ಮಣಿಪುರ ರಾಜ್ಯ ಎರಡು ವರ್ಷದಿಂದ ಜನಾಂಗೀಯ ಕಲಹ ಹಾಗೂ ಹಿಂಸಾಚಾರದಿಂದ ನಲುಗುತ್ತಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲರಾಗಿದ್ದಕ್ಕೆ ರಾಜೀನಾಮೆ ನೀಡಿದ್ದಾರೋ ಎಂಬುದು ಗೊತ್ತಾಗಿಲ್ಲ. ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದ ಆಳ್ವಿಕೆ ಇದೆ.
‘ಇಷ್ಟರವರೆಗೆ ಮಣಿಪುರ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದ್ದು ನನಗೊಂದು ಗೌರವ ಎನಿಸಿದೆ. ಮಣಿಪುರದ ಪ್ರತಿಯೊಬ್ಬ ವ್ಯಕ್ತಿಯ ಸುರಕ್ಷತೆಗೆ ಮತ್ತು ರಾಜ್ಯದ ಅಭಿವೃದ್ದಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಲು ನೆರವು ನೀಡಿದ ಕೇಂದ್ರ ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಈ ಬೆಂಬಲವನ್ನು ಹೀಗೇ ಮುಂದುವರಿಸಬೇಕೆಂದು ಕೇಂದ್ರ ಸರ್ಕಾರವನ್ನು ಈ ಮೂಲಕ ಕೇಳಿಕೊಳ್ಳುತ್ತೇನೆ’ ಎಂದು ರಾಜ್ಯಪಾಲರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಸಿಎಂ ಬಿರೇನ್ ಸಿಂಗ್ ತಿಳಿಸಿದ್ದಾರೆ.