Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾತೃಶ್ರೀ ವಾತ್ಸಲ್ಯ ಕಿಟ್ ವಿತರಣೆ: ಜಿಲ್ಲಾ ನಿರ್ದೇಶಕ ರೋಹಿತಾಕ್ಷರಿಂದ ಹಸ್ತಾಂತರ





ಬಳ್ಳಾರಿ. ಫೇ. 06.: ತಾಯಿ ಮಮತೆಯ, ವಾತ್ಸಲ್ಯ ಹೃದಯದ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ನೇತೃತ್ವದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ, ಮಾಶಾಸನ ಪಡೆಯುತ್ತಿರುವ  ರತ್ನಮ್ಮನವರಿಗೆ ಜಿಲ್ಲಾ ನಿರ್ದೇಶಕರಾದ ಮಾನ್ಯ ಶ್ರೀ ರೋಹಿತಾಕ್ಷ ಅವರು 'ವಾತ್ಸಲ್ಯ ಕಿಟ್' ವಿತರಣೆ ಮಾಡಿ ಮಾತನಾಡಿದರು.


 ಅವರು ಇಂದು ಬಳ್ಳಾರಿ ನಗರದ ಗಾಂಧಿನಗರ ವಲಯದ ದೇವಿನಗರ ಕಾರ್ಯಕ್ಷೇತ್ರದ ನಿವಾಸಿಗಳಾದ  ರತ್ನಮ್ಮನವರು, ಯೋಜನೆಯಿಂದ ಕಳೆದ 3 ವರ್ಷಗಳಿಂದ ಪ್ರತಿ ತಿಂಗಳು 1000 ರೂ. ಮಾಶಾಸನ ಪಡೆಯುತ್ತಿದ್ದಾರೆ. ಇವರಿಗೆ ಇಂದು ಅಧಿಕಾರಿಗಳು ಕಿಟ್ ಹಸ್ತಾಂತರಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯಾದ್ಯಂತ ಸಾವಿರಾರು ದುರ್ಬಲ ವರ್ಗದ, ಅಶಕ್ತ, ನಿರ್ಗತಿಕ ಮತ್ತು ಕಡು ಬಡವರ ಕುಟುಂಬಗಳಿಗೆ ಪ್ರತಿ ತಿಂಗಳು 1000 ರೂ. ಮಾಶಾಸನವನ್ನು ನೀಡಲಾಗುತ್ತಿದೆ. ಯೋಜನೆಯ ಕಾರ್ಯಕರ್ತರು ಗ್ರಾಮಗಳಲ್ಲಿ ಸರ್ವೆ ನಡೆಸಿ, ದುಡಿಯಲು ಅಶಕ್ತರಾದವರು, ಅನಾರೋಗ್ಯದಿಂದ ಬಳಲುತ್ತಿರುವವರು ಹಾಗೂ ಸಂಬಂಧಿಕರಿಲ್ಲದೆ ಅನಾಥರಾಗಿರುವ ನಿರ್ಗತಿಕರನ್ನು ಗುರುತಿಸಿ, ಅವರ ಜೀವನೋಪಾಯಕ್ಕಾಗಿ ಪ್ರತಿ ತಿಂಗಳು 1000 ರೂ. ಹಣವನ್ನು ಅವರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ.

ಪ್ರಸ್ತುತ ನಮ್ಮ ಬಳ್ಳಾರಿ ಜಿಲ್ಲೆಯಲ್ಲಿ 188 ಮಾಶಾಸನ ಪಡೆಯುತ್ತಿರುವ ಸದಸ್ಯರಿಗೆ ಒಟ್ಟು 1,95,000 ರೂ. ಹಣವನ್ನು ಪ್ರತಿ ತಿಂಗಳು ಫಲಾನುಭವಿಗಳಿಗೆ ನೀಡುವಂತೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಮಂಜೂರಾತಿ ನೀಡಿರುತ್ತಾರೆ. ಅದರಂತೆ ಬಳ್ಳಾರಿ-1 ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ 34 ಜನ ಸದಸ್ಯರಿಗೆ 34,000 ರೂ. ಮೊತ್ತದ ಮಾಶಾಸನವನ್ನು ಪ್ರತಿ ತಿಂಗಳು ವಿತರಣೆ ಮಾಡಲಾಗುತ್ತಿದೆ.

"ಅಷ್ಟೇ ಅಲ್ಲದೆ, ಮಾಶಾಸನ ಪಡೆಯುವ ಸದಸ್ಯರಿಗೆ ಯೋಜನೆಯಿಂದ ಚಾಪೆ, ದಿಂಬು, ಹೊದಿಕೆ, ಚಮಚ, ಸೀರೆ, ಬಟ್ಟೆ, ಸೋಪ್, ಪ್ಲೇಟ್, ಚಂಬು, ಲೋಟ, ಕೊಡಪಾನ, ಬೆಡ್ ಶೀಟ್, ಟವಲ್ ಮತ್ತು ಪೌಷ್ಟಿಕ ಆಹಾರವನ್ನೊಳಗೊಂಡ ವಾತ್ಸಲ್ಯ ಕಿಟ್ ನೀಡಲಾಗುತ್ತಿದೆ. ಹೀಗೆ ಒಂದು ಕುಟುಂಬದ ನಿರ್ವಹಣೆಗೆ ಅತಿ ಅವಶ್ಯಕವಾಗಿ ಬೇಕಾಗಿರುವ ವಸ್ತುಗಳನ್ನು ಹಾಗೂ ಮನೆ ಇಲ್ಲದ ಫಲಾನುಭವಿಗಳಿಗೆ 'ವಾತ್ಸಲ್ಯ ಮನೆ' ನಿರ್ಮಾಣವನ್ನೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಡಲಾಗುತ್ತಿದೆ," ಎಂದು ಬಳ್ಳಾರಿ-1 ತಾಲ್ಲೂಕಿನ ಯೋಜನಾಧಿಕಾರಿಗಳಾದ ಶ್ರೀ ಬಸವರಾಜ ಕೆ. ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ಗಾಂಧಿನಗರ ವಲಯದ ಮೇಲ್ವಿಚಾರಕರಾದ ಮಹಮ್ಮದ್ ರಫೀಕ್, ಜ್ಞಾನವಿಕಾಸ ಸಮನ್ವಯಾಧಿಕಾರಿ  ಆಶಾ, ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು ಹಾಗೂ ಸೇವಾಪ್ರತಿನಿಧಿ  ಭಾಗ್ಯಲಕ್ಷ್ಮೀ ಉಪಸ್ಥಿತರಿದ್ದರು.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ