Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯಲ್ಲಿ ಎಐಎಂಐಎಂ ಸಂಘಟನೆ ಬಲಪಡಿಸಲು ಸದಸ್ಯತ್ವ ಅಭಿಯಾನ: ಲತೀಫ್‌ಖಾನ್ ಫಠಾನ್

ಬಳ್ಳಾರಿ, ಜು.21: ರಾಜ್ಯದಲ್ಲಿ ಎಐಎಂಐಎಂ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೂತ್ ಮಟ್ಟದ ಸದಸ್ಯತ್ವ ಅಭಿಯಾನ ಹಾಗೂ ಸಂಘಟನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಲತೀಫ್‌ಖಾನ್ ಫಠಾನ್ ತಿಳಿಸಿದರು.
ನಗರದ ಅತಿಥಿ ಗೃಹದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೇಳಿದರು.
2012ರಿಂದ ಕರ್ನಾಟಕದಲ್ಲಿ ಎಐಎಂಐಎಂ ಪಕ್ಷ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದೀಗ ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಗ್ರಾಮ ಮಟ್ಟದವರೆಗೆ ಪಕ್ಷವನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಸಂಘಟನೆಯ ಬೆಳವಣಿಗೆ, ಸದಸ್ಯತ್ವ ವೃದ್ಧಿ ಹಾಗೂ ಸ್ಥಳೀಯ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸುವ ಕುರಿತು ಚರ್ಚಿಸಲಾಗಿದೆ. ಪ್ರತಿಯೊಂದು ಬೂತ್‌ನಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಲು ಕಾರ್ಯಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲೇ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಐಎಂಐಎಂ ಮುಖಂಡರಾದ ನಜೀರ್ ಹುನಯಲ್, ದಾದಾಪೀರ್ ಬೆಟ್ಟಗೇರಿ, ಮೊಹಮ್ಮದ್ ಶಾರುಖ್ ಪಾಟೀಲ್, ಶಫಾಕತ್ ಬಡಗೇರಿ, ಝಾಕೀರ್ ಹಾಗೂ ದಾದಾ ಸಲ್ಮಾನ್, ದಾದಾ ಪೀರ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಕುಲಗೊಡ ಮಾರ್ಗವಾಗಿ ಹುಕ್ಕೇರಿ-ಬಾಗಲಕೋಟೆ ಬಸ ಸಂಚಾರ ಪ್ರಾರಂಭಿಸಲು ಮನವಿ"ಎಸ್ಐಆರ್ ಪ್ರಕ್ರಿಯೆಯಲ್ಲಿ ಎಲ್ಲ ಮತದಾರರೂ ಭಾಗಿಯಾಗಬೇಕು: ಮಾಜಿ ಮೇಯರ್ ಎಂ.ರಾಜೇಶ್ವರಿಬರಪೀಡಿತ ರಾಜ್ಯ ಎಂದು ಘೋಷಿಸಿಮಹಿಳಾ ಮೀಸಲಾತಿ ತಕ್ಷಣ ಜಾರಿಗೊಳಿಸಿ: ಜೆಎಂಎಸ್ ಆಗ್ರಹಬೆಳಗಾವಿ ಜಿಲ್ಲಾ ಲೇಖಕಿಯರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆಬೆಳ್ಳಿ ಮಹೋತ್ಸವದತ್ತ ಸಾಗಲಿ ಕ್ರಾಂತಿ ಮಹಿಳಾ ಮಂಡಳ: ಜಿತೇಶ್ ಕಬ್ಬೂರ್ಹೈಕಮಾಂಡ್ ತೀರ್ಮಾನವೇ ಅಂತಿಮ; ಯಾರಿಗೆ ಸಚಿವ ಸ್ಥಾನ ಸಿಕ್ಕರೂ ನಮ್ಮವರೇ: ಸತೀಶ್ ಜಾರಕಿಹೊಳಿ263ನೇ ದಿನದಲ್ಲಿ ಬಲ್ದೋಟ ಹಟಾವೋ, ಮಾಲಿನ್ಯ ವಿರೋಧಿ ಹೋರಾಟ ಯಶಸ್ವಿ ಅಂಬೇಡ್ಕರ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಎಸ್‍ಐಆರ್ ಪ್ರಕ್ರಿಯೆ ಶೀಘ್ರದಲ್ಲಿಯೇ ಪೂರ್ಣಗೊಳಿಸಿ: ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್