Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ರಾಜ್ಯ ವಿಜ್ಞಾನ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರಾಗಿ ಮಾರುತಿ ವಿಜಯನಗರ ನೇಮಕ

 ಬೆಳಗಾವಿ ಫೆ., 03-  ಕರ್ನಾಟಕ ರಾಜ್ಯ ವಿಜ್ಞಾನ ಸಂಶೋಧನಾ ಪರಿಷತ್ ಬೆಂಗಳೂರು ಇದರ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ಅವರು  ಮಾರುತಿ ವೀರಪ್ಪ ವಿಜಯನಗರ ಅವರನ್ನು ಬೆಳಗಾವಿ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಿ ನಿನ್ನೆ ನಡೆದ ರಾಜ್ಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡಿದರು.

        ಈ ಮೊದಲು ಯಾದಗಿರಿ ರಾಜ್ಯ ವೈಜ್ಞಾನಿಕ ಸಮ್ಮೇಳನ 2025 ಯಶಸ್ವಿಗೆ ಶ್ರಮಿಸಿದ ಎಲ್ಲರನ್ನು ಆಮಂತ್ರಿಸಿದ ಲೋಕೋಪಯೋಗಿ ಸಚಿವರು ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಆದ  ಸತೀಶ ಜಾರಕಿಹೊಳಿ ಅವರು ತಮ್ಮ ಬೆಂಗಳೂರು ಗೃಹ ಕಚೇರಿಯಲ್ಲಿ ಎಲ್ಲರನ್ನೂ ಗೌರವಿಸಲು ಔತಣಕೂಟ ಏರ್ಪಡಿಸಿ ಪ್ರಶಂಶಿಸಿದರು. ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬರುವ ಡಿಸೆಂಬರದಲ್ಲಿ ಬೆಳಗಾವಿಯಲ್ಲಿ ನಡೆಯುವ ರಾಜ್ಯ ವೈಜ್ಞಾನಿಕ ಸಮ್ಮೇಳನ 2026 ಯಶಸ್ವಿಗೆ ಸಲಹೆಗಳನ್ನು ನೀಡಿದರು. ಸಚಿವರ ಸೂಚನೆ ಮೇರೆಗೆ ಅಖಂಡ ಬೆಳಗಾವಿ ಜಿಲ್ಲೆಯ ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಪಿಕೆಪಿಎಸ್ ಸೊಸೈಟಿ ಮಾಜಿ ಅಧ್ಯಕ್ಷರು, ಲ್ಯಾಂಡ್ ಟ್ರೂಬುನಲ್ ಗೋಕಾಕ ಹಾಲಿ ಸದಸ್ಯರು ಮತ್ತು ಶ್ರೀಮತಿ ನೀಲಮ್ಮ ವೀರಪ್ಪ ವಿಜಯನಗರ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಚೇರಮನ್ನರು  ಆದ  ಮಾರುತಿ ವೀರಪ್ಪ ವಿಜಯನಗರ ಅವರನ್ನು ನೇಮಕ ಮಾಡಿ ನಿನ್ನೆ ನಡೆದ ರಾಜ್ಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಪವಾಡ ಬಯಲು ಪ್ರಖ್ಯಾತಿಯ ರಾಜ್ಯ ವಿಜ್ಞಾನ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಡಾ. ಹುಲಿಕಲ್ ನಟರಾಜ ಅವರು ಅಧಿಕೃತ ಘೋಷಣೆ ಮಾಡಿದರು. ಎಲ್ಲ ಆಡಳಿತ ಮಂಡಳಿಯವರು ಮತ್ತು ಎಲ್ಲ ಜಿಲ್ಲಾಧ್ಯಕ್ಷರು ಸಹಮತ ಸೂಚಿಸಿ ಅಭಿನಂದಿಸಿದರು.

     ಈ ಸಂದರ್ಭದಲ್ಲಿ    ರಾಜ್ಯಾಧ್ಯಕ್ಷರಾದ ಡಾ. ಹುಲಿಕಲ್ ನಟರಾಜ, ನೂತನ ಬೆಳಗಾವಿ ಜಿಲ್ಲಾ ಅಧ್ಯಕ್ಷ  ಮಾರುತಿ ವಿಜಯನಗರ, ಬಸವರಾಜ ಹಟ್ಟಿಗೌಡರ, ಪ್ರೊ. ನಾಗರತ್ನ ಖನ್ನೆ ನಾಯ್ಕರ,  ಸಂಗಮೇಶ ಹಚಡದ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆಯುವ ರಾಜ್ಯ ವೈಜ್ಞಾನಿಕ ಸಮ್ಮೇಳನ ಯಶಸ್ವಿಗೆ ರಾಜ್ಯ ವಿಜ್ಞಾನ ಸಂಶೋಧನಾ ಪರಿಷತ್, ಮಾನವ ಬಂಧುತ್ವ ವೇದಿಕೆ,ಭಾರತ ಸೇವಾದಳ ಸೇರಿ ಉನ್ನತ ಸಂಚಾಲಕ ಸಮಿತಿ ಮಾಡಿ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳಲು  ಸಚಿವರಾದ  ಸತೀಶ ಜಾರಕಿಹೊಳಿ ಅವರು ಸೂಚಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಸಂಶೋಧನಾ ಪರಿಷತ ಬೆಳಗಾವಿ ವಿಭಾಗದ ನಿರ್ದೇಶಕರಾದ  ಬಸವರಾಜ ಹಟ್ಟಿಗೌಡರ್ (ಕೊಳವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ