Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

*ಬಿಜೆಪಿಯಿಂದ ಭಾರತೀಯ ಜನಸಂಘದ ಸ್ಥಾಪಕರಾದ ಡಾ.ಶ್ಯಾಮಪ್ರಸಾದ ಮುಖರ್ಜಿ ಸ್ಮರಣೆ*

ಬೆಳಗಾವಿ.ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಇಂದು  ಬೆಳಗಾವಿ ನಗರದ ಬಿಜೆಪಿ ಕಾರ್ಯಾಲಯದಲ್ಲಿ  ಡಾ.ಶ್ಯಾಮಪ್ರಸಾದ ಮುಖರ್ಜಿ ಅವರ ಭಾವಚಿತ್ರಕ್ಕೆ  ಪುಷ್ಪ ನಮನ ಸಲ್ಲಿಸಿ ಸಂಸದ‌ ಜಗದೀಶ ಶೆಟ್ಟರ್ ಮಾತನಾಡಿ 
ಒಂದೇ ದೇಶದಲ್ಲಿ 'ಎರಡು ಪ್ರಧಾನ, ಎರಡು ಸಂವಿಧಾನ ಮತ್ತು ಎರಡು ಧ್ವಜ' ಇರಲು ಸಾಧ್ಯವಿಲ್ಲ ಎಂದು ಕಾಶ್ಮೀರದ ಸಂಪೂರ್ಣ ವಿಲೀನಕ್ಕಾಗಿ ಅವರು ನಡೆಸಿದ ಹೋರಾಟ ಮತ್ತು ಬಲಿದಾನ ಇತಿಹಾಸದಲ್ಲಿ ಸದಾ ಅಮರ. ಅವರ ರಾಷ್ಟ್ರೀಯತಾವಾದದ ಆದರ್ಶಗಳು ಹಾಗೂ ದೇಶಪ್ರೇಮದ ತತ್ತ್ವಗಳು ನಮಗೆಲ್ಲರಿಗೂ ಸದಾ ದಾರಿದೀಪವಾಗಿವೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ ಕಾಶ್ಮೀರಕ್ಕೆ 370ನೇ ವಿದಿಯ ಮೂಲಕ ನೀಡಿದ್ದ ಪ್ರತ್ಯೇಕ ಸ್ಥಾನಮಾನವನ್ನ ರದ್ದು ಗೊಳಿಸಲು ಹೋರಾಡಿ ನಿಗೂಢವಾಗಿ ಶರೀರ ತ್ಯಜಿಸಿದ ಮಹಾನ ಚೇತನ ನಮ್ಮನ್ನು ಅಗಲಿ ಇಂದಿಗೆ 73 ವರ್ಷಗಳು ಗತಿಸಿವೆ ಆದರೆ ಅವರ ಮಹಾನ್ ಕಾರ್ಯ ಹಾಗೂ ಸಮಾಜದಲ್ಲಿ ಸಲ್ಲಿಸಿದ ನಿಸ್ವಾರ್ಥ ಸೇವೆ ಇಂದಿಗೂ ಭಾರತೀಯರ ಮನದಲ್ಲಿ ಅಚ್ಚಳಿಯದೆ ಉಳಿದಿವೆ ಎಂದು ಸ್ಮರಿಸಿದರು. 
       ಈ ಸಂದರ್ಭದಲ್ಲಿಮಾಜಿ ಶಾಸಕರಾದ ಸಂಜಯ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣ ಅಂಗಡಿ, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ,ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ, ಪ್ರಕೋಷ್ಠಗಳ ಸಂಯೋಜಕ ಮಹೇಶ ಮೋಹಿತೆ,ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲೇಶ ಕೋಲಕಾರ ಮುಖಂಡರಾದ ಮಂಜುನಾಥ ಪಮ್ಮಾರ, ಚೇತನ ಅಂಗಡಿ, ಸಾಮಾಜಿಕ ಜಾಲತಾಣ ಸಹ ಸಂಚಾಲಕ ಮನೋಜ ಪಾಟೀಲ, ವೀರಭದ್ರ ಪೂಜಾರಿ, ಶ್ವೇತಾ ಜಗದಾಳೆ, ಪ್ರವೀಣ ಮಾಳೇದವರ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಗ್ನಿವೀರ ಹುದ್ದೆಗೆ ಆಯ್ಕೆಮಳೆ ಅಭಾವ, ಸಮಸ್ಯೆ ಎದುರಿಸಲು ಸಜ್ಜಾಗಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆವಿಜಯಪುರ,ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಭಾಗಿತ್ವ ಅಗತ್ಯ: ಜಿಲ್ಲಾಧಿಕಾರಿ ಡಾ. ಆನಂದ್ ಕೆ.ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಭಾಗಿತ್ವ ಅಗತ್ಯ: ಜಿಲ್ಲಾಧಿಕಾರಿ ಡಾ. ಆನಂದ್ ಕೆ.ಕೆಎಲ್‌ಇ- ಕೃಷಿ ವಿಜ್ಞಾನ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ‘ಯುವ ಮನಸ್ಸುಗಳಿಗೆ ಹಣಕಾಸಿನ ಅರಿವು’ : ವಿಶೇಷ ಉಪನ್ಯಾಸ*ಬಿಜೆಪಿಯಿಂದ ಭಾರತೀಯ ಜನಸಂಘದ ಸ್ಥಾಪಕರಾದ ಡಾ.ಶ್ಯಾಮಪ್ರಸಾದ ಮುಖರ್ಜಿ ಸ್ಮರಣೆ*ಬೆಳಗಾವಿ ಸಹಿತ ಕರ್ನಾಟಕದ ಅಭಿವೃದ್ಧಿಪಡಿಸುವ ಗುರಿಯನ್ನೇ ಇಟ್ಟುಕೊಂಡಿದ್ದೇನೆ: ಸಂಸದ ಜಗದೀಶ್ ಶೆಟ್ಟರ್.ಬೆಳಗಾವಿಯಲ್ಲಿ 15 ದಿನಗಳ ಅಭಿನಯ ಸಹಿತ ರಂಗಸಂಗೀತ ತರಬೇತಿ ಶಿಬಿರ