ಶಾರಿಕ್ ಮಾತ್ರವಲ್ಲದೆ, ಪರಪ್ಪರ ಅಗ್ರಹಾರ ಜೈಲಿನಲ್ಲಿರುವ ಇತರ ಶಂಕಿತ ಉಗ್ರರನ್ನೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳಿಗೆ, ಅಕ್ರಮ ಹಣ ಸಂದಾಯ ಆಗಿತ್ತು ಎಂಬ ಆರೋಪಗಳ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಶಾರೀಕ್ ಸೇರಿದಂತೆ ಪ್ರಕರಣದ ಇನ್ನಿತರ ಆರೋಪಿಗಳ ವಿಚಾರಣೆ ನಡೆಸಲಾಗಿದೆ. ವಿದೇಶದಿಂದ ಆರೋಪಿಗಳಿಗೆ ಹಣ ಸಂದಾಯ ಆಗಿರುವ ಬಗ್ಗೆ ಇಡಿ ತನಿಖೆ ಮಾಡುತ್ತಿದೆ. ನ್ಯಾಯಾಲಯದ ಅನುಮತಿ ಪಡೆದು ಜೈಲಿನಲ್ಲಿ ಶಂಕಿತ ಉಗ್ರರ ವಿಚಾರಣೆ ನಡೆಸಿದೆ.