Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಹಾ ಕೊಲೆಗಾರನಿಗೆ  ಗಲ್ಲು ಶಿಕ್ಷೆಯಾಗಲಿ: ವಿವಿಧ ಸಂಘಟನೆಗಳ ಬೃಹತ್ ಪ್ರತಿಭಟನೆ

















ಅಥಣಿ ,24: ಹುಬ್ಬಳ್ಳಿಯ  ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ  ಖಂಡಿಸಿ ಇಲ್ಲಿನ  ನಾಗರಿಕ ಹಿತರಕ್ಷಣಾ ವೇದಿಕೆ, ತಾಲೂಕ ಜಂಗಮ ಸಮಾಜ, ವಿವಿಧ ಮಹಿಳಾ ಸಂಘಟನೆ, ಕನ್ನಡ ಪರ ಸಂಘಟನೆ ಮತ್ತು ಹಿಂದೂ ಪರಸಂಘಟನೆಗಳ  ಸಂಯುಕ್ತ ಆಶ್ರಯದಲ್ಲಿ  ಮಂಗಳವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ  ತಹಶೀಲ್ದಾರ್ ಮೂಲಕ  ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.


ಪಟ್ಟಣದ ಬುಧವಾರಪೇಟೆದಿಂದ ಆರಂಭವಾದ ಬೃಹತ್ ಪ್ರತಿಭಟನಾ ಮೆರವಣಿಗೆ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ  ಮಾನವ ಸರ್ಪಳಿ ನಿರ್ಮಿಸಿ  ಜೇವರ್ಗಿ-  ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.


ಈ ವೇಳೆ  ಶೆಟ್ಟರ ಮಠದ  ಮರುಳಸಿದ್ದ ಸ್ವಾಮೀಜಿ  ಮಾತನಾಡಿ ಹುಬ್ಬಳ್ಳಿ ಕಾಲೇಜ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು  ಕೊಲೆ ಮಾಡಿರುವುದು ಅತ್ಯಂತ ಪೈಶಾಚಿಕ ಕೃತ್ಯವಾಗಿದೆ. ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ದಿಟ್ಟ ಮಹಿಳೆಯರ ಈ ನಾಡಿನಲ್ಲಿ  ಇಂದು ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಶಾಲಾ ಕಾಲೇಜಿನ ಮಕ್ಕಳು ಕೊಲಿಯಾಗುತ್ತಿರುವ ಘಟನೆ ಪಾಲಕರಲ್ಲಿ ಆತಂಕ ತರುತ್ತದೆ. ನೇಹಾಳನ್ನ ಕೊಚ್ಚಿ ಕೊಲೆ ಮಾಡಿದ ಕೊಲೆಗಡುಕನನ್ನು  ಸುಮ್ಮನೆ ಬಿಡಬಾರದು. ಕೊಲೆಯ ಆರೋಪಿ  ಫಯಾಜ್ ಎಂಬತನನ್ನು ಸಾರ್ವಜನಿಕವಾಗಿ ಕಠಿಣ ಶಿಕ್ಷೆ ವಿಧಿಸಬೇಕು. ರಾಜ್ಯದಲ್ಲಿ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿರುವುದರಿಂದ  ರಾಜ್ಯ ಸರ್ಕಾರ ಕಠಿಣವಾದ ಕಾನೂನನ್ನ ರೂಪಿಸಬೇಕೆಂದು ಒತ್ತಾಯಿಸಿದರು.


ಯುವ ಮುಖಂಡ ಚಿದಾನಂದ ಸವದಿ ಮಾತನಾಡಿ  ವಿದ್ಯಾರ್ಥಿಯನ್ನು  ಕಾಲೇಜು ಆವರಣದಲ್ಲಿ ಹತ್ಯೆ ಮಾಡಿರುವ ಕೃತ್ಯ ರಾಜ್ಯದ ಜನತೆಯನ್ನ ಬೆಚ್ಚಿಬಿಳಿಸಿದೆ. ಫಯಾಜ್ ಎಂಬ ಯುವಕ  ನೇಹಾ ಎಂಬ ಯುವತಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವುದು ಖಂಡನೀಯ. ನೇಹಾ ಸಾವಿಗೆ ನ್ಯಾಯ ಸಿಗಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು  ಪ್ರಕರಣವನ್ನು ಸಿಐಡಿ ಗೆ ಒಪ್ಪಿಸಿದ್ದಾರೆ.


ವಿಶೇಷ ನ್ಯಾಯಾಲಯ ಸ್ಥಾಪಿಸಿ ಅಪರಾಧಿಗೆ ಕಠಿಣ ಶಿಕ್ಷೆ ನೀಡುವಲ್ಲಿ ಸರ್ಕಾರ ಮುಂದಾಗಿರುವದು ನಮ್ಮೆಲ್ಲರಿಗೆ ಸಮಾಧಾನ ತಂದಿದೆ. ಈ ಕೊಲೆ ಪ್ರಕರಣವನ್ನು ಯಾರು ರಾಜಕೀಯವಾಗಿ ಬಳಸಿಕೊಳ್ಳಬಾರದು. ಇಂದು ಅಥಣಿಯಲ್ಲಿ ನಡೆದ ಹೋರಾಟದಲ್ಲಿ  ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಎಲ್ಲ ಸಮುದಾಯದವರು  ಪಾಲ್ಗೊಳ್ಳುವ ಮೂಲಕ  ವಿದ್ಯಾರ್ಥಿನಿ ನೇಹಾ ಕುಟುಂಬಕ್ಕೆ ನ್ಯಾಯ ದೊರಕಬೇಕೆಂದು ಹೋರಾಟ  ಮಾಡಲಾಗುತ್ತಿದೆ. ಸರ್ಕಾರ ಕೂಡಲೇ  ತನಿಖೆಯನ್ನು ಚುರುಕು ಗೊಳಿಸಿ  ಕೊನೆ ಹಂತಕನಿಗೆ  ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.


ನಂತರ ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ  ಉಪತಹಶೀಲ್ದಾರ  ಮಹದೇವ್ ಬಿರಾದಾರ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮುಖಂಡರಾದ , ಪ್ರಕಾಶ ಮಹಾಜನ, ಕರವೇ ಅಧ್ಯಕ್ಷ  ಅಣ್ಣಾಸಾಬ ತೆಲಸಂಗ,  , ಯುವ ಮುಖಂಡ  ಶಿವಕುಮಾರ ಸವದಿ, ಸಿ.ಎ ಇಟ್ನಾಳಮಠ  ಮಾತನಾಡಿದರು.


ಶಿವಕುಮಾರ ತೆಲಸಂಗ, ಕಾಡಯ್ಯ ಹಿರೇಮಠ, ವಿಶ್ವನಾಥ ತೆಲಸಂಗ, ಶರಣಯ್ಯ ವಸ್ತ್ರದ, ಜಗದೀಶ ಹಿರೇಮಠ, ಈರಣ್ಣ ಜಗದಾಳ ಮಠ,ಎಂ. ಡಿ ತೊದಲಬಾಗಿ, ಕಲ್ಲಪ್ಪ ಒಣಜೋಳ, ಸಂಜೀವ ತೆಲಸಂಗ, ಸಂಪತಕುಮಾರ ಶೆಟ್ಟಿ, ಸಂತೋಷ ಸಾವಡಕರ, ದತ್ಜತಾ ವಾಸ್ಟರ,ಜಗನ್ನಾಥ ಬಾಮನೆ,  ಶಿವಪುತ್ರ ಯಾದವಾಡ, ಪ್ರಶಾಂತ ತೋಡಕರ, ಸಿದ್ದು ಮಾಳಿ,  ಪಿಂಟು ಹಿರೇಮಠ, ರೋಹಿಣಿ ಯಾದವಾಡ, ಗೀತಾ ತೋರಿ, ರಾಜು ವಾಘಮೋರೆ, ನಟರಾಜ ಹಿರೇಮಠ, ಮುತ್ತುರಾಜ್ ಸೇರಿದಂತೆ  ಅನೇಕ ಮುಖಂಡರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಹೋರಾಟದಲ್ಲಿ ಪಾಲ್ಗೊಂಡಿದ್ದರು.


















































Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ