Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾದರಿ ನೀತಿ ಸಂಹಿತೆ ‘ಮೋದಿ ನೀತಿ ಸಂಹಿತೆ’ಯಾಗಿದೆ: ಮಮತಾ ಬ್ಯಾನರ್ಜಿ ಕಿಡಿನುಡಿ

ಪುರುಲಿಯಾ, 07: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ. ಆದರೂ ಚುನಾವಣಾ ಆಯೋಗ ಕಣ್ಣುಮುಚ್ಚಿ ಕುಳಿತಿದ್ದು, ಮಾದರಿ ನೀತಿ ಸಂಹಿತೆಯನ್ನು ‘ಮೋದಿ ನೀತಿ ಸಂಹಿತೆ’ಯಾಗಿ ಪರಿವರ್ತಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಆರೋಪಿಸಿದ್ದಾರೆ.

ಇಂದು ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಟಿಎಂಸಿ ವರಿಷ್ಠೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರು ತಮ್ಮನ್ನು ಮಾತ್ರ ಹಿಂದೂಗಳು ಎಂದು ಪರಿಗಣಿಸುತ್ತಾರೆ ಮತ್ತು ಅವರು ಇತರ ಸಮುದಾಯಗಳ ಬಗ್ಗೆ ಯೋಚಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮೋದಿ ಮತ್ತು ಇತರ ಬಿಜೆಪಿ ನಾಯಕರು ತಮ್ಮ "ದ್ವೇಷ ತುಂಬಿದ ಭಾಷಣಗಳ" ಮೂಲಕ ಕೆಳ ಜಾತಿಯ ಹಿಂದೂಗಳು, ಅಲ್ಪಸಂಖ್ಯಾತರು ಮತ್ತು ಇತರ ವರ್ಗದ ಜನರನ್ನು ಬೆದರಿಸುತ್ತಿದ್ದಾರೆ. ಆದರೆ ಚುನಾವಣಾ ಆಯೋಗ ಮೌನವಾಗಿದೆ ಎಂದು ಮಮತಾ ಆರೋಪಿಸಿದ್ದಾರೆ.

 

 

ಬಿಜೆಪಿ ಆಡಳಿತದಲ್ಲಿ ಮಾದರಿ ನೀತಿ ಸಂಹಿತೆ 'ಮೋದಿ ನೀತಿ ಸಂಹಿತೆ'ಯಾಗಿ ಮಾರ್ಪಟ್ಟಿದೆ: ಮಮತಾ

ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ. ಆದರೂ ಚುನಾವಣಾ ಆಯೋಗ ಕಣ್ಣುಮುಚ್ಚಿ ಕುಳಿತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

"ಚುನಾವಣಾ ಆಯೋಗದ ಮಾದರಿ ನೀತಿ ಸಂಹಿತೆ ಅಣಕವಾಗಿದೆ ಮತ್ತು ಅದನ್ನು ಮೋದಿ ನೀತಿ ಸಂಹಿತೆ ಎಂದು ಮರುನಾಮಕರಣ ಮಾಡಬೇಕು. ಆದರೆ ಈ ದೇಶದ ನಾಗರಿಕರ ಹಕ್ಕುಗಳ ಉಲ್ಲಂಘನೆಯ ವಿರುದ್ಧ ನಾವು ಹೋರಾಟ ಮುಂದುವರಿಸುತ್ತೇವೆ" ಎಂದು ಬ್ಯಾನರ್ಜಿ ಹೇಳಿದ್ದಾರೆ.

ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಬ್ಯಾನರ್ಜಿ, ಇಷ್ಟೊಂದು ಸುಳ್ಳು ಹೇಳುವ ಮತ್ತೊಬ್ಬ ಪ್ರಧಾನಿಯನ್ನು ನಾನು ನೋಡಿಲ್ಲ ಎಂದಿದ್ದಾರೆ.

"ಪ್ರತಿಯೊಬ್ಬ ನಾಗರಿಕನ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ನೀಡುವುದಾಗಿ 2014 ರಲ್ಲಿ ನೀಡಿದ ಭರವಸೆ ಏನಾಯಿತು? ಉಚಿತ ಎಲ್‌ಪಿಜಿ ಗ್ಯಾಸ್ ನೀಡುವುದಾಗಿ ನೀಡಿದ ಭರವಸೆ ಏನಾಯಿತು? ಅವರ 'ಬೇಟಿ ಬಂಚಾವೋ ಬೇಟಿ ಪಡಾವೋ' ಯೋಜನೆ ಏನಾಯಿತು?" ಎಂದು ಪಶ್ಚಿಮ ಬಂಗಾಳ ಸಿಎಂ ಪ್ರಶ್ನಿಸಿದರು.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ