್ಠೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ತಮ್ಮನ್ನು ಮಾತ್ರ ಹಿಂದೂಗಳು ಎಂದು ಪರಿಗಣಿಸುತ್ತಾರೆ ಮತ್ತು ಅವರು ಇತರ ಸಮುದಾಯಗಳ ಬಗ್ಗೆ ಯೋಚಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮೋದಿ ಮತ್ತು ಇತರ ಬಿಜೆಪಿ ನಾಯಕರು ತಮ್ಮ "ದ್ವೇಷ ತುಂಬಿದ ಭಾಷಣಗಳ" ಮೂಲಕ ಕೆಳ ಜಾತಿಯ ಹಿಂದೂಗಳು, ಅಲ್ಪಸಂಖ್ಯಾತರು ಮತ್ತು ಇತರ ವರ್ಗದ ಜನರನ್ನು ಬೆದರಿಸುತ್ತಿದ್ದಾರೆ. ಆದರೆ ಚುನಾವಣಾ ಆಯೋಗ ಮೌನವಾಗಿದೆ ಎಂದು ಮಮತಾ ಆರೋಪಿಸಿದ್ದಾರೆ.

 

 

ಬಿಜೆಪಿ ಆಡಳಿತದಲ್ಲಿ ಮಾದರಿ ನೀತಿ ಸಂಹಿತೆ 'ಮೋದಿ ನೀತಿ ಸಂಹಿತೆ'ಯಾಗಿ ಮಾರ್ಪಟ್ಟಿದೆ: ಮಮತಾ

ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ. ಆದರೂ ಚುನಾವಣಾ ಆಯೋಗ ಕಣ್ಣುಮುಚ್ಚಿ ಕುಳಿತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

"ಚುನಾವಣಾ ಆಯೋಗದ ಮಾದರಿ ನೀತಿ ಸಂಹಿತೆ ಅಣಕವಾಗಿದೆ ಮತ್ತು ಅದನ್ನು ಮೋದಿ ನೀತಿ ಸಂಹಿತೆ ಎಂದು ಮರುನಾಮಕರಣ ಮಾಡಬೇಕು. ಆದರೆ ಈ ದೇಶದ ನಾಗರಿಕರ ಹಕ್ಕುಗಳ ಉಲ್ಲಂಘನೆಯ ವಿರುದ್ಧ ನಾವು ಹೋರಾಟ ಮುಂದುವರಿಸುತ್ತೇವೆ" ಎಂದು ಬ್ಯಾನರ್ಜಿ ಹೇಳಿದ್ದಾರೆ.

ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಬ್ಯಾನರ್ಜಿ, ಇಷ್ಟೊಂದು ಸುಳ್ಳು ಹೇಳುವ ಮತ್ತೊಬ್ಬ ಪ್ರಧಾನಿಯನ್ನು ನಾನು ನೋಡಿಲ್ಲ ಎಂದಿದ್ದಾರೆ.

"ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ನೀಡುವುದಾಗಿ 2014 ರಲ್ಲಿ ನೀಡಿದ ಭರವಸೆ ಏನಾಯಿತು? ಉಚಿತ ಎಲ್‌ಪಿಜಿ ಗ್ಯಾಸ್ ನೀಡುವುದಾಗಿ ನೀಡಿದ ಭರವಸೆ ಏನಾಯಿತು? ಅವರ 'ಬೇಟಿ ಬಂಚಾವೋ ಬೇಟಿ ಪಡಾವೋ' ಯೋಜನೆ ಏನಾಯಿತು?" ಎಂದು ಪಶ್ಚಿಮ ಬಂಗಾಳ ಸಿಎಂ ಪ್ರಶ್ನಿಸಿದರು.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ